ಕೊಪ್ಪಳ | ʼನಮ್ಮ ನಡಿಗೆ ಮಾದಕ ಮುಕ್ತ ಸಮಾಜದ ಕಡೆಗೆʼ ಜಾಗೃತಿ ಕಾರ್ಯಕ್ರಮ

Date:

ನಮ್ಮ ಯುವಕರು ಪ್ರಸ್ತುತ ದಿನಗಳಲ್ಲಿ ಅಮಲು ಪದಾರ್ಥಕ್ಕೆ, ಮದ್ಯಪಾನಕ್ಕೆ ಹಾಗೂ ಮಾದಕ ದ್ರವ್ಯ ಚಟಗಳಿಗೆ ವ್ಯಾಪಕವಾಗಿ ಬಲಿಯಾಗುತ್ತಿದ್ದಾರೆ ಎಂದು ಸಾಲಿಡಾರಿಟಿ ಯೂತ್‌ ಮೂವ್‌ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಬೇಸರ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಹಮ್ಮಿಕೊಂಡಿದ್ದ ʼʼ ಎಂಬ ಜಾಗೃತಿ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.

“ಪ್ರಸ್ತುತದಲ್ಲಿ ಡ್ರಗ್ಸ್ ಸೇವಿಸುವವರ ಸರಾಸರಿ ವಯಸ್ಸು 12 ಎಂದು ಗುರುತಿಸಲಾಗುತ್ತಿದೆ. ಅಂದರೆ ಶಾಲಾ ವಠಾರದಲ್ಲಿಯೂ ಈ ಮಾದಕ ದ್ರವ್ಯ ಕೂಡ ವ್ಯಾಪಕ ಜಾಲವಾಗಿ ಹರಡಿದೆ. ಇದು ಒಂದು ಸಾಮಾಜಿಕ ಪಿಡುಗು ಎಂದು ಗುರುತಿಸಲಾಗಿದೆ. ಇದನ್ನು ಎಲ್ಲ ಕೆಡುಕುಗಳ ಕೇಂದ್ರವೆಂದು ಕರೆಯಲಾಗಿದೆ. ಒಂದು ವರದಿಯ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವ ಮೂರನೇ ಒಂದು ಭಾಗದಷ್ಟು ಮಂದಿ ಮಾದಕ ದ್ರವ್ಯ ಸೇವನೆ ಹಿನ್ನಲೆಯಿಂದ ಕೂಡಿರುತ್ತಾರೆಂಬ ಅಂಕಿ ಅಂಶಗಳು ತಿಳಿದುಬಂದಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2020ರಲ್ಲಿ 9,169 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಯುವಕರು ಮಾದಕ ದ್ರವ್ಯ ಚಟದಿಂದ ಆತ್ಮಹತ್ಯೆ  ಮಾಡಿಕೊಂಡಿರುವುದಾಗಿ ಅಂಕಿ ಅಂಶಗಳು ಹೊರಬಂದಿವೆ. ಒಟ್ಟಿನಲ್ಲಿ ಎಲ್ಲ ರೀತಿಯಲ್ಲಿ ನಮ್ಮ ಹೊಸ ತಲೆಮಾರುಗಳನ್ನು ದುರ್ಬಲಗೊಳಿಸುವಂತಹ ಅವರ ಅಭಿವೃದ್ಧಿಯನ್ನು ಅವರ ಕ್ರಿಯಾಶೀಲತೆಯನ್ನು ಕುಂಠಿತಗೊಳಿಸುವಂತಹ ಮಹಾ ಪಿಡುಗಾಗಿ ಗೆದ್ದಲು ಹುಳುಗಳಂತೆ ಈ ಮಾದಕ ದ್ರವ್ಯ ಪದಾರ್ಥ ನಮ್ಮ ಯುವಸಮೂಹವನ್ನು ನಾಶ ಮಾಡುವುದರಲ್ಲಿ ತೊಡಗಿದೆ” ಎಂದರು.

