ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಾದ ಹೀರಾಬಾಯಿ ನಾಗರಾಜ್ ಸಿಂಗ್ ಅವರು ಅಧ್ಯಕ್ಷರಾಗಿ ಹಾಗೂ ಸುಧಾ ಸೋಮನಾಥ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಎಲ್ಲಾ 28 ಸದಸ್ಯರೂ ಒಗ್ಗಟ್ಟಾಗಿ ಬೆಂಬಲ ನೀಡಿದ್ದರಿಂದ ಹೀರಾಬಾಯಿ ಮತ್ತು ಸುಧಾ ಇಬ್ಬರೂ ಏಕಮತದಿಂದ ಆಯ್ಕೆಯಾದರು. ಈ ಮೂಲಕ ನಗರಸಭೆಯ ಆಡಳಿತವನ್ನು ಮತ್ತೊಮ್ಮೆ ಬಿಜೆಪಿ ತನ್ನ ವಶಕ್ಕೆ ತೆಗೆದುಕೊಂಡಿದೆ.

ಫಲಿತಾಂಶ ಕುರಿತು ಶಾಸಕ ಗಾಲಿ ಜನಾರ್ಧನ ರೆಡ್ಡಿ ಮಾತನಾಡಿ, “ಈ ಚುನಾವಣೆಯ ಫಲಿತಾಂಶವು ಬಿಜೆಪಿಯ ಸಂಘಟಿತ ಶಕ್ತಿ ಮತ್ತು ನಗರದ ಜನತೆಯ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಅಧ್ಯಕ್ಷರಾದ ಹೀರಾಬಾಯಿ ನಾಗರಾಜ್ ಸಿಂಗ್ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಸುಧಾ ಸೋಮನಾಥ್ ಅವರ ನೇತೃತ್ವದಲ್ಲಿ ಗಂಗಾವತಿ ನಗರವು ಸರ್ವತೋಮುಖವಾಗಿ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಯಲಿ, ಜನಸೇವೆ, ಪಾರದರ್ಶಕ ಆಡಳಿತ ಹಾಗೂ ನಗರದ ಸಮಗ್ರ ಬೆಳವಣಿಗೆಗೆ ಇಬ್ಬರೂ ಶ್ರಮಿಸಲಿ” ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 03 at 10.37.27 AM 1

ಈ ವೇಳೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಬಸವರಾಜ್ ದಡೇಸುಗೂರು, ವಿರುಪಾಕ್ಷಪ್ಪ ಸಿಂಗನಾಳ್, ಗೆರೇಗೌಡ್ರು, ತಿಪ್ಪೇರುದ್ರಸ್ವಾಮಿ, ಕಾಶಿನಾಥ್ ಚಿತ್ರಗಾರ, ರಮೇಶ್ ಚೌಡ್ಕಿ, ಪಂಪಾಪತಿ ಸಿಂಗನಾಳ್, ಡಿ.ಕೆ ಆಗೋಲಿ, ಮನೋಹರಗೌಡ ಹೇರೂರು, ಯಮನೂರು ಚೌಡ್ಕಿ, ಚನ್ನವೀರನ ಗೌಡ್ರು, ಚಂದ್ರು ಹೀರೂರು, ವೆಂಕಟೇಶ್ ಜಬ್ಬಲಗುಡ್ಡ, ನಾಗರಾಜ್ ಚಳಗೇರಿ, ರಮೇಶ್ ಹೊಸಮಲಿ, ಅರ್ಜುನ್ ನಾಯಕ್, ದುರ್ಗಪ್ಪ ದಳಪತಿ, ಗಂಗಾಧರ ಸ್ವಾಮಿ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೊಪ್ಪಳ | ತರಕಾರಿ ಬೆಲೆ ಕುಸಿತ; ರೈತರಿಗೆ ಆರ್ಥಿಕ ಹೊಡೆತ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...