ಕೊಪ್ಪಳ | ಸಾವಯವ ಕೃಷಿ ಪದ್ಧತಿ ಲಾಭದಾಯಕ: ಜಿಲ್ಲಾಧಿಕಾರಿ ನಳಿನ್ ಅತುಲ್

Date:

ನೈಸರ್ಗಿಕವಾಗಿ ಬೆಳೆದ ಬೆಳೆಗಳಿಗೆ ಬಹಳಷ್ಟು ಬೇಡಿಕೆಯಿದ್ದು, ಸಾವಯವ ಪದ್ಧತಿಯು ಕೃಷಿಯನ್ನು ಲಾಭದಾಯಕವಾಗಿಸಲು ರೈತರಿಗೆ ಸಹಕಾರಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೊಪ್ಪಳದ ಕೃಷಿ ತಂತ್ರಜ್ಞರ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳಿಗೆ ತರಬೇತಿ ಹಾಗೂ ಕಾರ್ಯಾಗಾರ ಮತ್ತು ರೈತ-ವಿಜ್ಞಾನಿ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ದುಬಾರಿಯಾದಂತಹ ರಸಗೊಬ್ಬರಗಳ ಬಳಕೆಯಿಂದ ಕೃಷಿ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುವುದರ ಜೊತೆಗೆ, ಇದರಲ್ಲಿ ರೋಗ ಮತ್ತು ಕೀಟಬಾಧೆ ಹೆಚ್ಚಾಗಿ ಕಾಡಲಿದೆ. ಕೃಷಿಯಲ್ಲಿ ರಸಾಯನಿಕಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿದ ಕೃಷಿ ಪದಾರ್ಥಗಳಿಗೆ ಹೊರ ದೇಶಗಳಲ್ಲಿ ಬೇಡಿಕೆಯಿಲ್ಲ. ರಸಾಯನಿಕ ಕೃಷಿಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಭೂಮಿಯ ಫಲವತ್ತತೆಯೂ ಸಹ ಹಾಳಾಗುತ್ತದೆ. ನಮ್ಮ ಕೃಷಿಯ ಪದ್ಧತಿಯಲ್ಲಿ ರಸಾಯನಿಕ ಗೊಬ್ಬರಗಳಿಗೆ ಕಡಿವಾಣ ಹಾಕುವುದರ ಮೂಲಕ ಸಾವಯವ ಕೃಷಿಗೆ ಹೆಚ್ಚಿನ ಅದ್ಯತೆ ನೀಡಬೇಕು. ಜಿಲ್ಲೆಯಲ್ಲಿ ರೇಷ್ಮೆ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆಗೆ ಉತ್ತೇಜನ ನೀಡುವುದರ ಜೊತೆಗೆ ಜಿಲ್ಲೆಯಲ್ಲಿ ಸಮಗ್ರ ಸಾವಯವ ಕೃಷಿ ಪದ್ಧತಿ ಜಾರಿಗೆ ಎಲ್ಲರೂ ಸಹಕರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬರುವ ದಿನಗಳಲ್ಲಿ ಜಿಲ್ಲೆಯ 1.50 ಲಕ್ಷ ಹೆಕ್ಟೆರ್ ತೋಟಗಾರಿಕೆ ಪ್ರದೇಶದ ಅವೃದ್ಧಿಗಾಗಿ ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಲಿದೆ. ತೋಟಗಾರಿಕೆ ಟೆಕ್ ಪಾರ್ಕ್ ಹಾಗೂ ರೈಸ್ ಪಾರ್ಕ್ ಸ್ಥಾಪನೆಯಿಂದಾಗಿಯೂ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದೆ. ಇದರೊಂದಿಗೆ ಇಲ್ಲಿನ ತೋಟಗಾರಿಕೆ ಬೆಳೆಗಳನ್ನು ಒಂದು ಬ್ಯಾಂಡ್ ಮೂಲಕ ರಫ್ತು ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತ್ನಂ ಮಾತನಾಡಿ, “ಕೃಷಿಯಲ್ಲಿ ಹೆಚ್ಚನ ಪ್ರಮಾಣದ ರಸಾಯನಿಕ ಬಳಕೆಯಿಂದಾಗಿ ಭೂಮಿ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ 4.60 ಲಕ್ಷ ಹೆಕ್ಟರ್ ಕೃಷಿ ಭೂಮಿ ಇದ್ದು, ಇದರಲ್ಲಿ ಕೆವಲ 4 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾತ್ರ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಸಾವಯವ ಕೃಷಿ ಹೆಚ್ಚಿನ ಹಣ ಬೇಕಾಗಿಲ್ಲ ಹಾಗೂ ಅತೀಯಾದ ಶ್ರಮದ ಅವಶ್ಯಕತೆಯೂ ಇರುವುದಿಲ್ಲ. ರೈತರಿಗೆ ತಾಳ್ಮೆ ಇದ್ದರೆ ಸಾಕು ನೈಸರ್ಗಿಕ ಪದ್ಧತಿಯಲ್ಲಿ ಆರೋಗ್ಯಕರ ಬೆಳೆಗಳನ್ನು ಸುಲಭವಾಗಿ ಬೆಳೆಯಬಹುದು. ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳು ಸಾವಯವ ಕೃಷಿಯ ಅಳವಡಿಕೆಗೆ ರೈತರ ಮನವೊಲಿಸಿ ಜಿಲ್ಲೆಯಲ್ಲಿ ಸಾವಯವ ಕೃಷಿ ವಲಯವನ್ನು ಹೆಚ್ಚಿಸಲು ಕ್ರಮ ವಹಿಸಬೇಕು” ಎಂದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಪಡೆದ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಕುಷ್ಟಗಿ ತಾಲ್ಲೂಕಿನ ಮದಲಗಟ್ಟಿಯ ದೇವೇಂದ್ರಪ್ಪ ಬಳೂಟಗಿ ಅವರಿಗೆ ಸನ್ಮಾನಿಸಲಾಯಿತು.

ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು, ವಿಜ್ಞಾನಿಗಳು, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಮುಖ್ಯಸ್ಥರು, ವಿಜ್ಞಾನಿಗಳು, ಕೃಷಿ ಇಲಾಖೆಯ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...