ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ

Date:

ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ ಎಸಗಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದ ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, 21 ವರ್ಷದ ಆರೋಪಿ ಅಣ್ಣನ ವಿರುದ್ಧ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ.

ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಮಹಿಳಾ ಪೊಲೀಸ್‌ ಠಾಣೆಗೆ ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆರೋಪಿ ಅಣ್ಣ ತನ್ನ ಅಪ್ರಾಪ್ತೆ ತಂಗಿ ಬಳಿ ತಾನು ಆಕೆಯನ್ನು ಮದುವೆ ಆಗುವುದಾಗಿ ಹೇಳಿದ್ದ. ʼನಿನ್ನನ್ನು ಯಾವತ್ತೂ ಕೈಬಿಡಲ್ಲ, ಚೆನ್ನಾಗಿ ನೋಡಿಕೊಳ್ಳುತ್ತೇನೆ. ಯಾರೂ ನಿನಗೆ ಏನು ಹೇಳದ ರೀತಿ ಕಾವಲಾಗಿ ಇರುತ್ತೇನೆʼ ಎಂದೆಲ್ಲ ಪುಸಲಾಯಿಸಿದ್ದ. ಈ ವೇಳೆ ಸಂತ್ರಸ್ತೆ ಇದನ್ನು ವಿರೋಧಿಸಿದ್ದು ಸಮಾಜ ಈ ರೀತಿಯ ಸಂಬಂಧವನ್ನು ಒಪ್ಪಲ್ಲ ಎಂದಿದ್ದರೂ ಆಕೆಯ ಬೆನ್ನು ಬಿದ್ದಿದ್ದ ಆತ ತಂಗಿಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದ. ವಿಷಯವನ್ನು ಮನೆಯವರಿಗೆ ತಿಳಿಸಲು ಸಂತ್ರಸ್ತೆ ಯತ್ನಿಸಿದ್ದಳು. ಆದರೆ ಈ ವೇಳೆ ವಿಷಯ ಮನೆಯವರಿಗೆ ಹೇಳಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಆರೋಪಿ ಬೆದರಿಸಿದ್ದ ಎಂದು ಸಂತ್ರಸ್ತೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...