ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ 15 ವರ್ಷಗಳಿಂದಲೂ ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರ ಕಾರ್ಮಿಕ ಇಲಾಖೆಯಡಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿದರೂ ಇದನ್ನು ಜಾರಿ ಮಾಡದೇ ಮೀನಾ ಮೇಷ ಮಾಡುತ್ತಿದ್ದಾರೆ. ಇಂತಹ ನಡೆಯನ್ನು ಬಿಟ್ಟು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಕೊಪ್ಪಳ ಜಿಲ್ಲಾ ಸಮಿತಿಯು ಸಾಮೂಹಿಕ ಪ್ರತಿಭಟನೆ ನಡೆಸಿತು.

“ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಸಿಬ್ಬಂದಿಗಳಿಗೆ 2 ತಿಂಗಳ ವೇತನ ನೀಡಿರುವುದೇ ಹೊರತು ಪಿಎಫ್ ಇಎಸ್ಐ ಜಮಾ ಆಗಿಲ್ಲ. ದೂರು ನೀಡಿದರೂ ಇಲಾಖೆ ಆಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಖಾಸಗಿ ಏಜೆನ್ಸಿಗಳನ್ನು ರದ್ದು ಮಾಡಿ ಬೀದರ್ ಮಾದರಿ ಸೊಸೈಟಿ ರಚಿಸಿ. ಇಲ್ಲವೇ ಸರ್ಕಾರ ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು” ಎಂದು‌ ಪ್ರತಿಭಟನಾಕಾರರು ಮನವಿ ಮಾಡಿದರು.

“8ರಿಂದ 10ವರ್ಷ ಕೆಲಸ ಮಾಡಿದ ಅನೇಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿ ಶಾಸಕರು, ಸಂಸದರು ನಿರ್ದೇಶಿಸಿದಂತೆ ಅಧಿಕಾರಿಗಳು ಸಿಬ್ಬಂದಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಿ ಹಳೆ ಸಿಬ್ಬಂದಿಗಳಿಗೆ ಕೆಲಸ ಕೊಡಬೇಕು. ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಪರಿಷ್ಕರಣೆ ಕರಡು ಅಧಿಸೂಚನೆ ಹೊರಡಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿ ಮಾಡಬೇಕು. ಕನಿಷ್ಠ ವೇತನ ತಿಂಗಳಿಗೆ ₹36,000 ಕೊಡಬೇಕು. ಕ್ರೇಸ್ ಟೆಂಡರ್ ನೋಟಿಫಿಕೇಷನ್ ರದ್ದು ಮಾಡಿ. ಬೀದರ್ ಮಾದರಿ ಸೊಸೈಟಿ ರಚಿಸಿ, ಹೊರಗುತ್ತಿಗೆ ನೌಕರರ ಹಿತ ಕಾಪಾಡಬೇಕು. ಇಲ್ಲವೇ ಸಹಕಾರ ಸಂಘಕ್ಕೆ ಅನುಮತಿ ನೀಡಿ ಮುಂದುವರೆಸಿ ಅಥವಾ ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚಿಸಿ ವೇತನ ನೀಡಬೇಕು”‌ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ನಿವೃತ್ತಿವರೆಗೆ ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕೊಟ್ಟು ಕಾಯಂ ಮಾಡಬೇಕು. ಬಾಕಿ ಇರುವ ವೇತನ ತಕ್ಷಣ ಕೊಡಬೇಕು. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ ನೀಡಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಿಬ್ಬಂದಿಗಳಿಗೆ 2 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ಸ್ವಿಸ್ ಏಜೆನ್ಸಿಯವರು ಯಾವುದೇ ಸಿಬ್ಬಂದಿಗೂ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಪಿಎಫ್ ಇಎಸ್ಐ ಕಟ್ಟಿಲ್ಲ. ಐಡಿ ಕಾರ್ಡ್‌ ಯಾವುದೇ ಮೂಲಭೂತ ಸೌಲಭ್ಯ ನೀಡದೇ ಇರುವುದರಿಂದ ಕೂಡಲೇ ಸ್ವಿಸ್ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಗ್ಯಾನೇಶ ಕಡಗದ, ಮಹ್ಮದ್ ರಫೀಕ್, ಫಕೀರಪ್ಪ, ಹುಸೇನಪ್ಪ, ಬಸವರಾಜ, ನಿರುಪಾದಿ, ನೂರ್‌ಪಾಷ, ಮಂಜು ಜೋಶಿ, ಕನಕರಾಯ ಡಗ್ಗಿ, ತೊಂಡೆಪ್ಪ, ಬಾಳೇಶ, ಮಾರುತಿ, ಖಾಸಿಂ ಸಾಬ ಸರ್ದಾರ್, ಸುಂಕಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...