ಕೊಪ್ಪಳ | ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಿಂದ ಕೈ ಬಿಡಬೇಕು: ರೈತ ಸಂಘ

Date:

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ಕಂಗಲಾಗಿದ್ದು, ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ವತಿಯಿಂದ ಕಾರಟಗಿ ನವಲಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಕೊಪ್ಪಳ ಜಿಲ್ಲೆಯ ಹಲವು ತಾಲೂಕುಗಳಲ್ಲಿ ನೋಟಿಸ್ ಕಳಿಸಿದ್ದು, ರೈತರಲ್ಲಿ ಆತಂಕಗಳನ್ನು ಸೃಷ್ಟಿಮಾಡಿದಂತಹ ಈ ವಕ್ಫ್ ಮಂಡಳಿಯು ಅವಾಂತರ ಮಾಡಿದೆ. ಇದರಿಂದ ಎಲ್ಲ ರೈತರಿಗೂ ತೊಂದರೆಯಾಗಿದ್ದು, ಕೂಡಲೇ ಇದನ್ನು ನಿಲ್ಲಿಸಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿಯೆಂದು ಇರುವುದನ್ನು ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

ರೈತ ಸಂಘಟನೆಯ ಮುಖಂಡ ಶರಣಪ್ಪ ದೊಡ್ಡಮನಿ ಮಾತನಾಡಿ, “ವಕ್ಫ್ ಬೋರ್ಡ್, ರಾಜ್ಯದಲ್ಲಿ ರೈತರ ಭೂಮಿ, ದೇವಸ್ಥಾನ, ಶಾಲೆಗಳು, ಮಠ ಮಂದಿರಗಳ ಆಸ್ತಿಗಳನ್ನು ಕಬಳಿಕೆ ಮಾಡುತ್ತಿದೆ. 974ರಲ್ಲಿ ವಕ್ಫ್‌ ಬೋರ್ಡ್ ಸ್ಥಾಪನೆಯಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಅದನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದಲ್ಲಿ 1995 ರಂದು ಆದೇಶ ಹೊರಡಿಸಿದ್ದು, 2013ರಲ್ಲಿ ಜಾರಿಗೆ ಬಂದಿರುವ ವಕ್ಫ್‌ ಮಂಡಳಿಯನ್ನ ರದ್ದುಪಡಿಸಿ, ರೈತರ ಜಮೀನು ಉಳಿಸಿ, ರೈತರ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ರೈತರ ಪಹಣಿಗಳಲ್ಲಿ ಅಕ್ರಮವಾಗಿ ಕಾನೂನು ಬಾಹಿರವಾಗಿ ವಕ್ಫ್ ಆಸ್ತಿಯೆಂದು ನಮೂದಿಸಿದ್ದು, ಕೂಡಲೇ ಅದನ್ನು ತೆಗೆದುಹಾಕಬೇಕು” ಎಂದರು.

“ವಕ್ಫ್ ಇಲಾಖೆಯ 1974ರ ಗೆಜೆಟ್‌ನಲ್ಲಿರುವ ರೈತರ ಆಸ್ತಿಗಳನ್ನು ತೆಗೆದು ಹಾಕಬೇಕು. ವಕ್ಫ್ ಇಲಾಖೆಯಿಂದ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲ ರೈತರ ಜಮೀನುಗಳಿಗೆ ತೊಂದರೆ ನೀಡುವುದಿಲ್ಲ ಯಾವುದೇ ಖಾತೆಯನ್ನು ಬದಲಾವಣೆ ಮಾಡುವುದಿಲ್ಲವೆಂದು ಆದೇಶ ಮತ್ತು ಮಾರ್ಗಸೂಚಿ ಹೊರಡಿಸಬೇಕು” ಎಂದರು.

