ಕೊಪ್ಪಳ | ನೀರಿಗಾಗಿ ರೈತರ ಪ್ರತಿಭಟನೆ: ಸಚಿವ ಶಿವರಾಜ್‌ ತಂಗಡಗಿ ರಾಜೀನಾಮೆಗೆ ಒತ್ತಾಯ

Date:

ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 20 ರವರೆಗೆ ನೀರು ಬಿಡಲು ಒತ್ತಾಯಿಸಿ ಹಾಗೂ ರೈತರ ಹಿತಾಸಕ್ತಿ ಕಡೆಗಣಿಸಿದ ಸಚಿವ ಶಿವರಾಜ್ ಎಸ್ ತಂಗಡಗಿಯವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಕಾರಟಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಪ್ರತಿಭಟನೆ ನಡೆಸಿತು.

“2024ರ ಆಗಸ್ಟ್‌ನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು. ಆದರೆ, ಹಿಂಗಾರು ಹಂಗಾಮಿನ ಎರಡನೇ ಬೇಸಿಗೆ ಬೆಳೆಗೆ ಎಡದಂಡೆ ಭಾಗದ ಪಾಲಿನ ನೀರು ಇದ್ದರೂ ನೀರು ಹರಿಸಲು ಅಧಿಕಾರಿಗಳು ಮತ್ತು ಸಚಿವರು ನಿರ್ಲಕ್ಷ್ಯ ಧೋರಣೆವಹಿಸಿದರು” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

“ರಾಜಕಾರಣಿಗಳು ಮತ್ತು ಅಧಿಕಾರಿಗಳು ನೀರನ್ನು ಜಲಾಶಯದ ಮೇಲ್ಭಾಗದ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಜಲಾಶಯದ ನೀರು ಹಂಚಿಕೆಯಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡವನ್ನು ರಚಿಸಿ ಎಡದಂಡೆ ಭಾಗ ಹಾಗೂ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕ ನೀರು ನೀಡಲು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 10 at 3.12.50 PM 1

“ಭದ್ರಾ ಜಲಾಶಯದ ಎಡದಂಡೆ ಭಾಗದಲ್ಲಿ ಮುನಿರಾಬಾದ್‌ನಿಂದ ರಾಯಚೂರು ವರೆಗೆ ಸುಮಾರು 100ಕ್ಕೂ ಹೆಚ್ಚು ಉಪ ಕಾಲುವೆಗಳು ಇದ್ದು, ಪ್ರತಿಯೊಂದು ಉಪ ಕಾಲುವೆಗಳ ಕೊನೆ ಭಾಗದ ರೈತರಿಗೆ ಬೆಳೆ ಕೈಗೆ ಬರಬೇಕಾದರೆ ಇನ್ನೂ 15 ರಿಂದ 20 ದಿನಗಳು ಬೇಕಾಗುತ್ತದೆ. ಆದರೆ, ರಾಜ್ಯ ಸರಕಾರ 123ನೇ ನೀರಾವರಿ ಸಲಹಾ ಸಮಿತಿಯಲ್ಲಿ ಏಪ್ರಿಲ್ 10ವರೆಗೆ ನೀರು ಬಿಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ. ಇದು ರೈತರ ಬದುಕಿಗೆ ಬರೆ ಹಾಕಿದಂತೆ. ಏಪ್ರಿಲ್ 10 ಕ್ಕೆ ನೀರು ನಿಲ್ಲಿಸಿದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಹಾಗಾಗಿ ಏಪ್ರಿಲ್ 20ರವರೆಗೆ ನೀರು ಬಿಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ನಗರದ ಕನಕದಾಸ ವೃತ್ತದಲ್ಲಿ ಪ್ರತಿಭಟನಾನಿರತ ರೈತರನ್ನು ಪೊಲೀಸರು ತಡೆಯಲು ಮುಂದಾದಾಗ.. ಕ್ರಿಮಿನಾಶಕ ಸೇವಿಸಲು ಕೆಲ ರೈತರು ಮುಂದಾಗಿದ್ದು, ಕೆಲವರನ್ನು ಪೊಲೀಸರು ಬಂಧಿಸಿದರು. ಇಬ್ಬರ ನಡುವಿನ ಮಾತಿನ ಜಟಾಪಟಿಯಿಂದ ಬಿಗುವಿನ ವಾತಾವರಣ ಸೃಷ್ಟಿಯಾಗಿ ಬಳಿಕ ತಿಳಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...