ಕೊಪ್ಪಳ | ಕಾರ್ಖಾನೆಗಳಲ್ಲಿ ಕಾರ್ಮಿಕರ ಶೋಷಣೆ; ಕೆಲಸದ ಭದ್ರತೆ, ಯೋಗ್ಯ ವೇತನ ನೀಡದೆ ಅನ್ಯಾಯ!

Date:

ಕಲ್ಯಾಣಿ-ಮುಕುಂದ, ಕಿರ್ಲೊಸ್ಕರ್, ಅಲ್ಟ್ರಾಟೆಕ್ ಇನ್ನಿತರ ಕಾರ್ಖಾನೆಗಳಲ್ಲಿ ವ್ಯಾಪಕವಾಗಿ ಕಾರ್ಮಿಕರ ಶೋಷಣೆ ಮಾಡಿ ಕೆಲಸದ ಭದ್ರತೆ, ಜೀವನ ಯೋಗ್ಯ ವೇತನ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಎಐಟಿಯುಸಿ ಕಾರ್ಯಕರ್ತರು ಆರೋಪಿಸಿದರು.

ಗ್ರಾಮದ ಸೇವಾಲಾಲ್ ಸರ್ಕಲ್‌ನಲ್ಲಿ ಗಿಣಿಗೇರ ನಾಗರಿಕ ಹೋರಾಟ ಸಮಿತಿ ಮತ್ತು ಕಟ್ಟಡ ಕಟ್ಟುವ ಮತ್ತು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಜಂಟಿಯಾಗಿ ಆಚರಿಸಿದ 139ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಲ್ಲಿ ಕಾರ್ಮಿಕರು ತಮ್ಮ ಕೆಲಸದ ಭದ್ರತೆಗೆ ಒತ್ತಾಯಿಸಿದರು.

ಕಾರ್ಮಿಕ ಮುಖಂಡ ನೂರ್ ಸಾಬ ಹೊಸಮನಿ ಮಾತನಾಡಿ, “ಅಂದು ದುಡಿಯುವ ಸಮಯ ಎಂಟು ಗಂಟೆ ಅವಧಿಗೋಸ್ಕರ ಹಾಗೂ ಜೀವನ ಭದ್ರತೆಗಾಗಿ ಕಾರ್ಮಿಕರು ಹೋರಾಟ ಕಟ್ಟಿ ಇಂದಿಗೂ ಸ್ಪೂರ್ತಿಯಾಗಿದ್ದಾರೆ. ಅವರ ದಿರೋದಾತ್ತ ಹೋರಾಟವನ್ನು ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವಾಗಿ ವಿಶ್ವದ ಎಲ್ಲ ದುಡಿಯುವ ವರ್ಗದ ಜನ ಆಚರಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಮುಖಂಡ ಶರಣು ಗಡ್ಡಿ ಮಾತನಾಡಿ, “ಗಿಣಿಗೇರಿ ಸುತ್ತಮುತ್ತ ದೈತ್ಯ ಕಾರ್ಖಾನೆಗಳಿದ್ದರೂ ಸ್ಥಳೀಯ ಯುವಕರಿಗೆ ಕಾಯಂ ಕೆಲಸ ನೀಡುತ್ತಿಲ್ಲ. ಈಗಾಗಲೇ ಹದಿನೈದು ಇಪ್ಪತ್ತು ವರ್ಷಗಳಿಂದ  ಗ್ರಾಮದ ಸುತ್ತಲಿನ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಬೇಕು. ಕಾರ್ಮಿಕರಿಗೆ ಸಿಗುವಂತ ಕನಿಷ್ಠ ವೇತನ ಸೇರಿದಂತೆ ಎಲ್ಲ ಹಕ್ಕುಗಳನ್ನು ಗೌರವಿಸಿ ಜೀವನ ಭದ್ರತೆ ಒದಗಿಸಬೇಕು. ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿದ ಎಲ್ಲ ಯುವಕರಿಗೆ ಕೂಡಲೇ ಕೆಲಸದ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಇನ್ನೊಂದಡೆ ಎಲ್ಲ ಸರ್ಕಾರಗಳು ಕಾರ್ಮಿಕರ ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ ಮಾಡಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿ ಮಾಡುತ್ತಿವೆ. ದುಡಿಯುವ ಸಮಯ ಸೇರಿದಂತೆ ಕನಿಷ್ಠ ವೇತನ ನಿಗದಿ ಮಾಡದೆ ಕೇವಲ ಗುತ್ತಿಗೆ-ಹೊರಗುತ್ತಿಗೆ, ಸ್ಕೀಮ್ ನೌಕರಿ ಸೇರಿದಂತೆ ಇತರ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ಮಾಡಿ ದುಡಿಯುವ ವರ್ಗವನ್ನು ವ್ಯಾಪಕವಾಗಿ ಶೋಷಣೆ ಮಾಡಲಾಗುತ್ತಿದೆ. ಪ್ರಪಂಚದಲ್ಲಿ ಎರಡೇ ವರ್ಗಗಳಿರುವುದು ಒಂದು ಬಂಡವಾಳಶಾಹಿ ವರ್ಗ ಹಾಗೂ ಕಾರ್ಮಿಕ ವರ್ಗ. ಕಾರ್ಮಿಕರು, ವರ್ಗ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ನೈಜ ಕ್ರಾಂತಿಕಾರಿ ಸಂಘಟನೆಯನ್ನು ಬಲಪಡಿಸಬೇಕು” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ಎಟಿಎಂ ಶುಲ್ಕ ಹೆಚ್ಚಳದಿಂದ ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ಅವಧಿ ಇಳಿಕೆವರೆಗೆ: ಆರ್ಥಿಕ ಬದಲಾವಣೆಗಳ ಪರಿಣಾಮಗಳೇನು?

ಮಂಗಳೇಶ ರಾತೋಡ್ ಮಾತನಾಡಿ, “ಗ್ರಾಮದ ಸಮಸ್ಯೆಗಳ ವಿರುದ್ಧ ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಹೆಸರಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿಗಾಗಿ ನಡೆದ ಹೋರಾಟ ಯಸಶ್ವಿಯಾಗಿದೆ. ಸಾರ್ವಜನಿಕ ಆರೋಗ್ಯ, ಪರಿಸರ ಮಾಲಿನ್ಯ, ಸ್ಥಳೀಯ ಯುವಕರಿಗೆ ಉದ್ಯೋಗ ಭದ್ರತೆ ಇತರ  ಸಮಸ್ಯೆಗಳ ಪರಿಹಾರಕ್ಕಾಗಿ ನಿತ್ಯ ನಿರಂತರ ನಡೆಯುವ ಹೋರಾಟವನ್ನು ಬಲಪಡಿಸುವ ಅಗತ್ಯವಿದೆ” ಎಂದರು.

ಕಾರ್ಮಿಕ ಮುಖಂಡರಾದ ರಾಜಪ್ಪ, ಚವ್ಹಾಣ, ಅಶೋಕ ಗುಜಮಾಗಡಿ, ಸಮಿತಿ ಸದಸ್ಯರಾದ ಸುರೇಶ ಕಲಾಲ್, ಹನುಮಂತ ಕಟೀಗಿ, ಯುವ ಮುಖಂಡ ಬಸವರಾಜ ಬಂಗಿ, ಮಾರುತಿ, ಹನುಮಂತ ಕನಕಾಪುರ, ಮಲ್ಲಿಕಾರ್ಜುನ ಹಲಿಗೇರಿ, ರಾಘು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...