ಕೊಪ್ಪಳ | ವಚನಗಳ ರಕ್ಷಣೆಗೆ ಶ್ರಮಿಸಿದ ಮಹನೀಯ ಫ.ಗು.ಹಳಕಟ್ಟಿ: ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ

Date:

ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು. ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದ ಮಹನೀಯರಲ್ಲಿ ಅಗ್ರಗಣ್ಯರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ ಹೇಳಿದರು.

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಇಂದಿನ ಜನ ಸಮುದಾಯಕ್ಕೆ ಚಲನಚಿತ್ರ ನಟ, ನಟಿಯರು ಆದರ್ಶ ವ್ಯಕ್ತಿಗಳಾಗಿದ್ದಾರೆ. ಆದರೆ, ನಿಜವಾಗಿಯೂ ಆದರ್ಶವಾಗಬೇಕಿರುವುದು ಡಾ. ಫ.ಗು.ಹಳಕಟ್ಟಿಯವರಂತಹ ಮಹನೀಯರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಾಣಕ್ಕಾಗಿ ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಘಟ್ಟದಲ್ಲಿದ್ದ ಹಲವಾರು ವರ್ಗ ಹಾಗೂ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅವರು ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು. ಕರ್ನಾಟಕ ಅಷ್ಟೇ ಅಲ್ಲದೇ ದೇಶದ ಎಲ್ಲಾ ಭಾಗಗಳಿಂದ ಬಂದಂತಹ ಶರಣ, ಶರಣೆಯರು ಅನುಭವ ಮಂಟಪದಲ್ಲಿ ಸೇರಿ ವಿಶ್ವದ ಮೊದಲ ಸಂಸತ್ತನ್ನು ನಿರ್ಮಾಣ ಮಾಡಿ, ಅಲ್ಲಿ ಚರ್ಚಿಸಿ ವಚನಗಳ ರಚಿಸಿದ್ದರು. ಆ ಎಲ್ಲಾ ವಚನಗಳು ಬೇರೆ-ಬೇರೆ ಕಡೆ ಹಂಚಿಹೋಗಿದ್ದವು. ಅವುಗಳ ಸಂಗ್ರಹಣೆಗಾಗಿ ಡಾ. ಫ.ಗು.ಹಳಕಟ್ಟಿಯವರು ಊರೂರು ಸುತ್ತಿ, ಪ್ರಕಟಣೆ ಹಾಗೂ ಸಂಶೋಧನೆಗೊಳಿಸುವ ಮೂಲಕ ನಮಗೆಲ್ಲಾ ತಿಳಿಸಿಕೊಟ್ಟಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಫ.ಗು.ಹಳಕಟ್ಟಿಯವರು ವಚನಗಳ ಸಂಗ್ರಹಣೆ ಮಾಡದೇ ಇದ್ದರೇ, ನಮಗೆ ವಚನ ಸಾಹಿತ್ಯ ಸಿಗಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ನಮ್ಮ ಭಾರತದ ಸಂವಿಧಾನದಲ್ಲಿರುವ ಎಲ್ಲಾ ಆಶಯಗಳನ್ನು ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ಹೇಳಿದ್ದರು. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕಿದೆ” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಪತ್ರಕರ್ತರಿಗೆ ನೈತಿಕತೆ ಮುಖ್ಯ: ಶಿವಕುಮಾರ್ ಮೆಣಸಿನಕಾಯಿ

ಗದಗಿನ ನಿವೃತ್ತ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ಬಸಪ್ಪ ಬರಗುಂಡಿ ಮಾತನಾಡಿ, “ಹಳಕಟ್ಟಿಯವರು 1880 ಜುಲೈ 2ರಂದು ಧಾರವಾಡದಲ್ಲಿ ಜನಿಸಿದರು. ಫಕೀರಪ್ಪ ತಂದೆ ಗುರುಬಸಪ್ಪ ಹಳಕಟ್ಟಿ ಅವರು ಕಾನೂನು ಪದವಿ ಪಡೆದು, ವೃತ್ತಿಯಿಂದ ವಕೀಲರಾಗಿ, ಸಾಹಿತಿ, ಸಹಕಾರಿಗಳಾಗಿ, ಸಂಘಸಂಸ್ಥೆಗಳ ಕಟ್ಟಿ ಬೆಳೆಸಿ ಸಮಾಜಕ್ಕಾಗಿ ತಮ್ಮ ತನು ಮನ ಧನವನ್ನು ನೀಡಿ ವಚನ ಸಾಹಿತ್ಯವನ್ನು ಉಳಿಸಿದ್ದಾರೆ. ಅವರು ತಮ್ಮ ಬದುಕನ್ನು ವಚನಗಳ ಜೋಡಣೆಗೆ ಮುಡುಪಾಗಿಟ್ಟರು. ಬಸವಾದಿ ಶರಣರ ಆಶಗಳನ್ನು ಉಳಿಸುವುದಕ್ಕಾಗಿ ಶ್ರಮಿಸಿದ ಹಳಕಟ್ಟಿಯವರನ್ನು ‘ವಚನ ಸಾಹಿತ್ಯದ ಪಿತಾಮಹ’ ಎಂದು ಕರೆಯುತ್ತಾರೆ. ವಚನಗಳ ಮೂಲಕ ಒಂದು ಸುಂದರವಾದ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಇಂತಹ ವಚನಗಳ ರಕ್ಷಣೆಗೆ ಶ್ರಮಿಸಿದ ಹಳಕಟ್ಟಿಯವರು ನಮ್ಮ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಬಸವ ಸಮಿತಿ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ, ಗುರುರಾಜ ಹಲಗೇರಿ, ಎ.ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಬಿ.ಎನ್ ಹೊರಪೇಟ, ಸುಧಾ ಶೆಟ್ಟರ್, ಗಿರಿಜಾ ಮೆಳ್ಳಿಕೇರಿ, ಸವಿತಾ ಬೋರಟ್ಟಿ, ಅರ್ಚನಾ ಸಸಿಮಠ, ಸೌಮ್ಯ ನಾಲ್ವಾಡ,‌ ಎಬಿ ಕಣಿವೆ ವಕೀಲರು,‌ ಕೊಪ್ಪಳ ಸಂಸದರಾದ ರಾಜಶೇಖರ ಬಸವರಾಜ ಹಿಟ್ನಾಳ, ಮಾಜಿ ಶಾಸಕರಾದ ಕೆ.ಶರಣಪ್ಪ, ರಾಜಶೇಖರ ಆಡೂರ, ಗುರುರಾಜ ಹಲಿಗೇರಿ, ಬಸವರಾಜ ಬಳ್ಳೊಳ್ಳಿ, ರಾಜೇಶ ಸಸಿಮಠ, ಬಸವರಾಜ, ವೀರಣ್ಣ ಸಂಕ್ಲಾಪುರ್, ವೀರಣ್ಣ ಕೊರ್ಲಳ್ಳಿ, ಗವಿಸಿದ್ದಪ್ಪ ಕೊಪ್ಪಳ, ಪ್ರಕಾಶ ಚಿನಿವಾಲರ, ವೀರೇಶ ಕೊತಬಾಳ, ಡಾ. ಬಸವರಾಜ ಕ್ಯಾವಟರ್, ಶರಣಪ್ಪ ಹ್ಯಾಟಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...