ಕೊಪ್ಪಳ | ರೈತರ ನಿರ್ಲಕ್ಷ್ಯ ಸಲ್ಲದು, ಕೂಡಲೇ ಬೇಡಿಕೆ ಈಡೇರಿಸಬೇಕು: ದೊಡ್ಡ ಬರಮಣ್ಣರ

Date:

ಬೆಳೆ ನಷ್ಟ, ಸಾಲದ ಬಾಧೆ ಹಾಗೂ ಮಾರುಕಟ್ಟೆಯ ಅನ್ಯಾಯದ ವಿರುದ್ಧವಾಗಿ ಗಂಗಾವತಿಯಲ್ಲಿ ರೈತರು ಧ್ವಜ ಹಿಡಿದು ಬೀದಿಗಿಳಿದರು. ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ದೆಹಲಿ ನೇತೃತ್ವದೊಂದಿಗೆ ಗಂಗಾವತಿಯಲ್ಲಿ ನೂರಾರು ರೈತರು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳ ಮೂಲಕ ಆಗ್ರಹಿಸಿದರು.

ಗಂಗಾವತಿಯಲ್ಲಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ದೆಹಲಿಯಿಂದ ನೂರಾರು ರೈತರು ತಮ್ಮ ಮೂಲಭೂತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಭಾಕ್ರಾಂಕಿಸೇ ಜಿಲ್ಲಾ ಅಧ್ಯಕ್ಷ್ಯ ದೊಡ್ಡ ಬರಮಣ್ಣರ ಮಾತನಾಡಿ, “ಸರ್ಕಾರ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದರೆ ಅದು ಗ್ರಾಮೀಣ ಆರ್ಥಿಕತೆಯ ಕುಸಿತಕ್ಕೆ ಕಾರಣವಾಗುತ್ತದೆ. ನಿತ್ಯವೂ ರೈತರ ಆತ್ಮಹತ್ಯೆಯಿಂದ ದಿಕ್ಕೆಟ್ಟಿದ್ದಾರೆ. ಆದರೆ ಸರ್ಕಾರ ಕೇವಲ ಭರವಸೆಯ ಮಾತುಗಳನ್ನೇ ನೀಡುತ್ತಿದೆ. ಬೆಳೆಹಾನಿ ಪರಿಹಾರ, ಸಾಲಮನ್ನಾ, ಬೆಂಬಲ ಬೆಲೆ ಇವು ರೈತರ ಜೀವಾಳಕ್ಕೆ ಸಂಬಂಧಿಸಿದ ಬೇಡಿಕೆಗಳು. ಈ ಬೇಡಿಕೆಗಳನ್ನು ತಕ್ಷಣ ಪೂರೈಸದಿದ್ದರೆ, ರಾಜ್ಯವ್ಯಾಪಿ ಬೃಹತ್ ಹೋರಾಟ ಆರಂಭಿಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾಕೃತಿಕ ವಿಕೋಪದಿಂದ ಬೆಳೆ ಹಾನಿಯಾದ ರೈತರಿಗೆ ಎಕರಗೆ ಕನಿಷ್ಠ ₹25,000 ಪರಿಹಾರ ನೀಡಬೇಕು. ಬೆಳೆ ವಿಮಾ ಯೋಜನೆಗಳು ನಿಜವಾದ ರೈತರಿಗೆ ತಲುಪುವಂತೆ ಕಡ್ಡಾಯವಾಗಿ ಜಾರಿಗೆ ತರಬೇಕು. ರೈತರಿಗೆ ಉಚಿತ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಔಷಧಿಗಳನ್ನು ಒದಗಿಸಬೇಕು. ಸಾಲಮನ್ನಾ ತಕ್ಷಣ ಜಾರಿಗೆ ಬರಬೇಕು; ರೈತರಿಗೆ ಹೊಸ ಸಾಲ ವಿತರಣೆ ಸುಲಭವಾಗಬೇಕು. ಗ್ರಾಮೀಣ ಉದ್ಯೋಗ ಯೋಜನೆಗಳನ್ನು ಬಲಪಡಿಸಿ ನಿರುದ್ಯೋಗ ನಿವಾರಣೆ ಮಾಡಬೇಕು. ಎಲ್ಲ ಬೆಳೆಗಳಿಗೆ MSP(ಕನಿಷ್ಠ ಬೆಂಬಲ ಬೆಲೆ) ನಿಗದಿ ಮಾಡಿ, ಖರೀದಿ ಖಚಿತಪಡಿಸಬೇಕು. ರೈತರು ಖಾಸಗಿ ಹಣಕಾಸು ಸಂಸ್ಥೆಗಳ ಬಲೆಗೆ ಸಿಲುಕದಂತೆ ಸಹಕಾರ ಮತ್ತು ಸರ್ಕಾರಿ ಬ್ಯಾಂಕ್‌ಗಳ ಮೂಲಕವೇ ಸಾಲ ವಿತರಣೆಯಾಗಬೇಕು ಹಾಗೂ ರೈತರ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರವಲ್ಲ, ಶಾಶ್ವತ ನೀತಿ ಕ್ರಮಗಳು ರೂಪುಗೊಳ್ಳಬೇಕು” ಎಂಬುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಜಾತಿಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಸಮುದಾಯಕ್ಕೆ ಮಂಗಲನಾಥ ಸ್ವಾಮೀಜಿ ಮನವಿ

ಇದೇ ವೇಳೆ, ಮನವಿಯನ್ನು ಸ್ವೀಕರಿಸಿದ ಸ್ಥಳೀಯ ಅಧಿಕಾರಿಗಳು, “ಬೇಡಿಕೆಗಳನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು” ಎಂದು ಭರವಸೆ ನೀಡಿದರು. ಆದರೆ, ರೈತರು ಭರವಸೆಗಳನ್ನು ಕೇಳಿ ಸಾಕಾಗಿದೆ, ಈಗ ರೈತರ ಮೂಲ ಬೇಡಿಕೆಯನ್ನು ಈಡೇರಿಸಲು ನಿಜವಾದ ಕ್ರಮವಹಿಸಬೇಕೆಂದು ಗಟ್ಟಿಯಾಗಿ ಒತ್ತಾಯಿಸಿದರು.

ರಾಷ್ಟ್ರೀಯ ಅಧ್ಯಕ್ಷರಾದ ಎಂ ಎಂ ಕುಕನೂರ್, ನಾಗರಾಜ್ ಬಾವಿಕಟ್ಟಿ, ಜಿಲ್ಲಾ ಗೌರವ ಅಧ್ಯಕ್ಷ ದೇವಪ್ಪ ಹಳ್ಳಿಗುಡಿ, ಜಿಲ್ಲಾ ಉಪಾಧ್ಯಕ್ಷ ಹನ್ಮಂತಪ್ಪ ಬೇವೂರ್ ಸೇರಿದಂತೆ ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...