ಕೊಪ್ಪಳ | ವಿಶ್ವವಿದ್ಯಾಲಯ ಸ್ಥಳಾಂತರಿಸಲು ಜಿಲ್ಲಾ ಬಚಾವೋ ಆಂದೋಲನ ಆಗ್ರಹ

Date:

ತಳಕಲ್ಲಿನ ಇಂಜಿನಿಯರಿಂಗ್ ಕಾಲೇಜಿನ ಎರಡನೆಯ ಅಂತಸ್ತಿನಲ್ಲಿ ನಡೆಯುತ್ತಿರುವ ಕೊಪ್ಪಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೋಟೆಲ್, ಹಾಸ್ಟೆಲ್ ಹಾಗೂ ಬಸ್ ನಿಲುಗಡೆ ಸೌಕರ್ಯ ಇರುವುದಿಲ್ಲ ಹಾಗಾಗಿ ಕೂಡಲೇ ವಿವಿ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಆಗ್ರಹಿಸಿದೆ.

ವಿಶ್ವವಿದ್ಯಾಲಯವನ್ನು ತಳಕಲ್ಲಿನಿಂದ ಕೊಪ್ಪಳಕ್ಕೆ ಸ್ಥಳಾಂತರಿಸುವ ಅದಕ್ಕೆ ಮೂಲಭೂತ ಸೌಲಭ್ಯ ಒದಗಿಸುವಂತೆ ಹಾಗೂ ಬಲ್ಡೊಟ್ ಕಂಪನಿ ವಿಸ್ತರಣೆ ಆಗದಂತೆ ಸರಕಾರ ಕ್ರಮ ವಹಿಸಬೇಕೆಂದು ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ, ಜಿಲ್ಲಾ ಶಿಕ್ಷಣ ಪ್ರೇಮಿಗಳ ಸಂಘಟನೆ ಹಾಗೂ ಜಿಲ್ಲಾ ಬಚಾವೋ ಆಂದೋಲನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿ ಮನವಿ ಸಲ್ಲಿಸಿ ಒತ್ತಾಯಿಸಿದರು.

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಕೊಪ್ಪಳದ ತಾಲೂಕ ದವಾಖಾನೆಯಲ್ಲಿ ಸ್ನಾತಕೋತ್ತರ ಕೇಂದ್ರ ನಡೆಯುತ್ತಿದ್ದಾಗ ಸಮೀಪದಲ್ಲಿ ಇಂದಿರಾ ಕ್ಯಾಂಟೀನ್ ಇತ್ತು. ವಿದ್ಯಾರ್ಥಿ–ವಿದ್ಯಾರ್ಥಿನಿಯರು ಆ ಕ್ಯಾಂಟೀನ್ ಸದ್ಭಳಿಸಿಕೊಮಡಿದ್ದರು. ಯಾವ ಸೂಚನೆಯೂ ಇಲ್ಲದೆ ವಿವಿ ಸ್ಥಳಾಂತರಿಸಿದರು. ಮೂಲ ಸೌಕರ್ಯದ ಕೊರತೆಯಿಂದ ಉನ್ನತ ಶಿಕ್ಷಣ ಪಡೆಯಲು ಪದವಿ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಬಚಾವೋ ಆಂದೋಲನದ ಸಂಚಾಲಕ ಡಿ.ಎಚ್.ಪೂಜಾರ ಮಾತನಾಡಿ, “ಕೊಪ್ಪಳದ ಸರ್ಕಾರಿ ಪದವಿ ಕಾಲೇಜಿನ ವಿಸ್ತರಣಾ ಕಟ್ಟಡ ಬೈಪಾಸ್ ರಸ್ತೆಯ ಸಮೀಪದಲ್ಲಿದ್ದು ಅಲ್ಲಿಗೆ ವಿಶ್ವವಿದ್ಯಾಲಯವನ್ನು ಸ್ಥಳಾಂತರಿಸಬಹುದು. ಶಾಸಕರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಶಾಸಕರು ಸ್ಥಳಾಂತರಕ್ಕೆ ‘ಆಕ್ಷೇಪ ಇಲ್ಲ’ ಎಂದು ಹೇಳಿದ್ದರು. ಆದರೂ, ವಿವಿ ಸ್ಥಳಾಂತರಕ್ಕೆ ವಿಳಂಭ ಯಾಕೆ? ಕೊಪ್ಪಳ ಜಿಲ್ಲಾ ಅಭಿವೃದ್ಧಿ ಜವಾಬ್ದಾರಿಯಿಂದ ಜನಪ್ರತಿನಿಧಿಗಳು ನುಣುಚಿಕೊಳ್ಳುತ್ತಿದೆಯೇ? ಶೈಕ್ಷಣಿಕ ಈ ವರ್ಷದಲ್ಲೇ ವಿವಿ ಸ್ಥಳಾಂತರಿಸಬೇಕು; ಇಲ್ಲದಿದ್ದರೆ ವಿದ್ಯಾರ್ಥಿಗಳೊಂದಿಗೆ ಸರಕಾರದ ವಿರುದ್ದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

ಕೆ.ಬಿ.ಗೋನಾಳ ಮಾತನಾಡಿ, “ಬಿಎಸ್‌ಪಿಎಲ್ ವಿಸ್ತರಿಸದಂತೆ ಮುಖ್ಯಮಂತ್ರಿಗಳಿಂದ ಪತ್ರವನ್ನು ತರಬೇಕಾದ ಜವಾಬ್ದಾರಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳ ಮೇಲಿದೆ. ನಾವು ಚುನಾವಣೆಯಲ್ಲಿ ಕೋಮುವಾದವನ್ನು ವಿರೋಧಿಸಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದನ್ನು ನೆನಪಿಸುತ್ತೆವೆ. ಎಮ್‌ಎಸ್‌ಪಿಎಲ್‌ ಕಂಪನಿ ಬಸಾಪುರದ ಸಾರ್ವಜನಿಕ ಕೆರೆ ಅತಿಕ್ರಮಿಸಿಕೊಂಡಿದೆ ಇದರ ಬಗ್ಗೆ ಸರಕಾರ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಮುದಕಪ್ಪ ಹೊಸಮನಿ, ಮಂಜುನಾಥ ಗೊಂಡಬಾಳ, ಬಸವರಾಜ್ ಶೀಲವಮತರ, ಶರಣು ಗಡ್ಡಿ, ಶರಣು‌ ಪಾಟೀಲ್, ಸರಣು ಶೆಟ್ಟರ, ಮಂಗಳೇಶ ರಾಟೋಡ್, ಕಾಶ್ಯಪ್ಪ ಛಲವಾದಿ, ಮಂಜುನಾಥ ಕೊತಬಾಳ, ಈಸ್ವರ ಹತ್ತಿ ಹಾಗೂ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...