ಕೊಪ್ಪಳ | ಸಂಗೀತ, ನೃತ್ಯ ಯುವಪ್ರತಿಭೆ ಆಕಾಡೆಮಿಗಳಿಗೆ ಸರ್ಕಾರ ನೆರವಾಗಬೇಕು:‌ ಎನ್ ನರೇಂದ್ರಬಾಬು

Date:

ಸರ್ಕಾರ ಪ್ರತಿಭಾವಂತ ಯುವಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆ ಪಸರಿಸುವ, ಸಂಗೀತ, ನೃತ್ಯ ಪರಂಪರೆಯನ್ನು ಬೆಳೆಸುವ ದೃಷ್ಟಿಯಿಂದ ಕರ್ನಾಟಕದಾದ್ಯಂತ ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಮುನ್ನಡೆಸಬೇಕು ಎಂದು ಸಂಗೀತ ಆಕಾಡೆಮಿ ರೆಜಿಸ್ಟ್ರಾರ್ ಎನ್ ನರೇಂದ್ರಬಾಬು ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಗರದ ಐಎಂಎ ಹಾಲ್‌ನಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಸಂಗೀತ ನೃತ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕಲ್ಯಾಣ ಕರ್ನಾಟಕ ಯುವಪ್ರತಿಭೆಗಳಲ್ಲಿ ಹೊಸ ಹೊಸ ಪ್ರತಿಭೆಗಳಿವೆ. ಅದನ್ನು ಹೊರತರುವುದಕ್ಕೆ ಕಾರ್ಯಕ್ರಮಗಳ ಅವಕಾಶ ಸಿಗುತ್ತಿಲ್ಲ. ತಾಲೂಕಿನಲ್ಲಿ ಇದು ಮೊದಲ ಕಾರ್ಯಕ್ರಮ. ನಿಜಕ್ಕೂ ಸ್ಮರಣೀಯ, ಇಂತಹ ಅದ್ಭುತವಾದ ಪ್ರತಿಭೆಗಳನ್ನು ಇಲ್ಲಿ ನೋಡಿ ತುಂಬಾ ಖುಷಿಯಾಯಿತು. ಈ ಪ್ರತಿಭೆಗಳು ಮುಂದಿನ ದಿನಗಳಲ್ಲಿ ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕಾಡೆಮಿ ಸದಸ್ಯ ಮತ್ತು ಯುವಸಂಭ್ರಮದ ಸಂಚಾಲಕ ರಮೇಶ ಗಬ್ಬೂರ್ ಮಾತನಾಡಿ, “ವೇದಿಕೆಯಲ್ಲಿ ನೂರಾರು ಮಕ್ಕಳು ಸಂಗೀತ, ನೃತ್ಯ, ನಟಿಸುವುದರಲ್ಲಿ ಮಗ್ನರಾಗಿ ವಿಭಿನ್ನತೆ ಪ್ರತಿಭೆಗಳನ್ನು ತೋರಿಸಿದರು. ಅಧ್ಯಕ್ಷೆ ನಾಟ್ಯ ಸರಸ್ವತಿ, ಶುಭಾ ಧನಂಜಯ್ ಅವರ ನೇತೃತ್ವದಲ್ಲಿ ನಾಡಿನಾದ್ಯಂತ ಸಂಗೀತ ನೃತ್ಯೋತ್ಸವಗಳನ್ನು ನಡೆಸುವ, ಶಿಷ್ಯವೇತನ, ಮಾಶಾಸನ ನೀಡುವ ಮತ್ತು ಹೊಸಪ್ರತಿಭೆಗಳಿಗೆ ವೇದಿಕೆಗಳನ್ನು ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಶ್ಲಾಘಿಸಿದರು.

WhatsApp Image 2024 09 15 at 05.10.09

“ಸಾಮಾಜಿಕ ನ್ಯಾಯದ ಪರಿಧಿಯಲ್ಲಿ ಕೆಲಸ ಮಾಡುವ ಹೊಸ ಪಡೆಯನ್ನು ಸೃಷ್ಟಿಸುವ ಹಾಗೂ ಸಂಗೀತ, ನೃತ್ಯ ಅಕಾಡೆಮಿ ಅವಕಾಶ ವಂಚಿತರಿಗೆ ವೇದಿಕೆಗಳನ್ನು ಕಲ್ಪಿಸುವ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ತಯಾರಿ ನಡೆಯುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಚಿವ ಜಿ ಪರಮೇಶ್ವರ್‌ ಪ್ರಜಾಪ್ರಭುತ್ವದ ರಾಜರೇ?

ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಘವೇಂದ್ರ ಸಿರಿಗೆರೆ, ಖಜಾಂಚಿ ಪ್ರಶಾಂತರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಶ್ರೀನಿವಾಸ ಅಂಗಡಿ, ಸಿದ್ಧಾರ್ಥ ಎಜುಕೇಶನಲ್ ಅಂಡ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಕಾರ್ಯದರ್ಶಿ ಹುಸೇನಪ್ಪ ಹಂಚಿನಾಳ್, ಸಂಜೋತಾ ಸಂಸ್ಥೆಯ ಶೈಲಜಾ ಹಿರೇಮಠ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾದ ಪದ ದೇವರಾಜ್, ಹುಸೇನ್ ದಾಸ್ ಕನಕಗಿರಿ, ಶಂಕರ್ ಹೂಗಾರ್ ಮತ್ತು ಜಾನಪದ ಅಕಾಡೆಮಿಯ ಕೆಂಕೆರೆ ಮಲ್ಲಿಕಾರ್ಜುನ್, ಸಾಹಿತ್ಯ ಅಕಾಡೆಮಿಯ ಅಜ್ಮೀರ್ ನಂದಾಪುರ, ಸೋಮಶೇಖರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...