ಕೊಪ್ಪಳ | ಗಣೇಶ ಚತುರ್ಥಿಯ ಮರುದಿನ ಮುಸ್ಲಿಮರ ಈ ಮನೆಯಲ್ಲಿ ಇಲಿ ಪೂಜೆ!

Date:

ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ ಸುದ್ದಿಗಳನ್ನು ಎಲ್ಲ ವರ್ಷ ಓದುತ್ತೇವೆ.

ಇಲಿಗಳು ಮನೆಯಲ್ಲಿದ್ದರೆ ಬಟ್ಟೆ, ದವಸ ಧಾನ್ಯಗಳನ್ನು ಹಾಳು ಮಾಡುತ್ತವೆ. ಇದರಿಂದಾಗಿ ನಿತ್ಯದ ಜೀವನದಲ್ಲಿ ವಿಘ್ನಗಳು ಎದುರಾಗುತ್ತವೆ. ನಮ್ಮ ನಿತ್ಯದ ಬದುಕಿನಲ್ಲಿ ಯಾವುದೇ ವಿಘ್ನಗಳು ಬಾರದಿರಲಿ ಎಂದು ಗಣಪತಿಯನ್ನು ಆರಾಧಿಸುತ್ತಾರೆ. ಆದರೆ, ಈ ಗೌರಿಸುತನ ವಾಹನವಾಗಿರುವ ಇಲಿಗೂ ಕೂಡಾ ಒಂದು ದಿನ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ವಿಶಿಷ್ಠ ಆಚರಣೆಯನ್ನು ಉತ್ತರ ಕರ್ನಾಟಕದಲ್ಲಿ ಬಹುತೇಕರು ಆಚರಿಸುತ್ತಾರೆ, ಅದರಲ್ಲಿಯೂ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಮುಸ್ಲಿಂ ನೇಕಾರ ಕುಟುಂಬಗಳು ಭಕ್ತಿಯಿಂದ ಇಲಿ ಹಬ್ಬ ಆಚರಿಸುತ್ತಾರೆ.

ಈಗಾಗಲೇ ಗಣೇಶ ಹಬ್ಬವನ್ನು ಆಚರಿಸಿರುವ ಜನ, ಈಗ ಗಣೇಶನ ವಾಹನ ಇಲಿಯನ್ನು ಪೂಜಿಸುತ್ತಾರೆ. ಅದರಲ್ಲಿಯೂ ನೇಕಾರರು ಅಧಿಕ ಜನರಿರುವ ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮದಲ್ಲಿ ಇಲಿ ಹಬ್ಬವನ್ನು ಸಂಪ್ರದಾಯ ಬದ್ದವಾಗಿ ಆಚರಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಕಾರರು ಸೇರಿದಂತೆ ಬೇರೆ ಬೇರೆ ಸಮುದಾಯದ ಜನರ ಮನೆಯಲ್ಲಿ ಮಗ್ಗಗಳು ಇರುವುದರಿಂದ ಎಲ್ಲರೂ ಇಲಿಯನ್ನು ಆರಾಧಿಸುತ್ತಾರೆ. ಗಣೇಶನ ಹಬ್ಬದಂತೆ ಶ್ರದ್ಧಾಭಕ್ತಿಯಿಂದ ಇಲಿರಾಯನನ್ನು ಪೂಜಿಸುವ ಮೂಲಕ ಇಲಿರಾಯನನ್ನು ಸಂತೃಪ್ತಿ ಪಡಿಸುತ್ತಾರೆ.

ಚಿತ್ರಗಾರರ ಮನೆಯಿಂದ ಮಣ್ಣಿನಿಂದ ಮಾಡಿದ ಇಲಿಗಳ ಮೂರ್ತಿಗಳನ್ನು ತಂದು ಪೂಜೆ ಸಲ್ಲಿಸಲಾಗುತ್ತದೆ. ಮನೆಯಲ್ಲಿ ಓಡಾಡುವ ಇಲಿಗಳು ಮಗ್ಗಗಳ ನೂಲನ್ನು ಹಾಗೂ ತಯಾರಿಸಿದ ಸೀರೆಗಳನ್ನು ಹಾಳು ಮಾಡದಿರಲಿ ಎಂಬುದಕ್ಕೆ ಇಲ್ಲಿ ಇಲಿಯನ್ನು ಪೂಜಿಸಲಾಗುತ್ತದೆ.

