ಕೊಪ್ಪಳ | ಹಳೆಯದರೊಂದಿಗೆ ಹೊಸ ಸಾಹಿತ್ಯ ಪ್ರಕಾರ ಅಳವಡಿಸಿಕೊಳ್ಳುವುದು ಸೂಕ್ತ: ವಿಜಯ ಅಮೃತ್ ರಾಜ್

Date:

ಹಳೆಯ ಸಾಹಿತ್ಯದ ಪ್ರಕಾರಗಳನ್ನು ಉಳಿಸುವುದರ ಜೊತೆಗೆ ಹೊಸ ರೀತಿಯ ಸಾಹಿತ್ಯ ಪ್ರಕಾರವನ್ನು ಅಳವಡಿಸಿಕೊಳ್ಳುವ ಮೂಲಕ ಬರವಣಿಗೆಯಲ್ಲಿ ತೊಡಗಿಕೊಳ್ಳಬೇಕು ಎಂದು ಬರಹಗಾರ ವಿಜಯ್ ಅಮೃತ್ ರಾಜ್ ಹೇಳಿದರು.

ಯುಗಾದಿ ಹಾಗೂ ರಂಜಾನ್ ಹಬ್ಬದ ನಿಮಿತ್ತ ಕವಿ ಸಮೂಹ ಕೊಪ್ಪಳ ಬಹುತ್ವ ಭಾರತ ಬಳಗ ಕೊಪ್ಪಳದ ಸಂಯುಕ್ತ ಆಶಯದಲ್ಲಿ ನಡೆದ ಕವಿಗೋಷ್ಠಿಯಲ್ಲಿ ವಿಜಯ ಅಮೃತ್ ರಾಜ್ ಮಾತನಾಡಿ, “ಕವಿತೆಗಳಲ್ಲಿ ಹೊಸತನ ಬರಬೇಕಿದೆ. ಮತ್ತೊಮ್ಮೆ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸುವ ಕೆಲಸವನ್ನು ಮಾಡಬೇಕಿದೆ. ಕನ್ನಡದಲ್ಲಿ ವಿಟ್ ಪ್ರಕಾರ ಇದುವರೆಗೆ ಬಂದಿಲ್ಲ. ಕೌಬಾಯ್ ಪದ್ಯಗಳು ಬರೆಯುವ ಪ್ರಯತ್ನ ನಡೆಯಬೇಕಿದೆ. ಜೊತೆಗೆ ನಿರಂತರವಾಗಿ ಸಾಹಿತ್ಯ ವಿಚಾರಗಳು ಚರ್ಚೆ ಆಗಬೇಕಿದೆ” ಎಂದು ಕಿವಿಮಾತು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಹತ್ತಕ್ಕೂ ಹೆಚ್ಚು ಕವಿಗಳು ತಮ್ಮ ಕವಿತೆಯನ್ನು ವಾಚನ ಮಾಡಿದರು. ಅರುಣ ನರೇಂದ್ರ ರಂಜಾನ್ ಹಾಗೂ ಯುಗಾದಿ ಕುರಿತ ಕವಿತೆಯನ್ನು ವಾಚನ ಮಾಡಿದರು. ಪುಷ್ಪಲತಾ ಏಳುಭಾವಿ: ʼನನ್ನ ಕೊಂದುಬಿಡುʼ ಹಾಗೂ ʼಅಂದು ಮತ್ತು ಇಂದುʼ, ಶ್ರೀನಿವಾಸ್ ಚಿತ್ರಗಾರ್: ʼಡುಬ್ಬ ಚಪ್ಪರಿಸುವವರುʼ ಹಾಗೂ ʼಕಟ್ಟ ಕಡೆಯ ಹಾದಿʼ, ಜಿಎಸ್ ಗೋನಾಳ್: ʼಶಾಂತಿ ಪ್ರೀತಿ ಸೌಹಾರ್ದತೆ ರಂಜಾನ್ ಮತ್ತು ಯುಗಾದಿʼ, ವಿಜಯ್ ಅಮೃತ್ ರಾಜ್: ʼಯುಗಾದಿ ಹಾಗೂ ರಂಜಾನ್ʼ, ಪೀ ಎಸ್ ಅಮರದೀಪ್: ʼಬೇವು ಬೆಲ್ಲʼ , ʼಖಾಲಿ ಬಿಳಿಹಾಳೆʼ, ಬಿಎಸ್ ವೀರಾಪುರ್: ʼಕೊಪ್ಪಳ ಉಳಿಸೋಣ ಬನ್ನಿʼ, ʼಯುಗಾದಿ ಹರುಷ ತರಲಿʼ, ಬೀರಪ್ಪ ಅಂಡಗಿ: ʼಕಿವಿʼ , ಅನಸೂಯ ಜಾಗೀರ್ದಾರ್: ʼಅಳಲಾರದ ಮಕ್ಕಳು ಹಾಗೂ ಯುಗಾದಿ ಚೈತ್ರಳ ಸ್ವಗತ ಕವಿತೆʼ, ಸಿರಾಜ್ ಬಿಸರಳ್ಳಿ: ʼದ್ವಿಪದಿಗಳುʼ , ʼನನಗೆ ನಿನ್ನ ದರ್ಶನ ಭಾಗ್ಯವಿಲ್ಲʼ ಕವಿತೆಗಳನ್ನು ವಾಚನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಅಪರಾಧಿಗಳ ದಂಡಿಸುವಾಗ ಜಾತಿ, ಧರ್ಮ ಲೆಕ್ಕಿಸಲ್ಲ: ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ

ಕಾರ್ಯಕ್ರಮದಲ್ಲಿ ಕವಿ ಪಿಎಸ್ ಅಮರದೀಪ್, ಮೌಲಾ ಹುಸೈನ್ ತಳಕಲ್, ಮಂಜು ತೋಟಗಾರ, ನರೇಂದ್ರ ಪಾಟೀಲ್ ಸೇರಿದಂತೆ ಇತರರು ಉಪಸಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...