ಕೊಪ್ಪಳ | ವಿವಿಧ ಬೇಡಿಕೆಗಳ ಈಡೇರಿಕೆಗೆ ಜನಪರ ಸಂಘಟನೆಗಳ ಒತ್ತಾಯ

Date:

ಈ ಬಾರಿ ನಗರಸಭೆ ಬಜೆಟ್‌ನಲ್ಲಿ ಕೊಪ್ಪಳದ ಭಾಗ್ಯನಗರವನ್ನು ನಗರಸಭೆ ವ್ಯಾಪ್ತಿಗೆ ಸೇರಿಸುವುದು ಸೇರಿದಂತೆ ಹಲವು ಮುಖ್ಯ ಬೇಡಿಕೆಗಳನ್ನು ಈಡೇರಿಸಬೇಕೆಂದು ಜನಪರ ಸಂಘಟನೆಗಳ ಒಕ್ಕೂಟದಿಂದ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರಿಗೆ ಬಜೆಟ್ ಮಂಡನೆ ಪೂರ್ವ ಜನಾಗ್ರಹ ಮನವಿ ಸಲ್ಲಿಸಲಾಯಿತು.

“ಪುರಸಭೆ ವ್ಯಾಪ್ತಿಯ ಸುತ್ತಲಿನ ಹಳ್ಳಿಗಳನ್ನು ಗುರುತಿಸಿ ಫಲಕಗಳನ್ನು ಅಳವಡಿಸಬೇಕು. ನಗರಕ್ಕೆ ವರ್ತುಲ ರಸ್ತೆ ನಿರ್ಮಾಣ ವಿಳಂಬವಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಒಂದರ್ಧ ಭಾಗದಲ್ಲಿ ಬರುವುದರಿಂದ ಉಳಿದ ಅರ್ಧ ಭಾಗ ಮಾತ್ರ ಅಂದರೆ ದದೆಗಲ್ ಬಳಿಯಿಂದ ಭಾಗ್ಯನಗರದ ಹೊರ ವಲಯದಿಂದ ಕಿನ್ನಾಳ, ಕುಷ್ಟಗಿ ರಸ್ತೆ ಒಳಗೊಂಡು ಕಿಡದಾಳ ಬಳಿಯಿಂದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿವರೆಗೆ ಹೊಸ ಅರ್ಧ ವರ್ತುಲ ರಸ್ತೆ ನಿರ್ಮಿಸಬೇಕು” ಎಂದು ಒತ್ತಾಯಿಸಲಾಯಿತು.

“ಮಳೆಗಾಲದಲ್ಲಿ ಮಳೆ ನೀರು ರಾಜ ಕಾಲುವೆ ತುಂಬಿ ರಸ್ತೆ ಪಕ್ಕದ ಬಡಾವಣೆಗಳ ಮನೆಗಳಿಗೆ ನುಗುತ್ತದೆ. ತಕ್ಷಣ ಚರಂಡಿಯಲ್ಲಿರುವ ಎಲ್ಲಾ ಗಿಡಗಳನ್ನು ತೆಗೆಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕು. ರಾಜ ಕಾಲುವೆ ಕಳಪೆ ಕಾಮಗಾರಿ ನಿಲ್ಲಿಸಿ, ಆಧುನಿಕ ಹಾಗೂ ವೈಜ್ಞಾನಿಕ ಮಾದರಿಯಲ್ಲಿ ನವೀಕರಣ ಮಾಡಬೇಕು. ನಗರದ ರಸ್ತೆಗಳು ಕಳಪೆಯಾಗಿದ್ದು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಈ ಹಿಂದೆ ಮನವಿ ಮಾಡಲಾಗಿತ್ತು. ಹಾಳಾದ ರಸ್ತೆಗಳ ಸಮೀಕ್ಷೆ ನಡೆಸಿ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿ ನಡೆಸಿ, ಅವೈಜ್ಞಾನಿಕ ವೇಗ ನಿಯಂತ್ರಕಗಳನ್ನು ತೆಗೆಸಿ ಉಚ್ಚ ನ್ಯಾಯಾಲಯದ ಆಶಯದಂತೆ ಆರು ಇಂಚಿಗೂ ಕಡಿಮೆ ಎತ್ತರದ ವೇಗ ನಿಯಂತ್ರಕಗಳನ್ನು ನಿರ್ಮಿಸಬೇಕು” ಎಂದು ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೃತ್ತಿಪರ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಕೃತಕ ಬುದ್ಧಿಮತ್ತೆ ಶಿಕ್ಷಣ, ತಂತ್ರಜ್ಞಾನ ಶಿಕ್ಷಣ ಮುಂತಾದ ಶಿಕ್ಷಣ ಒಂದೇ ಸೂರಿನಡಿ ದೊರೆಯುವಂತೆ ಯೋಜನೆ ರೂಪಿಸಬೇಕು. ನಗರದಲ್ಲಿ ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿದ್ದು, ಅದರ ನಿಷೇಧ ಮಾಡಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕು” ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ತರಕಾರಿ ಬೆಲೆ ಕುಸಿತ; ರೈತರಿಗೆ ಆರ್ಥಿಕ ಹೊಡೆತ

ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ್, ಯುವ ವಕೀಲ ಮಹಾಂತೇಶ ಜಿ, ಚಾಕ್ರಿ, ರೈಲ್ವೆ ಜನಪರ ಹೋರಾಟ ಸಮಿತಿಯ ಕಾರ್ಯದರ್ಶಿ ಮಖಬೂಲ್ ರಾಯಚೂರು, ಮುತ್ತು ಹಡಪದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...