ಕೊಪ್ಪಳ | ಹುಲಿಗೆಮ್ಮ ದೇವಿ ಜಾತ್ರೋತ್ಸವ; ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Date:

ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ಮೇ 12ರಿಂದ 16ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶ್‌ ಬಾಬು ಸೂಚನೆ ನೀಡಿದರು.

ಕೊಪ್ಪಳ ಜಿಲ್ಲೆಯ ಹುಲಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “‌ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಹಾಗೂ ಹುಲಿಗಿ ಗ್ರಾಮದ ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳ ಸ್ವಚ್ಛತೆಗೆ ಗ್ರಾಮ ಪಂಚಾಯತಿಯಿಂದಲೂ ಕ್ರಮ ವಹಿಸಬೇಕು” ಎಂದು ಸೂಚನೆ ನೀಡಿದರು.

ಕುಡಿವ ನೀರಿನ ವ್ಯವಸ್ಥೆ: ಜಾತ್ರೆಗೆ ಆಗಮಿಸಲಿರುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಟ್ಯಾಂಕರ್‌ಗಳ ಜೊತೆಗೆ ಬಾಡಿಗೆ ರೂಪದಲ್ಲಿ ಟ್ಯಾಂಕರ್‌ಗಳನ್ನು ಪಡೆದು ಜನರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಹುಲಿಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು” ಎಂದು ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರ ವಿದ್ಯುತ್ ಸರಬರಾಜು: “ಜಾತ್ರಾ ಕಾಲದಲ್ಲಿ ಹೆಚ್ಚುವರಿ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಒಂದು ವಿಶೇಷ ತಂಡ ರಚಿಸಬೇಕು. 2 ರಿಂದ 3 ಟಿ.ಸಿಗಳನ್ನು ಕಾಯ್ದಿರಿಸಿಕೊಳ್ಳಬೇಕು. ನೀರಿನ ಸರಬರಾಜಿಗೆ ಹಾಗೂ ಬೆಳಕಿನ ವ್ಯವಸ್ಥೆಗೆ ಅಡಚಣೆಯಾಗದಂತೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ಸ್ಥಗಿತಗೊಳ್ಳದಂತೆ ಜೆಸ್ಕಾಂ ಮತ್ತು ದೇವಸ್ಥಾನದ ಅಧಿಕಾರಿಗಳು ಕ್ರಮ ವಹಿಸಬೇಕು” ಎಂದು ಹೇಳಿದರು.

ಆರೋಗ್ಯ ಕೇಂದ್ರದ ವ್ಯವಸ್ಥೆ: “ಜಾತ್ರೆಗೆ ಆಗಮಿಸಲಿರುವ ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಜಾತ್ರೆ ಸಮಯದಲ್ಲಿ ಔಷಧಿಗಳೊಂದಿಗೆ ಎರಡು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದಲ್ಲದೇ ಎರಡು ಆಂಬುಲೆನ್ಸ್ಗಳನ್ನು ಕಾಯ್ದಿರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದರು.

ವಾಹನ ನಿಲುಗಡೆಗೆ ಕ್ರಮ: “ಜಾತ್ರೆಗೆ ಆಗಮಿಸುವ ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ ದ್ವಿಚಕ್ರ, ನಾಲ್ಕು ಚಕ್ರ ಹಾಗೂ ಭಾರಿ ವಾಹನಗಳ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಗಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಕೂಡಿ ದೇವಸ್ಥಾನದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ: “ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ತೆರಳಿದ್ದು, ಲಭ್ಯವಿರುವ ಪೊಲೀಸ್ ಸಿಬ್ಬಂದಿಗಳೊಂದಿಗೆ ಗೃಹರಕ್ಷ ದಳದವರನ್ನು ನೇಮಿಸಿ ಜಾತ್ರೆಗೆ ಅಗತ್ಯ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ನದಿಗೆ ನೀರು: “ಹುಲಿಗೆ ಜಾತ್ರಾ ಸಮಯದಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವಂತೆ ತುಂಗಭದ್ರ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಬಸ್ ವ್ಯವಸ್ಥೆ: “ಜಾತ್ರೆಗೆ ಹಲವೆಡೆಯಿಂದ ಭಕ್ತಾಧಿಗಳು ಆಗಮಿಸಲಿದ್ದು, ಕೆಕೆಆರ್‌ಟಿಸಿ ಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದು ಹೇಳಿದರು.

ರೈಲು ನಿಲುಗಡೆಗೆ ಕ್ರಮ: “ಜಾತ್ರಾ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ದೇವಸ್ಥಾನದ ಅಧಿಕಾರಿಗಳು ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು” ಎಂದರು.

ಪ್ರಾಣಿ ಬಲಿ ನಿಷೇಧ: “ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದ್ದು, ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕೊಪ್ಪಳ ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರರು, ಆರಕ್ಷಕ ಉಪ ನಿರೀಕ್ಷಕರು, ಪಶು ಸಂಗೋಪನೆ ಇಲಾಖೆ ಮತ್ತು ದೇವಸ್ಥಾನದ ಅಧಿಕಾರಿಗಳ ತಂಡವು ಕಾರ್ಯನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.

ಮದ್ಯಪಾನ ನಿಷೇಧ: “ಜಾತ್ರಾ ಸಮಯದಲ್ಲಿ ಹುಲಿಗಿ ಗ್ರಾಮದಲ್ಲಿ ಮದ್ಯಪಾನ, ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

ಕ್ರಮಕ್ಕೆ ಸೂಚನೆ: “ದೇವಸ್ಥಾನದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ದೇವಸ್ಥಾನದ ಆಡಳಿತಾಧಿಕಾರಿ ಆಗಿರುವ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಡಿಎಸ್‌ಪಿ ಶರಣಬಸಪ್ಪ, ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...