ಕೊಪ್ಪಳ | ಪಿಯುಸಿಯಲ್ಲಿ ಶೇ.98 ಅಂಕ ಪಡೆದ ಮಗಳ ಓದಿಗೆ ಶುಲ್ಕ ಕಟ್ಟಲಾಗದೆ ಕಣ್ಣೀರಟ್ಟ ತಾಯಿ

Date:

ಪಿಯುಸಿಯಲ್ಲಿ ಶೇ.98ರಷ್ಟು ಅಂಕ ಪಡೆದ ವಿದ್ಯಾರ್ಥಿನಿಗೆ ಬಿಎಸ್‌ಸಿ ಅಗ್ರಿ ಸೀಟ್ ಸಿಕ್ಕಿದೆ. ಆದರೂ ಓದು ಮುದುವರೆಸಲು ಬಡತನ ಅಡ್ಡಿಯಾಗಿದೆ ಎಂದು ವಿದ್ಯಾರ್ಥಿನಿ ತಾಯಿ ಸವಿತಾ ಮೇಟಿ ಕಣ್ಣೀರು ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಭೂಮಿಕಾ ಅವರ ತಾಯಿ ಸವಿತಾ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ನನ್ನ ಬಡತನವೇ ಮಗಳ ಓದಿಗೆ ಅಡ್ಡಿಯಾಗಿದೆ. ಮುಂದೆ ಓದಿಸಲಾಗುತ್ತಿಲ್ಲ. ಆರ್ಥಿಕವಾಗಿ ತುಂಬಾ ಕಷ್ಟವಾಗುತ್ತಿದೆ” ಎಂದು ಗಳಗಳನೆ ಅಳತೊಡಗಿದರು.

“ನನ್ನ ಮಗಳು ಭೂಮಿಕಾ ಮೇಟಿ ತಂದೆ ಇಲ್ಲದ ತಬ್ಬಲಿ, ತಂದೆ ತೀರಿಕೊಂಡ ಬಳಿಕ ಗ್ರಾಮದ ಹಿರಿಯರು ಸೇರಿಕೊಂಡು ನನಗೆ ಸ್ಥಳೀಯ ಶಾಲೆಯಲ್ಲಿ ಬಿಸಿಯೂಟ ತಯಾರಕರ ಕೆಲಸ ಕೊಡಿಸಿದರು. ಅದರಿಂದ ಬರುವ ಚಿಕ್ಕ ಸಂಬಳದಲ್ಲಿ ಮನೆ ನಡೆಸುವುದೇ ದುಸ್ತರವಾಗಿದೆ. ಇಂತಹ ಕಡುಬಡತನದಲ್ಲೂ ಮಗಳು ಪಿಯುಸಿಯಲ್ಲಿ ಶೇ.98ರಷ್ಟು ಅಂಕ ಪಡೆದು, ಧಾರವಾಡ ವಿವಿಯಲ್ಲಿ ಬಿಎಸ್‌ಸಿ ಅಗ್ರಿ ಪದವಿ ಪ್ರವೇಶ ಪಡೆದಿದ್ದಾಳೆ. ಆದರೆ, ಮಗಳ ಓದಿಗೆ ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸುವಷ್ಟು ಶಕ್ತಿ ನನ್ನಲ್ಲಿಲ್ಲ” ಎಂದು ಸಂಕಟಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಗಳ ಓದಿಗೆ ವರ್ಷಕ್ಕೆ ಕನಿಷ್ಠ ಒಂದು ಲಕ್ಷಕ್ಕೂ ಹೆಚ್ಚು ಖರ್ಚಾಗುತ್ತದೆಂದು ಹೇಳಿದ್ದಾರೆ. ಅಷ್ಟು ಶುಲ್ಕ ಭರಿಸುವ ಶಕ್ತಿ ತಮಗಿಲ್ಲ. ಮಗಳ ಓದಿನ ಕನಸು ಕನಸಾಗಿಯೇ ಉಳಿದುಬಿಡುತ್ತದೆಂಬ ಆತಂಕವಿದ್ದರೂ ಎದೆಗುಂದದೆ ಮೈಕ್ರೋ‌ಫೈನಾನ್ಸ್ ಬ್ಯಾಂಕಿನಲ್ಲಿ 60 ಸಾವಿರ ಸಾಲ ಪಡೆದು ಮಗಳಿಗೆ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಕೊಡಿಸಿದೆ. ಆದರೆ, ಪ್ರತಿ ತಿಂಗಳು ಸಾಲದ ಬಡ್ಡಿ ತೀರಿಸಲಾಗದ ಸಂಕಷ್ಟದ ಪರಿಸ್ಥಿತಿ ಒದಗಿದೆಬಂದಿದೆ” ಎಂದರು.

