ಕೊಪ್ಪಳ | ಸಂಘ ರಚನೆಗಿಂತ ಸಂಘಟನೆ ಮುನ್ನಡೆಸುವುದು ಮುಖ್ಯ: ದುಂಡಪ್ಪ ತುರಾದಿ

Date:

ಪ್ರಮುಖ ವ್ಯಕ್ತಿಗಳು ಸೇರಿಕೊಂಡು ಸಂಘವನ್ನು ರಚನೆ ಮಾಡುವುದು ಸುಲಭವಾದ ಕಾರ್ಯ. ಆದರೆ, ಸಂಘಟನೆಯನ್ನು ಗಂಭೀರವಾಗಿ ಹಾಗೂ ತಾತ್ವಿಕವಾಗಿ ಮುನ್ನಡಿಸುವುದು ಮುಖ್ಯವಾದ ಕಾರ್ಯವಾಗಿದೆ ಎಂದು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅಭಿಪ್ರಾಯಪಟ್ಟರು.

ನಗರದ ತಾಲೂಕ್ ಪಂಚಾಯತ್ ಸಭಾಭವನದಲ್ಲಿ ಸರ್ಕಾರಿ ಮಹಿಳಾ ನೌಕರ ಸಂಘ ಜಿಲ್ಲಾ ಘಟಕದ ಉದ್ಘಾಟನೆ, ಪದಗ್ರಹ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ತಮ್ಮ ಹಕ್ಕು ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಆಯ್ದ ವ್ಯಕ್ತಿಗಳು ಸೇರಿಕೊಂಡು ಸಂಘವನ್ನು ರಚನೆ ಮಾಡುವುದು ಬಹಳ ಸರಳವಾದ ವಿಧಾನವಾಗಿದೆ. ಕೇವಲ ಸಂಘವನ್ನು ರಚನೆ ಮಾಡಿದರೆ ಸಾಲದು ಆ ಸಂಘವು ತನ್ನ ಸದಸ್ಯರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವುದು ಹಾಗೂ ಅವರ ಬೇಕು-ಬೇಡಿಕೆಗಳನ್ನು ಸರಿಯಾದ ಸಮಯದಲ್ಲಿ ಈಡೇರಿಸಿದಾಗ ಮಾತ್ರ ಸಂಘವು ಸಂಘಟನೆಯಾಗಿ ಶಾಶ್ವತವಾಗಿ ಉಳಿಯುತ್ತವೆ. ಪ್ರಸ್ತುತ ದಿನಮಾನಗಳಲ್ಲಿ ಅನೇಕ ರೀತಿಯ ಸಂಘಟನೆಗಳು ಉದಯವಾಗುತ್ತಿದ್ದು, ಅವುಗಳು ಸದಸ್ಯರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಲಿ. ಮಹಿಳೆಯರ ಸಂಘವು ಕೂಡಾ ತನ್ನ ಸದಸ್ಯರ ಬೇಡಿಕೆಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆಯ ಅಧ್ಯಕ್ಷರ ಅಮ್ಜದ್ ಪಟೇಲ್ ಮಾತನಾಡಿ, “ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಪ್ರಸ್ತುತ ದಿನಮಾನಗಳಲ್ಲಿ ಬಹಳ ಒತ್ತಡದಿಂದ ಕೆಲಸ ಮಾಡುತ್ತಿದ್ದು,ಸರ್ಕಾರವು ಅವರ ಒತ್ತಡ ಕಡಿಮೆ ಮಾಡಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಬೇಕು. ಸಂಘವು ಹಮ್ಮಿಕೊಳ್ಳುವ ಎಲ್ಲಾ ಕಾರ್ಯಗಳಿಗೆ ಸಂಪೂರ್ಣವಾದ ಸಹಕಾರ ನೀಡುವೆ” ಎಂದು ಭರವಸೆ ನೀಡಿದರು.

ತಹಶೀಲ್ದಾರ್ ವಿಠ್ಠಲ್ ಚೌಗಲೇ ಮಾತನಾಡಿ, “ಯಾವುದೇ ಸೌಲಭ್ಯವನ್ನು ಪಡೆಯಬೇಕಾದರೆ ಒಬ್ಬ ವ್ಯಕ್ತಿಯಿಂದ ಸಾಧ್ಯವಾಗುವುದಿಲ್ಲ. ಅದೇ ಸಂಘ ಹಾಗೂ ಸಂಘಟನೆಯ ಮೂಲಕ ಬೇಗ ಪಡೆಯಬಹುದಾಗಿದೆ. ಸರ್ಕಾರಿ ಸೇವೆಯಲ್ಲಿ ಇರುವ ಮಹಿಳೆಯರು ತಮ್ಮಲ್ಲಿ ಇರುವಂತ ಸಂಕುಚಿತವಾದ ಮನೋಭಾವನೆಯನ್ನು ಬಿಟ್ಟು ವಿಶಾಲವಾದ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಇತರೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಪಿಯು ಫಲಿತಾಂಶ ಗಣನೀಯ ಕುಸಿತ; ತರಗತಿ ಮುಂದುವರೆಸಲು ಶಿಕ್ಷಣ ಇಲಾಖೆ ಆದೇಶ

ಸರ್ಕಾರಿ ಮಹಿಳೆಯರ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಶೈಲಜಾ.ಸಿ.ವಿ. ಮಾತನಾಡಿ, “ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಅನೇಕ ಮಹಿಳೆಯರು ವಿವಿಧ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದು, ಅವುಗಳ ಪರಿಹಾರಕ್ಕಾಗಿ ಸಂಘಟನೆಯನ್ನು ಕಟ್ಟಲಾಗಿದೆ. ನೊಂದ ಸರ್ಕಾರಿ ಮಹಿಳಾ ನೌಕರರಿಗೆ ನ್ಯಾಯ ಒದಗಿಸಿ ಕೊಡುವ ಕೆಲಸ ಮಾಡಲಾಗುತ್ತದೆ. ಮುಂದಿನ ದಿನಗಳ ರಾಜ್ಯ ಎಲ್ಲಾ ಜಿಲ್ಲೆಯಲ್ಲಿ ಸಂಘಟನೆ ಕಟ್ಟಿ ರಾಜ್ಯ ಮಟ್ಟದ ಸಮ್ಮೇಳನ ಮಾಡುವ ಚಿಂತನೆ ಇದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾಲಕ್ಷ್ಮೀ ಪಿ ಆರ್, ಸಾಹಿತಿ ಅರುಣಾ ನರೇಂದ್ರ, ರಮಾ ಆರ್, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ, ಮಾರುತಿ ಮ್ಯಾಗಳಮನಿ, ಸುಜಾತ ಕುರಿ, ಶಂಕ್ರಮ್ಮ,‌ ಶಾಂತಾ, ಅನ್ನಪೂರ್ಣ, ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...