ಕೊಪ್ಪಳ | ಬಲ್ಡೋಟಾ ವಿಸ್ತರಣೆ ವಿರುದ್ಧ ಗವಿ ಶ್ರೀಗಳು ದೃಢ ನಿಲುವು ತಳೆಯಬೇಕು: ಜಂಟಿ ಕ್ರಿಯಾ ವೇದಿಕೆ ಮನವಿ

Date:

ಕೊಪ್ಪಳದ ಸುತ್ತಮುತ್ತ ತಲೆಯೆತ್ತಿರುವ ಕಾರ್ಖಾನೆಗಳ ವಿರುದ್ಧ, ಬಲ್ಡೋಟಾ ವಿಸ್ತರಣೆಯನ್ನು ವಿರೋಧಿಸಲು ಹಾಗೂ ಹೊಸ ಕಂಪನಿಗಳನ್ನು ಜಿಲ್ಲೆಯಲ್ಲಿ ಸ್ಥಾಪನೆಯಾಗದಂತೆ ತಡೆಯಲು ಗವಿ ಶ್ರೀಗಳು ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿಯಾಗಿ ಮನವಿ ಮಾಡಿವೆ.

ಬಲ್ಡೋಟಾ ವಿಸ್ತರಣೆ ಹಾಗೂ ಮುಕುಂದ ಸುಮಿ ಹೊಸ ಕಾರ್ಖಾನೆಗಳ ಸ್ಥಾಪನೆ ವಿರೋಧಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹವನ್ನು ಅ.31ರಿಂದ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಧರಣಿಯನ್ನು ಗವಿ ಶ್ರೀಗಳು ಬೆಂಬಲಿಸಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

“ಬಲ್ಡೋಟ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಷಿಂಡಿಯಾ ಮುಂತಾದ ಈ ಕಾರ್ಖಾನೆಗಳು 20 ಹಳ್ಳಿಗಳ ಸುತ್ತ ಸ್ಪಾಂಜ್ ಐರನ್, ಪಲ್ಲೆಟ್, ಉಕ್ಕು, ಸಿಮೆಂಟ್, ಕಾಸ್ಟಿಂಗ್, ವಿಷ ರಸಾಯನ, ಕೆಮಿಕಲ್ ಗೊಬ್ಬರ, ಸುಣ್ಣ, ಸಿಮೆಂಟ್, ಇಂಡಸ್ಟ್ರೀಯಲ್ ಗ್ಯಾಸ್, ಕಲ್ಲಿದ್ದಲು ಉರಿಸಿ ವಿದ್ಯುತ್, ಹಾಲಿನ ಪದಾರ್ಥ ಉತ್ಪಾದನೆ, ಮಾಡುತ್ತಾ ಪರಿಸರ ಹಾನಿ ಮಾಡುತ್ತಿವೆ. ಇವುಗಳ ವಿಸ್ತರಣೆ, ಹೊಸ ಕಂಪನಿಗಳ ಸ್ಥಾಪನೆಯಾಗದಂತೆ ತಡೆಯಲು ತಾವು ಮುಂದಾಳತ್ವ ವಹಿಸಬೇಕು” ಎಂದು ಗವಿ ಶ್ರೀಗಳಿಗೆ ವಿನಂತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 09 at 12.27.18 PM

ಫೆಬ್ರುವರಿ 24ರಂದು ತಮ್ಮ ಮುಂದಾಳತ್ವದಲ್ಲಿ ಸಾವಿರಾರು ಜನರ ಕಾರ್ಖಾನೆಗಳ ತೊಲಗಿಸಲು ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಎಸ್‌ಪಿಎಲ್ ವಿಸ್ತರಣೆ ನಿಲ್ಲಿಸಲು ಹಾಗೂ ಸರಕಾರದಿಂದ ಆದೇಶ ಪ್ರತಿ ತರುವಂತೆ ಬೇಡಿಕೆಗಳನ್ನು ಜನಪ್ರತಿನಿಧಿಗಳಿಗೆ ಆದೇಶದ ಜೊತೆ ಜವಾಬ್ದಾರಿಯನ್ನೂ ವಹಿಸಿದ್ದರಿ. ಇದಕ್ಕೆ ಒಪ್ಪಿಕೊಂಡ ಜನಪ್ರತಿನಿದಿನಗಳು ಆ ಕೆಲಸ ಮಾಡಿಲ್ಲ. ಆದ್ದರಿಂದ ಜನಪ್ರತಿನಿಧಿಗಳನ್ನು ತಮ್ಮಲ್ಲಿಗೆ ಕರೆಯಿಸಿಕೊಂಡು ತಾವು ಜಿಲ್ಲೆಯ ಜನರ ಪರವಾಗಿ ಕಂಪನಿ ವಿಸ್ತರಣೆ ಶಾಶ್ವತವಾಗಿ ರದ್ದುಗೊಳಿಸುವ ಆದೇಶ ತರಬೇಕೆಂದು ಜನಪ್ರತಿನಿಧಿಗಳು ಮತ್ತೊಮ್ಮೆ ಆಗ್ರಹಿಸಬೇಕು ಎಂದರು.

ಇದನ್ನೂ ಓದಿ: ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಈ ವೇಳೆ ಅಲ್ಲಮಪ್ರಭು ಬೆಟ್ಟದೂರು, ಕೆ ಬಿ ಗೋನಾಳ, ಗಾಳೆಪ್ಪ ಮುಳಗಿ, ಮಂಜುನಾಥ ಗೊಂಡಬಾಳ, ಮುದಕಪ್ಪ ಹೊಸಮನಿ, ಶರಣು ಗಡ್ಡಿ, ಸರಣು ಪಾಟೀಲ್, ಮಂಗಳೇಶ ರಾಠೋಡ, ಮಹಂತೇಶ ಎಮ್ ಕೆ ಸಾಹೇಬ್, ಶಿವಪ್ಪ ಹಡಪದ, ಎಸ್ ಎ ಗಫಾರ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...