ಕೊಪ್ಪಳ | ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಅಗತ್ಯ: ಭಾರದ್ವಾಜ್

Date:

ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಭಾರದ್ವಾಜ್ ಕರೆ ನೀಡಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಗಣರಾಜ್ಯೋತ್ಸವ ಆಚರಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಎದ್ದೇಳು ಕರ್ನಾಟಕ, ಸಂವಿಧಾನ ಸಂರಕ್ಷಣಾ ಪಡೆ ವತಿಯಿಂದ “ಸಂವಿಧಾನ ಯಾನ”ಕ್ಕೆ ಸಂವಿಧಾನ ಪುರ್ವ ಪೀಠಿಕೆ ಓದುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

“ಈ ದೇಶಕ್ಕೆ ಸಂವಿಧಾನ ಬರುವ ಪೂರ್ವದಲ್ಲಿ ದಲಿತ, ಶೋಷಿತ ಸಮುದಾಯಗಳ ಧ್ವನಿ, ಸಮಾನತೆ ಹಾಗೂ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಂಡಿದ್ದರು. ಇವತ್ತು ಸಂವಿಧಾನ ಸಮಾನತೆಯ ಜತೆಗೆ ಸಾಮಾಜಿಕವಾಗಿ, ನ್ಯಾಯಕ್ಕಾಗಿ ಹೋರಾಡುವ ಹಕ್ಕನ್ನು ನಮಗೆ ಕೊಟ್ಟಿದೆ. ಸಂವಿಧಾನ ಬದಲಿಸಲು ಸಂಚು ನಡೆದಿರುವುದು ಇಂದು ನಿನ್ನೆಯದಲ್ಲ. ಜಾರಿಯಾದ ದಿನದಿಂದಲೇ ನಡೆದಿದೆ. ಇಂತಹ ಕುತಂತ್ರಗಳ ವಿರುದ್ಧ ಒಗ್ಗಟ್ಟಾಗಿ ಹೋರಾಟ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎದ್ದೇಳು ಕರ್ನಾಟಕದ ಜಿಲ್ಲಾ ಸಂಚಾಲಕ ಸಿರಾಜ್ ಅಹ್ಮದ್ ಮಾತನಾಡಿ, “ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಸಂವಿಧಾನ, ರೈತ, ಸೈನಿಕ, ದೇಶದ ಸುರಕ್ಷತೆ ಹೆಸರೇಳುತ್ತ ಅಧಿಕಾರಕ್ಕೆ ಬಂದ‌ ಈ ಸರ್ಕಾರ ಸಚಿವರು, ಪಕ್ಷದ ನಾಯಕರು ಬಹಿರಂಗವಾಗಿ, ʼಸಂವಿಧಾನ ಬದಲಿಸುವುದಕ್ಕೇ ನಾವು ಬಂದಿರುವುದುʼ ಎಂದು ಹೇಳಿಕೆ ಕೊಡುತ್ತಿವೆ. ಇವರ ಮನುವಾದದ ಕಾನೂನು ಜಾರಿಗೆ ತಂದು ಈ ದೇಶದ ಮೂಲ ನಿವಾಸಿಗಳನ್ನು ಗುಲಾಮರನ್ನಾಗಿ ಮಾಡುವ ಅವರ ಉದ್ದೇಶ ಸ್ಪಷ್ಟವಾಗಿದೆ. ಆದರಿಂದ, ನಾವು ಇವತ್ತಿನ ಮನುವಾದಿಗಳ ವಿರುದ್ಧ ಬೀದಿಗಿಳಿದು ಹೋರಾಡಲು ಸಿದ್ಧವಾಗಬೇಕು” ಎಂದು ಕರೆಕೊಟ್ಟರು.

ರೈತ ಮುಖಂಡ ಶಂಕರ್ ಪಾಟೀಲ್ ಮಾತನಾಡಿ, “ಸಂವಿಧಾನ ನಮಗೆ ಶಿಕ್ಷಣದ ಹಕ್ಕು, ಸಂಘಟಿಸುವ ಹಕ್ಕು, ಹೋರಾಟದ ಹಕ್ಕುಗಳನ್ನು ಕೊಟ್ಟಿದೆ, ಅದು ಅಂಬೇಡ್ಕರ್ ಅವರ ಶ್ರಮದ ಫಲ. ನಮ್ಮ ಹಕ್ಕಿಗಾಗಿ ಹೋರಾಡುವ ರೈತರನ್ನು ದೇಶದ್ರೋಹಿಗಳು, ಖಲಿಸ್ತಾನಿಗಳೆಂದು ಕರೆದು, ಅನ್ನದಾತನಿಗೆ ಕೇಂದ್ರ ದ್ರೋಹ ಬಗೆದು ಅವೈಜ್ಞಾನಿಕ ಕಾನೂನು ಜಾರಿಗೆ ತರುವುದರ ಮೂಲಕ ಸಂವಿಧಾನಕ್ಕೆ ಅನ್ಯಾಯ ಮಾಡಿದೆ. ನಿರಂತರ ಸಂವಿಧಾನ ಒಪ್ಪಿಗೆ ಇಲ್ಲವೆಂದು ಹೇಳುವ ಮೂಲಕ ಸಮಾನತೆ ಕೊಟ್ಟ ಸಂವಿಧಾನದ ಪ್ರತಿ ಸುಡುತ್ತಿದ್ದಾರೆ. ಹಾಗಾಗಿ ಎಲ್ಲರೂ ಎಚ್ವರಗೊಳ್ಳುವ ಕಾಲವಿದು” ಎಂದು ಹೇಳಿದರು.

