ಕೊಪ್ಪಳ | ಕಾರ್ಖಾನೆ ವಿಸ್ತರಣೆ ವಿರೋಧಿಸಿ ಮತ್ತೊಂದು ಹೋರಾಟಕ್ಕೆ ಸಜ್ಜಾದ ಜಿಲ್ಲಾ ಬಚಾವೋ ಆಂದೋಲನ

Date:

ಬಲ್ಡೋಟಾ, ಬಿಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ಹಾಗೂ ಕೊಪ್ಪಳ ಜಿಲ್ಲೆಯ ಸುತ್ತ ನಿರ್ಮಿಸಿರುವ ಕಾರ್ಖಾನೆಗಳನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.

ಹೋರಾಟದ ರೂಪುರೇಷೆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ನಗರದ ವಾಣಿಜ್ಯೋದ್ಯಮಿಗಳು, ‌ಪರಿಸರಕ್ಕಾಗಿ ನಾವು ಸಂಘಟನೆ, ವಿವಿಧ ಹೋರಾಟ ನಿರತ ಸಂಘಗಳ ಪ್ರಮುಖರು ಬಲ್ಡೋಟ ಹಟಾವೋ, ಕೊಪ್ಪಳ ಬಚಾವೋ ಎನ್ನುವ ತೀರ್ಮಾನಕ್ಕೆ ಏಕಾಭಿಪ್ರಾಯ ವ್ಯಕ್ತಪಡಿಸಿದರು. ಬಹುತೇಕ ಪ್ರಮುಖರು ಗವಿ ಶ್ರೀಗಳ ಜೊತೆ ಚರ್ಚಿಸಿ ಅವರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ಜನಜಾಗೃತಿ ಮೂಡಿಸಲು ರೋಗ ಬಾಧಿತರ ಕಿರುಚಿತ್ರ ಪ್ರದರ್ಶನ ಮಾಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಅತೀ ಶೀಘ್ರದಲ್ಲಿ ಕಾರ್ಯಯೋಜನೆ ತಯಾರಿಸಿಕೊಳ್ಳಲು, ಗವಿ ಶ್ರೀಗಳನ್ನು ನಗರದ ಪ್ರಮುಖರು, ಪರಿಸರ ಹಿತರಕ್ಷಣಾ ವೇದಿಕೆ ಮುಖಂಡರು ಮತ್ತು ಕೊಪ್ಪಳ ಬಚಾವೋ ಆಂದೋಲನ ಸಮಿತಿ ಒಳಗೊಂಡು ಸಾಮೂಹಿಕ ನಾಯಕತ್ವದ ತಂಡ ಭೇಟಿ ಮಾಡಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 05 at 10.00.54 AM

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಕೊಪ್ಪಳಕ್ಕೆ ಏನೂ ದಕ್ಕಿಲ್ಲ, ಹೊಗೆ, ಧೂಳು ದಕ್ಕಿದೆ. ಸಮಯಕ್ಕೆ ಸರಿಯಾಗಿ ನಾವು ಹೋರಾಟ ಮಾಡಬೇಕು. ಇಲ್ಲದಿದ್ದರೆ ನಮ್ಮ ಆರೋಗ್ಯವನ್ನ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಈ ದೇಶಕ್ಕೆ ಸ್ವಾತಂತ್ರ್ಯ ಧೀರ್ಘ ಕಾಲದ ಹೋರಾಟದಿಂದ ಬಂದಿದೆ; ಹಾಗೆ ನಾವೂ ‘ಮಾಡು ಇಲ್ಲವೆ ಮಡಿ’ ಎಂಬ ಘೋಷ ವಾಕ್ಯದೊಂದಿಗೆ ಹೋರಾಟ ಮಾಡಬೇಕು. ಬಿಎಸ್‌ಪಿ‌ಎಲ್ ಸ್ಥಳಾಂತರ ಮಾಡಿ ಇಲ್ಲ ಕೊಪ್ಪಳವನ್ನಾದರೂ ಸ್ಥಳಾಂತರ ಮಾಡಿ” ಎಂದು ಅಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ಸಭೆಯಲ್ಲಿ ಮಹಾಂತೇಶ ಕೊತಬಾಳ, ಅಂದಣ್ಣ ಅಗಡಿ, ಸಿದ್ದಣ್ಣ ನಾಲ್ವಾಡ, ಡಾ. ಚಂದ್ರಶೇಖರ ಕರಮುಡಿ, ಮಹಾಂತೇಶ ಮಲ್ಲನಗೌಡರ್, ಶರಣು ಡೊಳ್ಳಿನ, ಕಾಶಪ್ಪ ಛಲವಾದಿ, ಬಿ. ಜಿ. ಕರಿಗಾರ, ವೈ.ಬಿ. ಬಂಡಿ, ನಿವೃತ್ತ ಪ್ರಾಂಶುಪಾಲ ರಾಜೂರ, ವಿಪಿನ್ ತಾಲೇಡಾ, ಮುದುಕಪ್ಪ, ರವಿ ಕಾಂತನವರ, ಮೌನೇಶ ಬಡಿಗೇರ, ಬಸವರಾಜ ಸೇರಿ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...