ಕೊಪ್ಪಳ | ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ: ವೀರೇಶ್ ಇಳಗನೂರು

Date:

ಜಸ್ಟೀಸ್ ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಕೆಲವು ನ್ಯೂನ್ಯತೆ ಇರುವುದು ಕಂಡು ಬರುತ್ತಿದ್ದು, ಸರಕಾರ ಅದನ್ನು ಸರಿಪಡಿಸಬೇಕು. ಏಕಸದಸ್ಯ ಪೀಠವು 5 ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಇದರಲ್ಲಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಒಳಮೀಸಲಾತಿ ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿದೆ’ ಎಂದು ಗಂಗಾವತಿ ವಕೀಲ ವೀರೇಶ್ ಇಳಗನೂರು ವರದಿಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಲಗೈ ಸಮುದಾಯ ಯಾರ ಹಕ್ಕನ್ನು ಪ್ರಶ್ನಿಸದೇ, ವಿರೋಧ ಮಾಡದೇ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲು ಸದಾ ಸಿದ್ದರಿದ್ದೇವೆ. ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ಅವರ ಅಧ್ಯಕ್ಷತೆಯ ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವು ಆಗಸ್ಟ 4ರಂದು ಸರಕಾರಕ್ಕೆ ಒಳ ಮೀಸಲಾತಿ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಹೊಲೆಯ ಜಾತಿಗೆ ಸಂಬಂಧಿಸಿದ ಛಲವಾದಿ, ಪರಯ, ಪರೈಯಾನ್ ಹಾಗೂ ಬಲಗೈ ಜಾತಿಗೆ ಸೇರಿದ ಇನ್ನಿತರ ಜಾತಿಗಳನ್ನ ಒಟ್ಟಿಗೆ ಸೇರಿಸದೇ ಪ್ರತ್ಯೇಕವಾಗಿ ವಿಂಗಡಿಸಿ ವರದಿಯನ್ನು ಸಲ್ಲಿಸಿದೆ. ಹೊಲೆಯ ಸಂಬಂಧಿತ ಜಾತಿಗಳನ್ನು ಕಡಿಮೆ ಮಾಡಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿಯನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿ ಕೇವಲ 5% ಮೀಸಲಾತಿಯನ್ನು ನೀಡಲು ಹೊರಟಿರುವುದು ಬಲಗೈ ಸಮುದಾಯಕ್ಕೆ ಅನ್ಯಾಯವನ್ನು ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದಿರುತ್ತದೆ” ಎಂದು ಆರೋಪಿಸಿದ್ದಾರೆ.

ಆದ್ದರಿಂದ ಇದೇ ತಿಂಗಳ ಆಗಸ್ಟ್ 16 ರಂದು ನಡೆಯುವ ಸಚಿವ ಸಂಪುಟದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಇದರ ಸರಿ ತಪ್ಪುಗಳ ಬಗ್ಗೆ ಸಂಪೂರ್ಣ ಚರ್ಚೆ ಮಾಡಬೇಕು. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆಯಲ್ಲಿ ಇರುವ ಹೊಲೆಯ, ಛಲವಾದಿ, ಪರಯ, ಪರೈಯಾನ್ ಇನ್ನಿತರ ಬಲಗೈ ಸಂಬಂಧಿತ ಜಾತಿಗಳನ್ನು ಒಟ್ಟಿಗೆ ಸೇರಿಸಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಅಲ್ಲದೇ ನೂರಾರು ವರ್ಷಗಳ ಕಾಲ ಬಲಗೈ ಸಮುದಾಯವು ಅನುಭವಿಸಿಕೊಂಡು ಬಂದಿರುವ ಸಾಮಾಜಿಕ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಗಳನ್ನ ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತು ನಮ್ಮ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಏಳಿಗೆಗೆ ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು

ಒಂದು ವೇಳೆ ಸರಕಾರವು ಬಲಗೈ ಸಮುದಾಯದ ಆಗ್ರಹ ಗಮನಕ್ಕೆ ತೆಗೆದುಕೊಳ್ಳದೇ ವರದಿಯನ್ನ ಯಥಾವತ್ತಾಗಿ ಜಾರಿ ಮಾಡಲು ಮುಂದಾದರೆ ಮುಂದೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ವೀರೇಶ್ ಇಳಗನೂರು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...