ಕೊಪ್ಪಳ | ಧರ್ಮ ಮೀರಿ ಭಾವೈಕ್ಯತೆ ಸಾರಿದ ಇರಕಲ್ಲಗಡ ಗಣೆಶೋತ್ಸವ

Date:

ಕೊಪ್ಪಳ ತಾಲೂಕಿನ ಇರಕಲ್ಲಗಡ ಗ್ರಾಮದಲ್ಲಿ ಹಿಂದು ಹಾಗೂ ಮುಸ್ಲಿಂ ಧರ್ಮೀಯರು ಸೇರಿ ಗಣೇಶೋತ್ಸವ ಆಚರಿಸಿ ಧಾರ್ಮಿಕ ಸಾಮರಸ್ಯದ ಸಂದೇಶ ಸಾರಿದ್ದಾರೆ.

ಇರಕಲ್ಲಗಡದಲ್ಲಿ ಗಜಾನನ ಮಿತ್ರ ಮಂಡಳಿ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವದಲ್ಲಿ 4ನೇ ದಿನದ ಊಟದ ವ್ಯವಸ್ಥೆಯನ್ನು ಗ್ರಾಮದ ಮುಸ್ಲೀಂ ಸಮುದಾಯವೇ ವಹಿಸಿಕೊಂಡು ಭಾರತದ ಸಹೋದರತ್ವ ತತ್ವವನ್ನು ಮತ್ತೆ ಸಾಬೀತು ಮಾಡಿದ್ದಾರೆ.

ಮಾಜಿ ಮಂಡಳ ಪಂಚಾಯತ್ತಿ ಪ್ರಧಾನರಾದ ಈರಬಸಪ್ಪ ಪಟ್ಟಣಶೆಟ್ಟಿ ಮಾತನಾಡಿ, “ಭಾಷೆ, ಧರ್ಮವನ್ನು ಮೀರಿ ನಾವೆಲ್ಲ ಮನುಷ್ಯರು, ಮೇಲಾಗಿ ಭಾರತೀಯರು ಎಂಬ ಸಂದೇಶವನ್ನು ಇರಕಲ್ಲಗಡದ ಮುಸ್ಲಿಂ ಬಾಂಧವರು ಮತ್ತು ಹಿಂದೂಗಳು ಸಾರಿದ್ದೇವೆ. ಧರ್ಮದ ನಾಮ ಬದಲಾಗಿರಬಹುದು, ಆಚರಣೆ ಬದಲಾಗಿರಬಹುದು, ಆದರೆ ನಮ್ಮ ಭಾವನೆಗಳು ಒಂದೆ. ಪೂಜೆಯ ಕ್ರಮಗಳು ಬೇರೆಬೇರೆಯಾಗಿರಬಹುದು; ಆದರೆ, ನಂಬುವುದು ಒಬ್ಬ ದೇವರನ್ನೆ. ಹಾಗಾಗಿ ಹಿಂದೂ-ಮುಸ್ಲಿಂ ಎಂಬ ಬೇಧವಿಲ್ಲ. ನಾವೆಲ್ಲ ಭಾಯಿ ಭಾಯಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಂ ಸಮುದಾಯದ ಮುಖಂಡರ ಈ ಸಹಭಾವನೆಗೆ ಗ್ರಾಮಸ್ಥರು ತಮ್ಮ ಬೆಂಬಲ ನೀಡಿದರು. ಪ್ರೀತಿ, ವಾತ್ಸಲ್ಯ, ಧರ್ಮೀಯ ಸಹಿಷ್ಣುತೆ ಮತ್ತು ರಾಷ್ಟ್ರೀಯ ಏಕತೆಯ ಸಂಕೇತವಾಗಿ ಈ ಬಾರಿಯ ಗಣೇಶೋತ್ಸವ ಸಮಾಜದ ಎಲ್ಲ ವರ್ಗಗಳಿಂದ ಶ್ಲಾಘನೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಕೆ; ಸಾರ್ವಜನಿಕರ ಆಕ್ರೋಶ

ಮೆರಾಜ್ ವಲಿ, ಅಬ್ಬಾಸ್ ಅಲಿ, ಸುಭಾನಸಾಬ, ಮಹಿಬೂಬ ಕಂದಕೂರ, ಅಬ್ದುಲ್ ಸಾಬ, ಈರಣ್ಣ, ಗುಡ್ಡಪ್ಪ, ಬಸವರಾಜ್ ಮೂಲಿಮನಿ ನೌಜವಾನ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು ಗಜಾನನ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...