ಜಮಾತೆಯ ಎಮ್ ಆರ್ ರಾಜಾ ಸಾಬ್ ಮಾತನಾಡಿ, “ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸುವಾಗ ಯಾವುದೇ ಒಂದು ಸಮುದಾಯ, ಜಾತಿ, ಧರ್ಮದ ಉದ್ಧಾರಕ್ಕೆ ರಚನೆ ಮಾಡಲಿಲ್ಲ. ಎಲ್ಲರನ್ನೊಳಗೊಂಡು ಸಮಾನ ಹಕ್ಕು ಕೊಟ್ಟರು. ಅಂಬೇಡ್ಕರ್ ಸಂವಿಧಾನ ‘ಸತ್ತವರ ಚರಿತ್ರೆಯಲ್ಲ, ಬದುಕಿದವರ ಬದುಕು’ ಎಂದರು. ಆದ್ದರಿಂದ ಮೂಲ ನಿವಾಸಿಗಳ ಬದುಕನ್ನೇ ತುಳಿಯುವ ಮತಾಂಧರಿಂದ ಸಂವಿಧಾನ ರಕ್ಷಿಸಬೇಕಿದೆ. ಸಂವಿಧಾನದಲ್ಲಿ ಅಕ್ಷರಗಳಿಲ್ಲ, ಭಾಷೆಯಿಲ್ಲ ಭಾರತದ ಮೂಲ ನಿವಾಸಿಗಳ ಬದುಕು, ಉಸಿರು ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಕೋಟೆಕಾರ್ ಬ್ಯಾಂಕ್‌ನಲ್ಲಿ ಕಳುವಾಗಿದ್ದ ಚಿನ್ನ, ನಗದು ವಶ

ಜನಶಕ್ತಿ ರಾಜ್ಯ ಸಂಚಾಲಕ ರಾಜನಾಯ್ಕ್ ಕುಷ್ಟಗಿ ಮಾತನಾಡಿ, “ಸಂವಿಧಾನದ ಮೂಲ ಆಶಯ, ಉದ್ದೇಶವನ್ನು ಎದ್ದೇಳು ಕರ್ನಾಟಕದ ಮೂಲಕ ಹಳ್ಳಿಯವರೆಗೂ ಹಳ್ಳಿಯ ಮುಗ್ದ ಜನರಲ್ಲಿ ಅರಿವು ಮೂಡಿಸಬೇಕು. ಸಂವಿಧಾನ ಸಂರಕ್ಷಣೆಯ ಪಡೆಯಲ್ಲಿ ಯುವಕರನ್ನು ಸಂಘಟಿಸಿ ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡುವ ಅಗತ್ಯವಿದೆ. ಸಂವಿಧಾನ ಮೂಲ ಆಶಯ ಕಿತ್ತೊಗೆದರೆ ಭಾರತ ಸಂಪೂರ್ಣ ಸಂಕಷ್ಟದಲ್ಲಿ ಸಿಲುಕಿದೆಯೆಂದೇ ಅರ್ಥ. ಅದ್ದರಿಂದ ಸಂವಿಧಾನ ಸಂರಕ್ಷಣಾ ಪಡೆಯಿಂದ ‘ಸಂವಿಧಾನ ಬದಲಿಸುತ್ತೆವೆ, ಸಂವಿಧಾನದಲ್ಲಿ ನಮಗೆ ಗೌರವ ಇಲ್ಲ’ ಎನ್ನುವವರನ್ನು ಸೋಲಿಸಬೇಕು” ಎಂದು ಹೇಳಿದರು.

ದುರ್ಗೇಶ ಬರಗೂರು, ಯುಮನೂರು ಇಳೆಗನೂರು, ಲಕ್ಷ್ಮೀ ಹೊಸಕೇರಿ, ಯಮುನಾ ಚೇಳೂರು, ಚೈತ್ರ ಗಬ್ಬೂರ, ಮಾರುತಿ, ಸುನೀಲ್, ಶೋಭಾ ರಾಂಪೂರ, ಜಾಂಭವಿ ರಂಪೂರ, ವಿಜಯ, ಅನುಪಮ್, ಸರಣು, ಶ್ರೀದೇವಿ ಬರಗೂರು ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...