ಕೊಪ್ಪಳ | ರೈತರ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಧರಣಿ ಖಚಿತ: ಈಶಪ್ಪ ಸರಬದ

Date:

ರೈತರ ಬೇಡಿಕೆಗಳನ್ನು ಈಡೇರಿಸಿದಿದ್ದರೆ ಅನಿರ್ದಿಷ್ಟಾವಧಿ ಧರಣಿ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಈಶಪ್ಪ ಸಬರದ ಎಚ್ಚರಿಕೆ ನೀಡಿದ್ದಾರೆ.

ಕುಕನೂರು ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಪಟ್ಟಣದ ರಾಘವಾನಂದ ಮಠದಿಂದ ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದ ವರೆಗೆ ಪ್ರತಿಭಟನೆಯ ಮೂಲಕ ತಹಶೀಲ್ದಾರ್ ಎಚ್ ಪ್ರಾಣೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.

“ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಬೇಕು ಹಾಗೂ ಮುಂದೆ ಬರುವ ಹೆಸರು, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಬೆಂಬಲ ಬೆಲೆಯಡಿ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಪ್ರತಿ ಬಾರಿ ಬೆಳೆ ಬಂದ ಮೇಲೆ ಬೆಂಬಲ ಬೆಲೆ ಘೋಷಣೆ ಮಾಡುತ್ತೀರಿ, ಇದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಈಗಿನಿಂದಲೇ ಬೆಂಬಲ ಬೆಲೆ ಕುರಿತು ತಯಾರಿ ಮಾಡಿಕೊಳ್ಳಬೇಕು. ಈಗ ಸುಮಾರು 40 ವರ್ಷಗಳಿಂದ ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿಲ್ಲ. ಈ ಬಗ್ಗೆ ಖುದ್ದು ನೆಪ ಮಾತ್ರಕ್ಕೆ ರೈತರೇ ದೇಶದ ಬೆನ್ನೆಲುಬು ಎನ್ನುವ ಜನಪ್ರತಿನಿಧಿಗಳು ಗಮನಹರಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದ ಕಸ ವಿಲೇವಾರಿ ಘಟಕದ ಕಾಮಗಾರಿ ಕಳಪೆಯಾಗಿ ನಡೆಯುತ್ತಿದ್ದು, ಸಾಕಷ್ಟು ಬಾರಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಜಾಣ ಕುರುಡನಂತೆ ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ಮಾಡಬೇಕು ಮತ್ತು ಕಳಪೆ ಮಟ್ಟದ ಕಸ ವಿಲೇವಾರಿ ಘಟಕದ ಕಾಮಗಾರಿಯ ಬಗ್ಗೆ ಆರ್ಥಿಕ ಸಲಹೆಗಾರರು, ಶಾಸಕ ಬಸವರಾಜ ರಾಯರಡ್ಡಿ ಮತ್ತು ಜಿಲ್ಲಾಧಿಕಾರಿಗಳು, ಕೃಷಿ ಮಂತ್ರಿಗಳು ಗಮನಹರಿಸಿ ಬೇಗನೇ ರೈತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗಂಗಮ್ಮ ಹೂಡೆದ ಮಾತನಾಡಿ, “ಮುಂದೆ ಬರುವ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಬೇಕು. ಎಪಿಎಂಸಿ ಆವರಣದಲ್ಲಿ ರೈತರಿಗೆ ರೈತ ಭವನವನ್ನು ನಿರ್ಮಿಸಿಕೊಡಬೇಕು ಮತ್ತು ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುಬೇಕು. ಈಡೇರಿಸದೆ ಇದ್ದ ಪಕ್ಷದಲ್ಲಿ ಕುಕುನೂರು ಯಲಬುರ್ಗಾ ಬಂದ್‌ಗೆ ಕರೆ ಕೊಟ್ಟು ಅನಿರ್ದಿಷ್ಟಾವಧಿ ಧರಣಿ ಹಾಗೂ ಹೋರಾಟ ಮಾಡಲಾಗುವುದು” ಎಂದರು.

ಈ ವೇಳೆ ನಗರ ಘಟಕ ಅಧ್ಯಕ್ಷ ಶಿವು ಬಂಗಿ, ಬಸವರಾಜ ಸಬರದ, ಹನುಮಪ್ಪ ಮರಡಿ, ಬಸಪ್ಪ ಲಾಲ್ ಗುಂಡೂರ, ವೀರಯ್ಯ ತೋಂಟದಾರ್ಯ ಮಠ, ಈರಪ್ಪ ಈ ಬೇರಿ, ಮಹಮ್ಮದ್ ರಫಿ ಸವಣೂರು, ಉಮೇಶ್ ಬಿದವಟ್ಟಿ, ಶಿವಪ್ಪ ಯತ್ನಟ್ಟಿ, ಕೆಂಚಪ್ಪ, ಈರಪ್ಪ ಗುಳಗಣ್ಣನವರ್, ಮಹದೇವಪ್ಪ ಕುರಿ, ವೀರಪ್ಪ ಕೂಡ್ಲೂರು, ಬಸಪ್ಪ ಮಂಡಲಗೇರಿ, ಮಲ್ಲಪ್ಪ ಮೂಲಿಮನಿ, ಎಚ್ ಎಮ್ ಮರಡಿ, ಮಲ್ಲಪ್ಪ ಯತ್ನಟ್ಟಿ, ಶರಣಪ್ಪ ಚೆಂಡೂರ, ರಾಮಣ್ಣ ಬಳ್ಳಾರಿ, ಬಸಪ್ಪ ಬಂಗಿ, ಯಲ್ಲಪ್ಪ ಕಲಾಲ್, ಬಸವರಾಜ್ ಸಬರದ, ಚಂದ್ರಶೇಖರ ವಸ್ತ್ರದ, ಶರಣಪ್ಪ ಯತ್ನಟ್ಟಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...