ಕೊಪ್ಪಳ | ಬಲ್ಡೋಟಾ ವಿಸ್ತರಣೆ & ಹೊಸ ಕಾರ್ಖಾನೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ

Date:

ಕೊಪ್ಪಳ ಜಿಲ್ಲೆಗೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವುದನ್ನು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ ನಗರಸಭೆ ಸಂಕೀರ್ಣದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿವೆ.

ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿ ಎಲ್ಲಾ ಕಾರ್ಖಾನೆಗಳ ವಿಸ್ತೀರ್ಣ ಮತ್ತು ಆರಂಭವನ್ನು ವಿರೋಧಿಸಿ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಗಿದೆ.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಬೇಕು ಎಂದೇನಿಲ್ಲ, ಅವುಗಳಿಂದ ಎಲ್ಲಾ ಸಮಸ್ಯೆ ಪರಿಹಾರ ಆಗಿದೆ ಎಂಬುದು ಕೇವಲ ಭ್ರಮೆ. ಇಲ್ಲಿ ಹಣ ಹೂಡಿಕೆ ಮಾಡುವುದು ದೊಡ್ಡ ಸಂಗತಿ ಎಂದು ಭಾವಿಸಿರುವುದೇ ಬಹುದೊಡ್ಡ ತಪ್ಪು. ಹಣದ ಲೆಕ್ಕದಲ್ಲಿ ಜನರಿಗೆ ಬದುಕು ಸಿಗಲ್ಲ. ಬಳ್ಳಾರಿಗೆ ಜಿಂದಾಲ್‌ನಂತಹ ಬೃಹತ್‌ ಕಾರ್ಖಾನೆ ಸ್ಥಾಪನೆ ಮಾಡುವ ಮೊದಲು ಏನು ಹೇಳಿ ಬಂದಿತ್ತೊ, ಅ ಪ್ರಕಾರ ನಡೆದುಕೊಳ್ಳದೇ ಇರುವ ಕಾರಣ ಅಲ್ಲಿಯ ಜನ ಕಂಗಾಲಾಗಿದ್ದಾರೆ, ಬಹುತೇಕ ಕಂಪನಿಗಳು ಈಗ ಉದ್ಯೋಗ ಕಡಿತ ಆರಂಭಿಸಿವೆ. ಈಗ ಉದ್ಯೋಗ ಕೊಡ್ತಿವಿ ಅಂದವರು ಮುಂದೆ ಕೊಡಲು ಸಾಧ್ಯವಿಲ್ಲ ಎನ್ನುತ್ತಾರೆ. ಅದು ಏನೇ ಇದ್ದರೂ ಉದ್ಯೋಗಕ್ಕಿಂತ ಮೊದಲು ಆರೋಗ್ಯ ಹಾಗೂ ಬದುಕು ಮುಖ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಚಳವಳಿಯ ಮುಂಚೂಣಿ ನಾಯಕ ಚಾಮರಸ ಮಾಲಿಪಾಟೀಲ್‌ ಮಾತನಾಡಿ, “ಕಾರ್ಖಾನೆಗಳಿಂದ ಬರುತ್ತಿರುವ ಧೂಳು ಮತ್ತು ಹೊಗೆಯಿಂದ ಪರಿಸರ ನಾಶವಾಗಿದೆ. ರೈತರ ಬೆಳೆ ನಾಶವಾಗಿದೆ. ಅಲ್ಲದೆ, ಇಲ್ಲಿಯ ನದಿಯಿಂದ ನೀರನ್ನು ಹೇರಳವಾಗಿ ಬಳಸಿಕೊಂಡು ರೈತರಿಗೆ ಎರಡನೆ ಬೆಳೆಗೆ ನೀರಿಲ್ಲದಂತೆ ಮಾಡಿದ್ದಾರೆ. ಕುಡಿಯುವ ನೀರು ಮಲಿನವಾಗಿವೆ ಎಂಬ ಸಾಮಾನ್ಯ ಪ್ರಜ್ಞೆ ಇಟ್ಟುಕೊಳ್ಳದಿರುವುದು ವಿಷಾದಕರ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್‌ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಈ ವೇಳೆ ಹಿರಿಯ ಸಾಹಿತಿ ಎಎಂ ಮದರಿ, ಮಹಿಳಾ ಹೋರಾಟಗಾರ್ತಿ ಶಶಿಕಲಾ, ಜಂಟಿ ಕ್ರಿಯಾ ವೇದಿಕೆ ಹೋರಾಟ ಸಂಚಾಲಕ ಕೆ ಬಿ ಗೋನಾಳ, ಡಿ ಹೆಚ್ ಪೂಜಾರ, ಮಂಜುನಾಥ ಜಿ ಗೊಂಡಬಾಳ, ಮಹಾಂತೇಶ ಕೊತಬಾಳ, ನಜೀರಸಾಬ್‌ ಮೂಲಿಮನಿ, ಶರಣು ಗಡ್ಡಿ, ಎಸ್‌ ಎ ಗಫಾರ್, ಬಸವರಾಜ ಶೀಲವಂತರ, ಎಸ್ ಬಿ ರಾಜೂರ, ರವಿ ಕಾಂತನವರ, ಚಿಟ್ಟಿಬಾಬು ಸಿಂಧನೂರು, ಭೀಮಸೇನ ಕಲಿಕೇರಿ, ಶರಣು ಪಾಟೀಲ್‌, ಹನುಮಂತಪ್ಪ ಬಸವರಾಜ ಯರದಿಹಾಳ, ಮೂಕಣ್ಣ ಮೇಸ್ತ್ರಿ ಮಂಗಳೇಶ ರಾಠೋಡ, ಬಸವರಾಜ ನರೆಗಲ್‌, ರಮೇಶ ಪಾಟೀಲ್ ಬೇರಿಗಿ, ಗವಿಸಿದ್ದಪ್ಪ ಹಲಿಗಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಹಾದೇವಪ್ಪ ಮಾವಿನಮಡು, ದುರುಗೇಶ ಹಿರೇಮನಿ ವಟಪರ್ವಿ, ಸುಂಕಮ್ಮ ಗಾಂಧಿನಗರ, ಭೀಮಪ್ಪ ಯಲಬುರ್ಗಾ, ಚನ್ನಬಸಪ್ಪ ಅಪ್ಪಣ್ಣವರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...