ಕೊಪ್ಪಳ | ಎಸ್‌ಸಿ/ಎಸ್‌ಟಿ ವಸತಿ ನಿಲಯದಲ್ಲಿ ಮೂಲಸೌಕರ್ಯ ಕೊರತೆ; ಮಕ್ಕಳು ಮನೆಯಿಂದ ತರುವ ಸ್ಥಿತಿ

Date:

ವಿದ್ಯಾರ್ಥಿಗಳು ಭವಿಷ್ಯದ ಕನಸುಗಳನ್ನು ಹೊತ್ತು ವಸತಿ ನಿಲಯಗಳಿಗೆ ಬರುತ್ತಾರೆ. ಆದರೆ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕೊರತೆಯಾಗಿದ್ದು, ಅದೆಷ್ಟೋ ಮಕ್ಕಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಮನೆಯಿಂದಲೇ ತರುವಂತಹ ಪರಿಸ್ಥಿತಿ ಎದುರಾಗಿದೆ.

ಕೊಪ್ಪಳ ನಗರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವೃತ್ತಿಪರ ವಸತಿ ನಿಲಯದ ವಿದ್ಯಾರ್ಥಿಗಳು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ.

ವಿದ್ಯಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಸತಿ ನಿಲಯದಲ್ಲಿ ಒಟ್ಟು 200ಕ್ಕಿಂತ ಅಧಿಕ ಮಕ್ಕಳು ದಾಖಲಾಗಿದ್ದಾರೆ. ಆದರೆ ವಸತಿ ನಿಲಯದಲ್ಲಿ ಹಾಸಿಗೆ ಬೆಡ್ ವ್ಯವಸ್ಥೆಯಿಲ್ಲದೆ ಮಕ್ಕಳು ಮನೆಯಿಂದ ತಂದು ಮಲಗುವ ಸ್ಥಿತಿ ನಿರ್ಮಾಣವಾಗಿದೆ. ತರಲಾರದ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳು ಬೆಡ್‌ಗಳಿಲ್ಲದೆ ನೆಲದ ಮೇಲೆಯೇ ಮಲಗುವ ಪರಿಸ್ಥಿತಿಯಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000053723
ವಸ್ತುಗಳನ್ನು ಜೋಡಿಸಲು ಕಬೋರ್ಡ್‌ಗಳಿಲ್ಲದ ಕಾರಣ ನೆಲದಲ್ಲಿಯೇ ಇಟ್ಟಿರುವ ವಸ್ತುಗಳು

“ಸೋಲಾರ್‌ ವ್ಯವಸ್ಥೆಯಿದ್ದರೂ ನೀರಿನ ಸಂಪರ್ಕ ಕಲ್ಪಿಸದ ಕಾರಣ, ಚಳಿ ಮತ್ತು ಮಳೆಗಾಲದಲ್ಲೂ ತಣ್ಣೀ‌ರು ಸ್ನಾನ ಮಡುವಂತಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಸುಸಜ್ಜಿತವಾಗಿ ಕಟ್ಟಡ ನಿರ್ಮಾಣವಾಗಿದೆ. ಆದರೆ ಈವರೆಗೂ ಮಕ್ಕಳಿಗೆ ಯಾವುದೇ ರೀತಿಯ ಬೆಡ್‌ಗಳಿಲ್ಲದೆ ಹೆಣಗಾಡುವಂತಾಗಿದೆ. ಈಗ ಚಳಿಗಾಲ ಆರಂಭವಾಗಿರುವುದರಿಂದ ಬರೀ ಚಾಪೆ ಮೇಲೆ ಮಲಗಲು ಸಾಧ್ಯವಾಗುತ್ತಿಲ್ಲ” ಎಂದು ಅವಲತ್ತುಕೊಂಡರು.