“ರಾಜ್ಯದಲ್ಲಿರುವ ಕೆಲ ರೈತರ ಜಮೀನಿನಲ್ಲಿ ಇನಾಂ, ವಕ್ಫ್ ಎಂದು ನಮೂದಿಸಿದ್ದನ್ನು ಸರ್ಕಾರ ತಕ್ಷಣ ತೆಗೆದು ಹಾಕಬೇಕು. ವಕ್ಫ್ ಹೆಸರಿನಲ್ಲಿನ ರೈತರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಇದರಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗುತ್ತಿದ್ದು, ಇದನ್ನು ಇಲ್ಲಿಗೆ ಕೈಬಿಡಬೇಕು. ಅಲ್ಲದೆ ರಾಜ್ಯ ಸರ್ಕಾರ ಈ ಬಗ್ಗೆ ರೈತರಲ್ಲಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದರು.

“ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ 257 ಎಕರೆ, ಗಂಗಾವತಿಯಲ್ಲಿ 167 ಎಕರೆ, ಕಾರಟಗಿ ತಾಲೂಕಿನಲ್ಲಿ 149 ಎಕರೆ ಜಮೀನು ಇದ್ದು ತಾಲೂಕಿನಲ್ಲಿ 997 ಎಕರೆ ಕುಕನೂರು ತಾಲೂಕಿನಲ್ಲಿ 974 ಎಕರೆ, ಕುಷ್ಟಗಿ ತಾಲೂಕಿನಲ್ಲಿ 67 ಎಕರೆ, ಯಲಬುರ್ಗಾ ತಾಲೂಕಿನಲ್ಲಿ 324 ಎಕರೆ ಜಮೀನಿದೆಯೆಂದು ಕೊಪ್ಪಳ ಜಿಲ್ಲಾ ವಕ್ಫ್ ಇಲಾಖೆ ಹೇಳುತ್ತಿದೆ. ಜಿಲ್ಲೆಯ ಎಲ್ಲ ಆಸ್ತಿಗಳನ್ನು ವಕ್ಫ್ ಇಲಾಖೆಯಿಂದ ಕೈಬಿಡಬೇಕು ಮತ್ತು ಇಲಾಖೆಯಿಂದ ಕೈ ಬಿಟ್ಟ ಬಗ್ಗೆ ರೈತರಿಗೆ ಆದೇಶ ಪ್ರತಿಯನ್ನು ನೀಡಿ ಮಾರ್ಗಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.

“ಮಣ್ಣಿನ ಮಕ್ಕಳ ಬಾಯಲ್ಲಿ ಮಣ್ಣು ಹಾಕಲು ಯಾವುದೇ ಸರ್ಕಾರ ಪ್ರಯತ್ನಪಟ್ಟರೆ ಅವರ ಮುಂದಿನ ರಾಜಕೀಯ ಜೀವನದಲ್ಲಿ ಮಣ್ಣಿನ ಮಕ್ಕಳು ಅವರಿಗೆ ಮಣ್ಣುಮುಕ್ಕಿಸುತ್ತಾರೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನೆಲಮಂಗಲ | ಕೃಷಿ ಭೂಮಿ ಸ್ವಾಧೀನ ಕೈಬಿಟ್ಟು, ಕೃಷಿಯನ್ನೇ ಅಭಿವೃದ್ಧಿಪಡಿಸಿ ; ರೈತರ ಆಗ್ರಹ

“ರಾಜ್ಯದ ರೈತರ ಹಿತ ಕಾಪಾಡಬೇಕು. ಒಂದು ವೇಳೆ ಇದರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಮಾನಗಳಲ್ಲಿ ರಾಜ್ಯಮಟ್ಟದಲ್ಲಿ ರಾಜ್ಯದ ಸಂಘದ ಮೂಲಕ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮುಸ್ತಫ ಮುಲ್ಲಾ, ಪಂಪಣ್ಣ ನಾಯಕ್, ಮರಿಸ್ವಾಮಿ, ಬರ್ಮಣ್ಣ ದೊಡ್ಡನಗೌಡ, ಸಿದ್ದು, ರಾಮಣ್ಣ, ಜಡಿಯಪ್ಪ ಸೇರಿದಂತೆ ಹಲವಾರು ರೈತರು, ರೈತ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...