“ಮದ್ಯಪಾನ ಚಟವು ಮನುಷ್ಯನ ಆತ್ಮವನ್ನು ಹಾಳು ಮಾಡುತ್ತದೆ. ಅವನನ್ನು ಮೃತ ಸಮಾನವನ್ನಾಗಿ ಮಾಡುತ್ತದೆ ಎಂದು 1939ರಲ್ಲಿ ಹರಿಜನ ಪತ್ರಿಕೆಯಲ್ಲಿ ಬರೆಯಲಾಗಿತ್ತು. ಹೆಂಡತಿ, ತಾಯಿ, ಸಹೋದರಿ, ಮಗಳು ಎಂಬ ಒಂದು ವಿವೇಚನಾ ಶಕ್ತಿಯನ್ನೂ ಅವನಿಂದ ಇಲ್ಲದಾಗಿಸುವಂತಹ ಒಂದು  ಅತ್ಯಂತ ಕೆಟ್ಟ ನೀಚ ಕೃತ್ಯವೆಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. ಮದ್ಯಪಾನ ಮುಕ್ತ, ಅಮಲು ಪದಾರ್ಥ ಮುಕ್ತ ಸಮಾಜವಾಗಬೇಕೆಂಬುದು ಗಾಂಧೀಜಿಯವರ ಕನಸು ಮತ್ತು ಅವರ ಗುರಿಯಾಗಿತ್ತು” ಎಂದು ಹೇಳಿದರು.

ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, “ರಾಜ್ಯ ಗೃಹ ಇಲಾಖೆಗಳ ಅಂಕಿ ಅಂಶಗಳ ಪ್ರಕಾರ ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 16 ಡ್ರಗ್ಸ್ ಪ್ರಕರಣಗಳು ಕಂಡುಬರುತ್ತಿದ್ದು, ಅದರಲ್ಲಿ ಮಾದಕ ವಸ್ತುಗಳ ಸೇವನೆ, ಸ್ವಾಧೀನ ಮತ್ತು ವ್ಯವಹರಗಳ ಪ್ರಕರಣಗಳು ದಾಖಲಾಗುತ್ತಿವೆ. ದೇಶದ ವಿವಿಧ ನಗರಗಳ 16 ರಿಂದ 20 ವರ್ಷದ ಸಾವಿರ ಯುವಕರಲ್ಲಿ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ಶೇ.47 ಮಂದಿ ಸಿಗರೇಟ್ ಸೇವಿಸುವುದಾಗಿದ್ದು, ಶೇ.20ರಷ್ಟು ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆ. ಅದರಲ್ಲಿ ಶೇ. 83ರಷ್ಟು ಯುವಕರಿಗೆ ಈ ಚಟದಿಂದ ಹೇಗೆ ಹೊರಬರಬೇಕೆಂಬುದು ತಿಳಿದಿಲ್ಲ. ಇದು ಪ್ರಸ್ತುತ ಯುವಕರು ಅನುಭವಿಸುತ್ತಿರುವ ಒಂದು ಜ್ವಲಂತ ಸಮಸ್ಯೆಯಾಗಿದ್ದು, ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಈ ಮಾದಕ ವಸ್ತುವಿನ ಜಾಲವು ರಾಜಾರೋಷವಾಗಿ ನಮ್ಮ ಮದ್ಯೆ ವ್ಯಾಪಿಸಿರುವುದು ದುರಂತವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕಟ್ಟಡ ಕಾರ್ಮಿಕರ ರಕ್ಷಣೆ, ಸಾಮಾಜಿಕ ಭದ್ರತೆಗೆ ಆಗ್ರಹ

ಮಫ್ತಿ ನಜೀರ್ ಅಹಮದ್ ಹಾಗೂ ಎಂ ಲಾಯಕ್ ಅಲಿ, ಅಲ್ಲಮಪ್ರಭು ಬೆಟ್ಟದೂರು, ಲಬೀದ್  ಶಾಫಿ, ಆದಿಲ್ ಪಟೇಲ್, ಆಸಿಫ್ ಕರ್ಕಿಹಳ್ಳಿ, ಇಸಾಖ್ ಫುಜೆಲ್, ಅಬ್ದುಲ್ ಹಸೀಬ್, ಜಕ್ರಿಯಾ, ಇಲಿಯಾಸ್, ಗೌಸ್ ಪಟೇಲ್ ಸೇರಿದಂತೆ ಜಮಾ ಅತ್ ಹಿಂದ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...