ಇಲಿರಾಯನ ಪೂಜೆಗೆ ಕಡುಬು, ಚಕ್ಕುಲಿ, ಉಂಡೆ, ಕರಜಿಕಾಯಿ, ಸಂಡಿಗೆ, ಹಪ್ಪಳ, ಹೋಳಿಗೆ ಸೇರಿದಂತೆ ನಾನಾ ಬಗೆಯ ಭಕ್ಷ್ಯಗಳನ್ನು ತಯಾರಿಸಿ ನೈವೇದ್ಯ ಮಾಡುತ್ತಾರೆ. ಈ ಮೂಲಕ ಇಲಿರಾಯ ತಮ್ಮ ಮಗ್ಗಗಳಿಗೆ, ನೂಲುಗಳಿಗೆ ತೊಂದರೆ ಕೊಡದಿರಲಿ ಎಂದು ಬೇಡಿಕೊಳ್ಳುತ್ತಾರೆ. ಇಲಿಪೂಜೆ ಮಾಡಿದರೆ ಇಲಿಗಳು ಮಗ್ಗಗಳಿಗೆ, ನೂಲಿಗೆ ತೊಂದರೆ ಕೊಡೋದಿಲ್ಲ ಎಂಬ ನಂಬಿಕೆ ನೇಕಾರರದ್ದು.

ಇಲಿ ಪೂಜೆ ಯಾಕೆ ಮಾಡಲಾಗುತ್ತದೆ ಎಂದು ಪ್ರಶ್ನಿಸಿದಾಗ ನಮ್ಮೊಂದಿಗೆ ಮಾತನಾಡಿದ ನೇಕಾರರಾಗಿರುವ ಪೀರ್ ಸಾಬ್‌ ಬೈರಾಪುರ, “ಸುಮಾರು 20 ವರ್ಷಗಳಿಂದ ಈ ಸಂಪ್ರದಾಯ ಆಚರಿಸುತ್ತಾ ಬಂದಿದ್ದೇವೆ. ನಮ್ಮ ಮುತ್ತಜ್ಜ ಕಾಲದಲ್ಲಿ ವಂಶ ಪರಂಪರೆಯಾಗಿ ಆಚರಣೆ ಸಲ್ಲಿಸುತ್ತಾ ಇದ್ದೀವಿ. ಪ್ರತಿ ವರ್ಷವೂ ಗಣೇಶ ಚತುರ್ಥಿಯ ಮರುದಿನ ಇಲಿ ಹಬ್ಬಕ್ಕಾಗಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸುತ್ತೇವೆ. ಮನೆಯಲ್ಲಿ ವಿವಿಧ ರೀತಿಯಲ್ಲಿ ಅಡುಗೆ ಮಾಡಿ ಬದನೆಕಾಯಿ, ಅನ್ನ, , ಹಪ್ಪಳ, ಹೋಳಿಗೆ ಸೇರಿದಂತೆ ನಾನಾ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಇಲಿರಾಯನಿಗೆ ನೈವೇದ್ಯ ಮಾಡುತ್ತೇವೆ” ಎಂದರು.

ಇದನ್ನು ಓದಿದ್ದೀರಾ? ದ‌.ಕನ್ನಡ | ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ!

ನೇಕಾರಿಕೆಗೆ ಬಳಸುವ ಎಲ್ಲ ಸಾಮಗ್ರಿಗಳಿಗೆ ಒಂದೊಂದು ಕಾಯಿ ಹೊಡೆದು ಪೂಜೆ ಸಲ್ಲಿಸಿ ಕೆಲಸಗಾರರಿಗೆ ಮನೆಯಲ್ಲಿ ಮಾಡಿದ ವಿಶೇಷ ಆಹಾರ ಪದಾರ್ಥಗಳನ್ನು ತಿನ್ನಿಸಲಾಗುತ್ತದೆ.

“ನಾವು ನೇಕಾರಿಕೆ ಮಾಡುತ್ತಿರುವುದರಿಂದ ಬಟ್ಟೆಗಳು ಮನೆಯಲ್ಲಿ ಇರುತ್ತವೆ. ಅವುಗಳನ್ನು ಕಡಿಯಬಾರದು ಎನ್ನುವ ಕಾರಣಕ್ಕಾಗಿ ಈ ರೀತಿಯ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ಇಲಿಯನ್ನು ಪೂಜೆ ಮಾಡುವವರ ಮನೆಯಲ್ಲಿ ಬಟ್ಟೆಗಳನ್ನು ಕಡಿಯುವುದಿಲ್ಲ ಎಂದು ನಂಬಿಕೆ ಮೇಲೆ ಆಚರಣೆ ಮಾಡಲಾಗುತ್ತದೆ. ಸುಮಾರು ವರ್ಷಗಳಿಂದ ಮನೆಯಲ್ಲಿ ಮಾಡಿಕೊಂಡು ಬಂದ ಸಂಪ್ರದಾಯ. ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಇಲಿ ಪೂಜೆ ಕಾರ್ಯಕ್ರಮ ಮಾಡಿಲ್ಲ ಅಂದರೆ ನಮಗೆ ಇಡೀ ವರ್ಷ ತೃಪ್ತಿ ಇಲ್ಲದಂತಾಗುತ್ತದೆ. ಈವರೆಗೆ ಇಲಿ ನಮಗೆ ತೊಂದರೆ ಕೊಟ್ಟಿಲ್ಲ” ಎಂದು ಹೇಳಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...