ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳ ಕಠಿಣ ಶಿಕ್ಷೆಗೆ ಆಗ್ರಹ

Date:

ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಕೊಪ್ಪಳ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ಈ ಕುರಿತು ಎಸ್‌‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಸಮುದಾಯ ಜಿಲ್ಲಾ ಸಂಯುಕ್ತ ಜಂಟಿಯಾಗಿ ಪ್ರತಿಭಟಿಸಿ ಜಿಲ್ಲಾಧಕಾರಿಗಳ ಮುಖಾಂತರ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಮುದಾಯದ ಜಿಲ್ಲಾಧ್ಯಕ್ಷ ಸಂಜಯ್‌ ದಾಸ್ ಕೌಜಗೇರಿ ಮಾತನಾಡಿ, ʼಬೆಂಗಳೂರಿನಲ್ಲಿ ಕೊಪ್ಪಳದ ಸಿಳ್ಳಿಕ್ಯಾತ ಅಲೆಮಾರಿ ಸಮುದಾಯದ ಮಗುವನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಹೊಟ್ಟೆಪಾಡಿಗಾಗಿ ವಲಸೆ ಹೋಗಿದ್ದ ಹೆಣ್ಣು ಮಕ್ಕಳಿಗೆ ಬೆಂಗಳೂರಿನಲ್ಲಿ ಸುರಕ್ಷತೆಯೇ ಇಲ್ಲದಂತಾಗಿದೆ. ಇಂತಹ ಬಡ ಕುಟುಂಬಗಳ ಮೇಲೆ ಅನ್ಯಾಯ ಆಗಿರುವುದು ಖಂಡನೀಯವಾಗಿದೆ. ಸರ್ಕಾರ ಈ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಕೃಷ್ಣವೇಣಿ ಪಿ.ಚನ್ನದಾಸರ ಮಾತನಾಡಿ, ʼಅಲೆಮಾರಿ ಬುಡಕಟ್ಟು ಸಮುದಾಯಗಳು ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗಿ ಬೇರೆಬೇರೆ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುತ್ತಾರೆ. ಮೂಲ ಕಸುಬು ನಡೆಸಿದರೆ ಉಪಜೀವನ ನಡೆಸಲು ಸಾಧ್ಯವಾಗದ ಕಾರಣಕ್ಕೆ ಹೊಟ್ಟೆಪಾಡಿಗಾಗಿ ನಗರಗಳಿಗೆ ವಲಸೆ ಹೋಗುವುದು ಅನಿವಾರ್ಯವಾಗಿದೆ. ವಲಸಿಗ ಮಕ್ಕಳ ಮೇಲೆ ಅತ್ಯಾಚಾರ,‌ ಕೊಲೆ ನಡೆಸುವುದು ಕೌರ್ಯ ಮನಸ್ಥಿತಿಯಾಗಿದೆ. ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕುʼ ಎಂದು ಒತ್ತಾಯಿಸಿದರು.

ಶಿವಣ್ಣ ಕಲಕೇರಿ,‌ ಬಸವರಾಜ್ ವಿಭೂತಿ, ಲೋಕೇಶ್ ಭಜಂತ್ರಿ, ಜಯಣ್ಣ ಸಿಂದೋಳ್ಳಿ,‌ ಬಸಣ್ಣ ವಿಭೂತಿ, ರಮೇಶ್ ಚನ್ನದಾಸರ,‌ ಗೌರಿ.ಡಿ.ಗೋನಾಳ,‌ ರಾಮಕೃಷ್ಣ ಹೆಚ್.ಚನ್ನದಾಸರ,‌ ತಿಮ್ಮಣ್ಣ ದಾಸರ, ನಾಗರಾಜ್ ಮಾಲದಾಸರ, ಬಸವರಾಜ್ ಚನ್ನದಾಸರ ಹಿರೇಮನ್ನಾಪೂರ,‌ ವಿರುಪಣ್ಣ ಕಲಕೇರಿ, ಕರಿಯಪ್ಪ ದಾಸರ, ಹನುಮೇಶ್ ಚನ್ನದಾಸರ ಈಳೀಗನೂರು, ಗವಿಸಿದ್ದಪ್ಪ ಹಲಗಿ, ಶಶಿಕಲಾ ಮಠದ, ಹನುಮಂತಪ್ಪ ಜಿ ಸುಂಕಾಪುರ, ಯಂಕಪ್ಪ ಹೆಬ್ಲಿ, ಮಹೇಶ್ ಕೊಂಡಪಲ್ಲಿ. ಗಿಡ್ಡಪ್ಪ,‌ ದುರ್ಗಪ್ಪ, ಆರ್.ಕೃಷ್ಣ ಬುಡಜಂಗಮ, ಬಸವರಾಜ್ ಶೀಲವಂತರ್, ಎಸ್.ಎ.ಗಫಾರ್, ಗಾಳೆಪ್ಪ ಮುಂಗೋಲಿ, ಮಖಬೂಲ್ ರಾಯಚೂರು, ಚನ್ನಬಸಪ್ಪ ಅಪ್ಪಣ್ಣವರ್, ಪರಶುರಾಮ ಕೆರೆಹಳ್ಳಿ,‌ ನಿಂಗಪ್ಪ ಬೆಣಕಲ್,‌ ಮೈಲಪ್ಪ ಮಾದಿನೂರು, ಮಾರುತಿ ದೊಡ್ಡಮನಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...