“ಬಡ್ಡಿ ಕಟ್ಟುವ ಜೊತೆಗೆ ಮಗಳ ಓದಿನ ಖರ್ಚನ್ನೂ ಭರಿಸಬೇಕಿದೆ. ಬಿಸಿಯೂಟದ ಕಾರ್ಯಕರ್ತೆಯಾಗಿ ಕೆಲಸದಿಂದ ತಿಂಗಳಿಗೆ ಕೇವಲ ₹4,700 ಮಾತ್ರ ಸಂಬಳ ಬರುತ್ತದೆ. ಇದರಿಂದ ಮನೆ ನಿಭಾಯಿಸಿಕೊಂಡು ಹೋಗುವುದೇ, ಮಗಳನ್ನು ಓದಿಸುವುದೇ ತಿಳಿಯದಾಗಿದೆ. ಈಗಾಗಲೇ ₹45,000 ಶುಲ್ಕ ಪಾವತಿಸಿದ್ದೇನೆ. ಆದರೆ, ಇನ್ಮುಂದೆ ಓದಿಸಲು ನನ್ನಿಂದಾಗದು. ಇದರಿಂದ ಮಗಳ ಓದು ಅರ್ಧಕ್ಕೆ ನಿಲ್ಲುತ್ತದೆ, ಮಗಳ ಭವಿಷ್ಯ ಹಾಳಾಗುತ್ತದೆಂದು ಹೆದರಿಕೆಯಾಗುತ್ತಿದೆ” ಎಂದು ತಾಯಿ ಸವಿತಾ ಅಳತೊಡಗಿದ್ದಾರೆ.

“ಮಗಳು ಪಿಯುಸಿಯಲ್ಲಿ ಶೇ.98ರಷ್ಟು ಪಡೆದಾಗ ಇಡೀ ಕುಟುಂಬ ಹಾಗೂ ಸಂಬಂಧಿಕರು‌ ಸಂಭ್ರಮಪಟ್ಟಿದ್ದೆವು. ಆದರೆ, ಮಗಳ ಓದಿನ ಕನಸು ಹಾಗೂ ಅದಕ್ಕೆ ತಗಲುವ ಲಕ್ಷಾಂತರ ರೂಪಾಯಿ ಖರ್ಚಿನ ವೆಚ್ಚ ತಿಳಿದು ಕುಗ್ಗಿದೆವು. ಕೇವಲ ಬಿಸಿಯೂಟ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುವ ನನ್ನಿಂದ ಇದು ಸಾಧ್ಯವಿಲ್ಲ ಎನಿಸಿತು. ಹಾಗೆಂದು ತನ್ನ ಮಗಳನ್ನು ಶಿಕ್ಷಣದಿಂದ ವಂಚಿತಳನ್ನಾಗಿ ಮಾಡುವುದಿಲ್ಲ. ನನ್ನ ಜೀವ ಕೊಟ್ಟಾದರೂ ನನ್ನ ಮಗಳನ್ನು ಓದಿಸುತ್ತೇನೆ. ಮಗ ಪಿಯುಸಿ ಓದುತ್ತಿದ್ದು, ಆತನನ್ನೂ ಓದಿಸಬೇಕಿದೆ. ಮಗಳು ಹಿರೇಸಿಂದೋಗಿ ಮೊರಾರ್ಜಿ ಶಾಲೆಯಲ್ಲಿದ್ದುಕೊಂಡು ಓದಿಯೇ ಪಿಯುಸಿಯಲ್ಲಿ ಶೇ.98 ಅಂಕ ಪಡೆದಿದ್ದಾಳೆ. ಈಗ ಮುಂದಿನ ಶಿಕ್ಷಣಕ್ಕೆ ಕಷ್ಟವಾಗಿದೆ” ಎನ್ನುತ್ತಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಲ್ಡೋಟಾ ಕಾರ್ಖಾನೆಯ ಕಾರ್ಮಿಕ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವು

ಬಡತನದ ಬೇಗೆಯಲ್ಲಿ ಇರುವ ಸವಿತಾ ಮೇಟಿಯವರು ಪ್ರತಿಭಾವಂತ ಮಕ್ಕಳ ಓದಿನ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಸಹಾಯ ಮಾಡುವವರು ಅವರ ಬ್ಯಾಂಕ್ ಖಾತೆ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಾತರಕಿ.
ಹೆಸರು : ಭೂಮಿಕಾ ಮಂಜಪ್ಪ ಮೇಟಿ,
ಖಾತೆ ಸಂಖ್ಯೆ -10904100002246,
ಐಎಫ್‌ಎಸ್‌ಸಿ ಸಂಖ್ಯೆ : PKGB0010904 ಖಾತೆಗೆ ನೆರವು ನೀಡಬಹುದಾಗಿದೆ. ಅವರನ್ನು ಸಂಪರ್ಕಿಸಲು 9845057768ಕ್ಕೆ ಕರೆ ಮಾಡಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...