ಕೊಪ್ಪಳ | ಬಗರ್ ಹುಕುಂ ಭೂಮಂಜೂರಾತಿಗೆ ತೊಡಕಾಗಿರುವ ಕಾನೂನು ತಿದ್ದುಪಡಿ ಮಾಡಿ: ಭೂಮಿ ವಂಚಿತರ ಆಗ್ರಹ

Date:

ರಾಜ್ಯದ ಲಕ್ಷಾಂತರ ಬಡ ಸಾಗುವಳಿದಾರರಿಗೆ ಬಗರ್ ಹುಕುಂ ಭೂಮಂಜೂರಾತಿ ನೀಡುತ್ತಿರುವುದು ಸ್ವಾಗತಾರ್ಹ. ಜತೆಗ ತಿರಸ್ಕೃತ ಅರ್ಜಿಗಳನ್ನು ಮರು ಪರಿಶೀಲಿಸಿ ಮಂಜೂರಾತಿ ನೀಡಲು ಕಾನೂನು ತೊಡಕಾಗಿದ್ದು, ಇವುಗಳನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಕೊಪ್ಪಳ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಅರಣ್ಯ ಹಕ್ಕು ಕಾಯ್ದೆಯನ್ವಯ ಸಲ್ಲಿಸಿರುವ ಅರ್ಜಿಗಳು ಮಾನ್ಯಗೊಳ್ಳದೆ ಇನ್ನೂ ಆತಂತ್ರ ಸ್ಥಿತಿಯಲ್ಲಿಯೇ ಇರುವುದರಿಂದ ಸಾಗುವಳಿ ಮಾಡುತ್ತಿರುವ ಭೂಹೀನ ಬಡರೈತರು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೆ ಇದೇ ಕಾರಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳವನ್ನೂ ಅನುಭವಿಸಬೇಕಾಗುತ್ತದೆ” ಎಂದರು.

“ಸರ್ಕಾರಿ ಆ ಖರಾಬ್, ಬ ಖರಾಬ್, ತಾಳಗುಡ್ಡ, ಪಾರಂದೂಕು, ಚೌಗು ಪ್ರದೇಶ, ಅವಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮರತ ಭೂಮಿ, ಪಾರೀಹ ಖಾತಾ, ಇನಾಂ ಭೂಮಿಗಳು ತನ್ನ ಮೂಲ ಕಂದಾಯ ನಿಯಮದಂತೆ ಮೂಲ ಸ್ವರೂಪ ಬದಲಾಯಿಸಿವೆ. ಇಷ್ಟು ವರ್ಷಗಳ ಕಾಲ ಅದೇ ಹೆಸರಿನಲ್ಲಿ ಮುಂದುವರೆಸಲಾಗಿದೆ. ನೂರು ವರ್ಷಗಳ ಕಣ್ಣೋಟದಲ್ಲೇ ಕಂದಾಯ ಇಲಾಖೆ ಗ್ರಹಿಸುತ್ತಿದ್ದು, ಇದು ಬದಲಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರ ಮಿತಿಯ ಹೆಸರಲ್ಲಿ ಲಕ್ಷಾಂತರ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. 1985ರ ಆಚೆಯಿಂದ ಸಾಗುವಳಿ ಮಾಡುತ್ತ ಫಾರಂ ನಂ. 50, 53ರಲ್ಲಿ ಅರ್ಜಿ ಸಲ್ಲಿಸಿದ್ದರೂ ಕೆಲವು ಕಡೆಗಳಲ್ಲಿ 2991-92ರಲ್ಲಿ ಭೂಮಂಜೂರಾತಿ ಆಗಿರುವ ಪ್ರಕರಣಗಳಿದ್ದರೂ, ಭೂಮಿಯ ಹಕ್ಕು ಜನರಿಗೆ ಸಿಕ್ಕಿಲ್ಲ” ಎಂದರು.

“ಸಾಗುವಳಿ ಮಾಡುತ್ತ ಅರ್ಜಿ ಸಲ್ಲಿಸಿರುವ ಬಹುತೇಕರು ಭೂರಹಿತರೇ ಆಗಿದ್ದಾರೆ. ಅದರಲ್ಲೂ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರುಗಳಿಗೆ ಸಾಮಾಜಿಕ ನ್ಯಾಯವಾಗಿಯೂ ಈ ಭೂಮಿ ಮಂಜೂರಾತಿ ನೀಡುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ್ದು ಸರ್ಕಾರದ ಜವಾಬ್ದಾರಿ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

“ವಸತಿ ವಿಚಾರವೂ ರಾಜ್ಯಾದ್ಯಂತ ಇದ್ದು, ವಸತಿಯೂ ಮೂಲಭೂತ ಹಕ್ಕಾಗಿರುವುದರಿಂದ ವಸತಿ ರಹಿತರಿಗೆ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ಗೌರವಯುತವಾದ ಬದುಕು ಕಟ್ಟಿಕೊಳ್ಳಲು ಇರುವ ಜಾಗ ಮಾನ್ಯ ಮಾಡಬೇಕು. ಜಾಗವಿಲ್ಲದವರಿಗೆ ವಾಸಕ್ಕೆ ಜಾಗ ನೀಡಬೇಕು” ಎಂದು ಆಗ್ರಹಿಸಿದರು.

“ಸರ್ಕಾರ ಬಡವರಿಗೆ ಭೂಮಿ-ವಸತಿ ಹಕ್ಕು ಮಾನ್ಯ ಮಾಡಿ ಮಂಜೂರಾತಿ ನೀಡಲು ಈ ಮೇಲಿನ ಭೂಮಿಗಳಿಗೆ ಇರಬೇಕಾದ ಮಾನದಂಡಗಳನ್ನು, ಇರುವ ಕಾನೂನು ತೊಡಕುಗಳನ್ನು ತಿದ್ದುಪಡಿ ಮಾಡುವ ಮೂಲಕ ಜನರಿಗೆ ಭೂಮಿಯ ಹಕ್ಕು ದೊರಕಿಸಿಕೊಡಬೇಕು” ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...