ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

Date:

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರು ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮರಿಯಮ್ಮ ಮೂಲತ ಅಗೋಲಿ ಗ್ರಾಮದವರು. ವಿಠಲಾಪುರ ಗ್ರಾಮದಲ್ಲಿ ಅಜ್ಜಿ ಮನೆ ಇರುವುದರಿಂದ ಅವಾಗವಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಗ್ರಾಮದ ಯುವಕ ಹನುಮಯ್ಯ ಪರಿಚಯವಾಗಿತ್ತು.‌ಈ ಪರಿಚಯ ಪ್ರೀತಿಗೆ ತಿರುಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001541306

ಹನುಮಯ್ಯ ಎಸ್ ಟಿ ಸಮುದಾಯಕ್ಕೆ ಸೇರಿದ ಯುವಕ. ಅಂತರ್ಜಾತಿಯ ಕಾರಣದಿಂದಾಗಿ ಮರಿಯಮ್ಮ ಹಾಗೂ ಹನುಮಯ್ಯ 2023ರ ಏಪ್ರಿಲ್‌ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ, ಬಳಿಕ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಯುವತಿಗೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.‌ ಅಲ್ಲದೇ, ವರದಕ್ಷಿಣೆ ತರುವಂತೆ ಕೂಡ ಪೀಡಿಸುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ.

ಯುವತಿ ಮಾದಿಗ ಸಮುದಾಯಕ್ಕೆ ಸೇರಿದವಳೆಂಬ ಎಂಬ ಕಾರಣಕ್ಕೆ ಮನೆಯ ಸಮೀಪವೇ ಬೇರೆಯೇ ಶೆಡ್ ಹಾಕಿ ಅಡುಗೆ ಮಾಡುವಂತೆ ಸೂಚಿಸಿದ್ದಲ್ಲದೇ, ನಾವು ಯಾರೂ ನೀನು ಮಾಡಿದ ಅಡುಗೆ ತಿನ್ನಲಾರೆವು ಎಂದು ಅಸ್ಪೃಶ್ಯತೆ ಆಚರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ಎಲ್ಲದಕ್ಕೂ ಜಾತಿಯ ಕಾರಣವೊಡ್ಡಿ ಕುಟುಂಬದಿಂದ ದೂರವಿಟ್ಟು, ಹಿಂಸೆ ನೀಡುತ್ತಿದ್ದರು ಎಂದು ಯುವತಿ ಮರಿಯಮ್ಮ ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಈ ನಡುವೆ ಯುವತಿಗೆ ಯುವಕನ ಕುಟುಂಬದ ಮಂದಿ ಬರ್ಬರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಯುವತಿಯ ಸಾವಾಗಿದೆ. ಕೊಲೆ ಮಾಡಿದ ಬಳಿಕ ಯಾವುದೇ ಅನುಮಾನ ಬಾರದಿರಲು ವಿಷವುಣಿಸಿದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

ಆ ಬಳಿಕ ಯುವಕನ ಕುಟುಂಬದವರು ಯುವತಿಯ ಕುಟುಂಬಕ್ಕೆ ಕರೆ ಮಾಡಿ, ‘ನಿಮ್ಮ ಮಗಳು ಜಮೀನಿನಲ್ಲಿ ವಿಷ ಕುಡಿದಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದೆವು. ಅಲ್ಲಿ ಆಕೆಯ ಸಾವಾಗಿದೆ’ ಎಂದು ತಿಳಿಸಿರುವುದಾಗಿ ಯುವತಿಯ ತಂದೆ ಗಂಗಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವಿಷಯ ತಿಳಿದ ನಂತರ ವಿಠಲಾಪುರ ಗ್ರಾಮಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ, ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.‌

ಯುವತಿಯ ತಂದೆ ಗಾಳೆಪ್ಪ, ಯುವಕನ ಕುಟುಂಬದ 13 ಮಂದಿಯ ಮೇಲೆ ಕೊಲೆ ಆರೋಪ ಹೊರಿಸಿದ್ದರಿಂದ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...