ಕೊಪ್ಪಳ | ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸಿದ ಕಿಡಿಗೇಡಿಗಳು

Date:

ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ ಮತ್ತೊಮ್ಮೆ ಕೋಮುಸಾಮರಸ್ಯ ಕದಡಲು ಸಂಚು ನಡೆಸಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಕಳೆದ ಫೆಬ್ರವರಿ ತಿಂಗಳು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆದಿತ್ತು. ಕನಕಗಿರಿ ಪಟ್ಟಣ ಎಲ್ಲ ಸಮುದಾಯಗಳು ಒಂದಾಗಿ ಕೋಮುಸಾಮರಸ್ಯ, ಸಹಬಾಳ್ವೆಯಿಂದ ಜೀವನ ನಡೆಸುತ್ತಿವೆ. ಅದರೆ, ಎರಡು ಕೋಮುಗಳ ಮಧ್ಯೆ ಕಂದಕ ಸೃಷ್ಟಿಸಿ ಪಟ್ಟಣದ ಸಹಬಾಳ್ವೆ, ಸಾಮರಸ್ಯಕ್ಕೆ ಬೆಂಕಿಹಚ್ಚಿದ ಕೆಲಸ ಮತ್ತೆ ನಡೆಯುತ್ತಿರುವುದು ಕೇಳಿಬರುತ್ತಿದೆ.

ಮುಸಲ್ಮಾನ ಬಾಂಧವರ ರಂಝಾನ್‌ ಹಬ್ಬ ಆರಂಭವಾಗಿರುವ ಬೆನ್ನಲ್ಲೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಕಟ್ಟಡದ ಮೇಲೆ ಅಶ್ಲೀಲ ಚಿತ್ರ ಬಿಡಿಸಿ ಕೋಮುಸಾಮರಸ್ಯ ಕದಡಲು ಮುಂದಾಗಿದ್ದು, ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಡೆ ಮೇಲೆ ಅಶ್ಲೀಲ ಚಿತ್ರ ನೋಡಿದ ಇಸ್ಲಾಂ ಕಮಿಟಿಯ ಸದಸ್ಯ ರಿಯಾಜ್ ಈ ದಿ‌ನ.ಕಾಮ್ನೊಂದಿಗೆ ಮಾತನಾಡಿ, “ಯಾರೋ ಕಿಡಿಗೇಡಿಗಳು ಮಾರ್ಚ್ 2ರಂದು ನಮ್ಮ ಈದ್ಗಾ ಪ್ರಾರ್ಥನಾ ಕಟ್ಟಡದ ಗೋಡೆ ಮೇಲೆ ಅಸಹ್ಯವಾದ ಚಿತ್ರ ಬಿಡಿಸಿದ್ದಾರೆ. ವಿಷಯ ತಿಳಿದು ಪೋಲೀಸರು ಬಂದು ಚಿತ್ರ ಅಳಿಸಲು ಸೂಚಿಸಿ, ಅದನ್ನು ಅಳಿಸಿ ಹಾಕಿದ್ದಾರೆ” ಎಂದು ಕರೆಯ ಮೂಲಕ ವಿಷಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ದಿನಾಚರಣೆ; ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025

“ಘಟನೆ ವಿರುದ್ಧ ಪಿರ್ಯಾದಿ ಕೊಡಲು ಇಸ್ಲಾಮ್ ಕಮಿಟಿ ಸದಸ್ಯರು ಹೋದಾಗ ಸಿಬ್ಬಂದಿ, ‘ಅಧಿಕಾರಿಗಳು ಜಾತ್ರೆಗೆ ಬಂದೋಬಸ್ತ್‌ಗೆ ಹೋಗಿದ್ದಾರೆ’ ಎಂದು ಸಬೂಬು ಹೇಳಿದ್ದಾರೆ. ಎರಡನೇ ದಿನ ಮಾರ್ಚ್ 3ರಂದು ಪಿರ್ಯಾದಿ ತೆಗೆದುಕೊಂಡಿದ್ದಾರೆ” ಎಂದು ಅಲ್ತಾಫ್‌ ಈ ದಿನ.ಕಾಮ್‌ಗೆ ಹೇಳಿದರು.

ಪೋಲೀಸರು ಆರೋಪಿಗಳನ್ನು ಪತ್ತೆಹಚ್ಚಿ ನಾವು ಸೂಕ್ತಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...