ಕೊಪ್ಪಳ | ಹುಲಿಗೆಮ್ಮ ಜಾತ್ರೆ; ಅನಿಷ್ಟ ದೇವದಾಸಿ ಪದ್ಧತಿ ತಡೆಗಟ್ಟುವಲ್ಲಿ ಯಶಸ್ವಿ

Date:

ಮೇ 13ರಂದು ಇಡೀ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯ ಮತ ಎಣಿಕೆಯತ್ತ ಚಿತ್ತ ಹರಿಸಿದ್ದರೆ, ಕೊಪ್ಪಳ ಜಿಲ್ಲಾಡಳಿತದ ಅಧಿಕಾರಿಗಳು ಬಡ ಯುವತಿಯರು ದೇವದಾಸಿ ಪದ್ಧತಿಗೆ ಬಲಿಯಾಗುವುದನ್ನು ತಡೆಯುವಲ್ಲಿ ನಿರತರಾಗಿದ್ದರು. ಅವರ ಪರಿಶ್ರಮ ಫಲ ನೀಡಿದ್ದು, ಈ ಬಾರಿಯ ಹುಲಿಗೆಮ್ಮ ಜಾತ್ರೆಯಲ್ಲಿ ಅನಿಷ್ಟ ದೇವದಾಸಿ ಪದ್ಧತಿ ಆಚರಣೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ದೇವದಾಸಿ ಪದ್ಧತಿ ಅನಿಷ್ಟ ಆಚರಣೆಯಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಆದರೂ, ಜಾತ್ರೆ ವೇಳೆ ದೇವರ ಹೆಸರಿನಲ್ಲಿ ಮುತ್ತು ಕಟ್ಟುವುದು, ಜಡೆ ಬಿಡುವುಡು, ದೇವದಾಸಿ ಪದ್ಧತಿಗಳಂತಹ ಆಚರಣೆಗಳನ್ನು ನಡೆಸಲಾಗುತ್ತದೆ.

ಅನಿಷ್ಟ ಪದ್ಧತಿಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಂಡಳಿ ಈ ವರ್ಷ ದೇವಾಲಯದ ಸುತ್ತಲೂ ಕಟ್ಟೆಚ್ಚರ ವಹಿಸಿತ್ತು. ಜಾತ್ರೆ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಪೊಲೀಸರು ಮತ್ತು ಅಧಿಕಾರಿಗಳು ಜನಸಾಮಾನ್ಯರಂತೆ ಸಾಮಾನ್ಯ ಉಡುಪಿನಲ್ಲಿ ಗಸ್ತು ತಿರುಗುತ್ತಿದ್ದರು. ಇದರಂತೆ ಹೆಣ್ಣುಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ 30 ಪ್ರಕರಣಗಳನ್ನು ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

2022ರಲ್ಲಿ ದೇವಸ್ಥಾನದಲ್ಲಿ 300 ಪ್ರಕರಣಗಳು ವರದಿಯಾಗಿದ್ದವು. ಆದರೆ, ಈ ಬಗ್ಗೆ ಯಾರ ವಿರುದ್ಧವೂ ಪ್ರಕರಣ ದಾಖಲಾಗಿರಲಿಲ್ಲ. ಬದಲಾಗಿ, ಪೋಷಕರಿಗೆ ಆಪ್ತಸಮಾಲೋಚನೆ ಮಾಡಿ, ಬುದ್ಧಿ ಹೇಳಿ ಕಳುಹಿಸಲಾಗಿತ್ತು.

“ಜಾತ್ರೆ ಸಮಯದಲ್ಲಿ ಬಹುತೇಕ ಸ್ಥಳಗಳಲ್ಲಿ, ಮನೆಗಳಲ್ಲಿ ರಾತ್ರಿ ವೇಳೆ ಇಂತಹ ಆಚರಣೆಗಳನ್ನು ನಡೆಸಲಾಗುತ್ತದೆ. ಬಡವರು ಹಾಗೂ ಅನಕ್ಷರಸ್ಥರು ಇಂತಹ ಅನಿಷ್ಟ ಪದ್ಧತಿಗೆ ಬಲಿಯಾಗುತ್ತಿದ್ದಾರೆ. ಬಲವಂತವಾಗಿ ಹೆಣ್ಣುಮಕ್ಕಳನ್ನು ಇಂತಹ ಅನಿಷ್ಟ ಪದ್ಧತಿಗೊಳಪಡಿಸಲಾಗುತ್ತಿದ್ದು, ಕೊನೆಗೆ ಲೈಂಗಿಕ ಕಾರ್ಯಕರ್ತೆಯರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ. ಮೇ 13ರಂದು ಇಂತಹ 30 ಪ್ರಕರಣಗಳನ್ನು ತಡೆಯಲಾಗಿದ್ದು, ಇನ್ನೂ ಅತ್ಯಗತ್ಯ ಕ್ರಮ ಕೈಗೊಳ್ಳುವ ಅನಿವಾರ್ಯವಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...