“ವಸತಿ ನಿಲಯದಲ್ಲಿ ಗ್ರಂಥಾಲಯವಿದೆ. ಆದರೆ ಅಲ್ಲಿ ಮಕ್ಕಳಿಗೆ ಓದುವುದಕ್ಕೆ ಪುಸ್ತಕಗಳಿಲ್ಲ. ಶುಚಿ ರುಚಿಯಾದ ಊಟ ನೀಡುವುದಿಲ್ಲ. ಬದಲಿಗೆ ಕಳಪೆ ಊಟ ನೀಡುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಂತೆ ಬೇಡಿಕೊಂಡರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಕಾನೂನು ಪದವಿ ವಿದ್ಯಾರ್ಥಿ ಉಮೇಶ್ ಮಾತನಾಡಿ, “ವಿದ್ಯಾರ್ಥಿಗಳು ಮನೆಯಿಂದಲೇ ಹಾಸಿಗೆ ಮತ್ತು ಹೊದಿಕೆಗಳನ್ನು ತೆಗೆದುಕೊಂಡು ಬಂದಿದ್ದಾರೆ. ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಸಂಬಂಧಿಸಿದ ಗಣಕಯಂತ್ರಗಳಿಲ್ಲ. ವಿಶಾಲವಾದ ಗ್ರಂಥಾಲಯವಿದೆ. ಆದರೆ ಓದುವುದಕ್ಕೆ ಪುಸ್ತಕಗಳಿಲ್ಲ” ಎಂದರು.

1000053720

“ವಸತಿ ನಿಲಯವು ಪ್ರಾರಂಭಗೊಂಡು ಕೆಲವೇ ವರ್ಷಗಳಾಗಿದ್ದು, ನಿಲಯದಲ್ಲಿ ಹಲವು ಸಿಬ್ಬಂದಿಗಳಿದ್ದಾರೆ. ಆದರೂ ಕೂಡಾ ನಿಲಯದ ಸ್ವಚ್ಛತೆ ಹದೆಗೆಟ್ಟಿದೆ. ಶೌಚಾಲಯಗಳು ಸ್ವಚ್ಛವಾಗಿಲ್ಲ. ವಸತಿ ನಿಲಯಕ್ಕೆ ಕಾಯಂ(ಪರ್ಮನೆಂಟ್) ವಾರ್ಡನ್ ಇಲ್ಲ. ಕಳಪೆ ದರ್ಜೆಯ ಅಡುಗೆ ಮಾಡುತ್ತಿದ್ದಾರೆ. ಇಲಾಖೆಯು ವಸತಿ ನಿಲಯಗಳಿಗೆ ಲಕ್ಷಗಟ್ಟಲೆ ಖರ್ಚು ಮಾಡುತ್ತಿದೆಯಾದರೂ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳು ದೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಶಿವಪ್ಪ ಬಾವಿಕಟ್ಟಿ ಮಾತನಾಡಿ, “ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಇಡೀ ಕೊಪ್ಪಳ ಜಿಲ್ಲೆಗೆ ಒಂದೇ ಒಂದು ವೃತ್ತಿಪರ ವಸತಿ ನಿಲಯವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಿಂತ ಅಧಿಕವಾಗಿ ಇತರೆ ವರ್ಗ ಹಾಗೂ ಅನರ್ಹ ವ್ಯಕ್ತಿಗಳಿದ್ದಾರೆ. ಇದರಿಂದಾಗಿ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಹುತೇಕ ವಿದ್ಯಾರ್ಥಿಗಳು ವಸತಿ ನಿಲಯದಿಂದ ವಂಚಿತರಾಗಿದ್ದಾರೆ. ವಾರ್ಡನ್‌ ಕೇಳಿದರೆ ಮುಂದಿನ ತಿಂಗಳು ಬರುತ್ತವೆ, ಇನ್ನು 15 ದಿನಗಳಲ್ಲಿ ಬರುತ್ತವೆಂದು ಹೇಳಿ ದಿನಗಳನ್ನು ಮುಂದೂಡುತ್ತಿದ್ದಾರೆ” ಎಂದರು.

1000053717
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...