ಕೊಪ್ಪಳ | ಗಾಳಿ-ಮಳೆಗೆ ನೆಲಕಚ್ಚಿದ ಭತ್ತ; ಪರಿಹಾರಕ್ಕೆ ರೈತರ ಆಗ್ರಹ

Date:

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಅತಿಯಾದ ಮಳೆ ಗಾಳಿಯಿಂದ‌ ಭತ್ತದ ಪೈರು ನೆಲಕ್ಕುರುಳಿದ್ದು, ಬಂದ ಬೆಳೆ‌ ನೆಲದ ಪಾಲಾಗಿರುವುದರಿಂದ‌ ರೈತರು ಸಂಕಷ್ಟಕೊಳಗಾಗಿದ್ದಾರೆ. ಸರ್ಕಾರ ನಷ್ಟವಾದ ಬೆಳೆಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಎಐಕೆಕೆಎಮ್‌ಎಸ್ ನೃತೃತ್ವದಲ್ಲಿ ಗ್ರಾಮದ‌ ರೈತರು ಆಗ್ರಹಿಸಿದರು.

ಎಐಕೆಕೆಎಮ್‌ಎಸ್ ಸಮಿತಿಯ‌ ಸದಸ್ಯರು ಹಾಗೂ ರೈತರು ಮಾತನಾಡಿ, “ಕಾರಟಗಿ ತಾಲೂಕಿನ ಉಳೇನೂರು ಗ್ರಾಮ ಸೇರಿದಂತೆ ಕೊಪ್ಪಳ ಜಿಲ್ಲೆ ಹಾಗೂ ರಾಜ್ಯಾದ್ಯಂತ ಇತ್ತೀಚೆಗೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ನಷ್ಟಕ್ಕೀಡಾಗಿದೆ. ಪ್ರತಿ ಎಕರೆಗೆ 8 ರಿಂದ 10 ಕ್ವಿಂಟಲ್ ಭತ್ತ ನಾಶವಾಗಿದೆ. ಹಿಂದಿನ ವರ್ಷವೂ ಇದೇ ರೀತಿಯಾದ ಅಕಾಲಿಕ ಮಳೆಗೆ ಸಾಕಷ್ಟು ಭತ್ತ ನಾಶವಾಗಿತ್ತು. ಅಂದು ನಾಶವಾಗಿದ್ದ ಭತ್ತಕ್ಕೆ ಸರ್ಕಾರ ನಷ್ಟ ಪರಿಹಾರ ನೀಡುವುದಾಗಿ ನೀಡಿದ್ದ ಭರವಸೆ, ಬೆರಳೆಣಿಕೆಯ ರೈತರಿಗೆ ತಲುಪಿ, ಸಾವಿರಾರು ಜನರಿಗೆ ಅದು ತಲುಪಲೇ ಇಲ್ಲ. ಇದರಿಂದ ರೈತರು ಸಾಕಷ್ಟು ನಷ್ಟಕ್ಕೀಡಾದರು. ಈ ವರ್ಷ ಸಹ ಆ ರೀತಿ ಆಗದೆ, ಬೆಳೆ ನಾಶದಿಂದ‌ ಸಂಕಷ್ಟಕ್ಕೊಳಗಾದ ಎಲ್ಲಾ ರೈತರಿಗೆ ನಷ್ಟ ಪರಿಹಾರ ಕೂಡಲೇ ಘೋಷಿಸಬೇಕು ಹಾಗೂ ಅದು ಎಲ್ಲರಿಗೂ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ಕುಡಿಯುವ ನೀರಿಗಾಗಿ ಪರದಾಟ; ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಎಕರೆ ಭತ್ತಕ್ಕೆ 20,000 ನಷ್ಟ ಪರಿಹಾರ ನೀಡಬೇಕು. ಒಂದು ಕ್ವಿಂಟಲ್ ಭತ್ತಕ್ಕೆ 3500 ಬೆಂಬಲ ಬೆಲೆ ನೀಡಬೇಕು. ಭತ್ತ ಕಟಾವು ಮಾಡುವ ಮಿಷನ್ ಗೆ ಒಂದು ಗಂಟೆಗೆ ಎರಡು ಸಾವಿರಕ್ಕಿಂತ ಹೆಚ್ಚಿಗೆ ಇರಬಾರದು. ಭತ್ತದ ಖರೀದಿ ಕೇಂದ್ರವನ್ನು ನವಂಬರ್ ತಿಂಗಳಲ್ಲಿ ಪ್ರಾರಂಭ ಮಾಡಬೇಕು” ಎಂದು ಹಕ್ಕೊತ್ತಾಯ ಮಂಡಿಸಿದರು.

ಈ ವೇಳೆ ಉಳೆನೂರಿನ ರೈತರಾದ ಯಮನೂರ, ಗಂಗಪ್ಪ, ವೀರೇಶ್ ಇಟಗಿ, ಕುಮಾರಪ್ಪ, ಎಮ್ ವೆಂಕಟಪ್ಪ ಉಳೇನೂರಿನ ಎಐಕೆಕೆಎಮ್‌ಎಸ್ ರೈತ ಸಂಘಟನೆಯ ಸದಸ್ಯರಾದ ಬಸವರಾಜಪ್ಪ, ಅಂಜಿನಪ್ಪ ಅಳ್ಳಳ್ಳಿ, ಮುಕ್ಕಣ್ಣ ಪಾಳ್ಯ ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...