ಕೊಪ್ಪಳ | ಕಾರ್ಖಾನೆಗಳ ವಿಸ್ತರಣೆ ವಿರುದ್ಧ ಪೇಂಟ್ ಅಭಿಯಾನ

Date:

ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ ಹಾಗೂ ವಿಸ್ತರಣೆ ವಿರೋಧಿಸಿ ನಡೆಸುತ್ತಿರುವ ಜನಾಂದೋಲನದ ಭಾಗವಾಗಿ ಹೋರಾಟ ತೀವ್ರಗೊಳಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ವತಿಯಿಂದ “ಪೇಂಟ್ ಅಭಿಯಾನ”ವನ್ನು ನಗರದ ಹಲವೆಡೆ ಆರಂಭಿಸಲಾಗಿದೆ.

ಕೊಪ್ಪಳದ ಬ್ರಿಡ್ಜ್ ಗೋಡೆ ಹಾಗೂ ಬಾಧಿತ ಪ್ರದೇಶಗಳ ಹಳ್ಳಿಗಳಲ್ಲಿ ಕಾರ್ಖಾನೆ ವಿರುದ್ಧ ಮತ್ತು ಅದರಿಂದ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಮೂಡಿಸಲು ಈ ಪೇಂಟ್ ಅಭಿಯಾನ ನಡೆಸುತ್ತಿದ್ದು, ಗೋಡೆ ಬರಹಕ್ಕೆ ಬಣ್ಣಗಳನ್ನು ನಗರದ ಬಣ್ಣದ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಬಣ್ಣ ಒದಗಿಸಿದ್ದಾರೆ.

WhatsApp Image 2025 05 25 at 10.29.30 AM

ಜಿಲ್ಲೆಯ ಸುತ್ತಲೂ ಬೃಹತ್ ಕಾರ್ಖಾನೆಗಳು ಹೆಚ್ಚಾಗಿದ್ದು, ಅದರಿಂದ ಜಿಲ್ಲೆಯ ಪರಿಸರದ ಮೇಲೆ ಮಾರಕ ದುಷ್ಪರಿಣಾಮ ಬೀರುವುದರಿಂದ ʼಬಿಎಸ್‌ಪಿಎಲ್‌ ಕಾರ್ಖಾನೆಗಳು ತೊಲಗಬೇಕು ಇಲ್ಲವೇ ಕೊಪ್ಪಳ ತೊಲಗಬೇಕುʼ ಎಂಬ ಘೋಷ ವಾಕ್ಯದಡಿ ಗೋಡೆ ಬರಹಗಳನ್ನು ಮಾಡಲು ಜಿಲ್ಲ ಬಚಾವೋ ಆಂದೋಲನ ಸಮಿತಿ ನಿರ್ಧರಿಸಿ ನಗರದ ಕುಷ್ಟಗಿ ರಸ್ತೆಯಲ್ಲಿರುವ ಗವಿಸಿದ್ದಪ್ಪ ಚಿನ್ನೂರ್, ಮಾರುತಿ, ಶ್ರೀನಿವಾಸ್ ಪೇಂಟ್ಸ್ ವಿವಿಧ ಬಣ್ಣದ ಡಬ್ಬಿಗಳನ್ನು ಕೊಟ್ಟು ಹೋರಾಟಕ್ಕೆ ಬೆಂಬಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅಭಿಯಾನದಲ್ಲಿ ಗೋಡೆ ಬರಹ ಬರೆಯಲು ಹಿರಿಯ ಚಿತ್ರ ಕಲಾವಿದ ರಾಜು ತೇರದಾಳ್ ಮತ್ತು ಕೃಷ್ಣ ಸೇರಿ ಇತರರು ಬರಹ ಬರೆಯಲು ಸಹಕಾರ ನೀಡಿದರು. ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರೂ ಸಹ ಇದರಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಕೊಪ್ಪಳದಿಂದ ಕಾರ್ಖಾನೆಗಳನ್ನು ಓಡಿಸುವ ನಿಟ್ಟಿನಲ್ಲಿ ಆಂದೋಲನವನ್ನು ತೀವ್ರಗೊಳಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

WhatsApp Image 2025 05 25 at 10.29.33 AM

ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ್, ಕೆ. ಬಿ. ಗೋನಾಳ, ಬಸವರಾಜ ಶೀಲವಂತರ್, ಮಹಾಂತೇಶ್ ಕೊತಬಾಳ, ಮಂಜುನಾಥ ಜಿ. ಗೊಂಡಬಾಳ, ಶರಣು ಶೆಟ್ಟರ್, ಎಸ್.ಎ. ಗಫಾರ್, ಜ್ಯೋತಿ ಎಂ. ಗೊಂಡಬಾಳ, ಶರಣು ಗಡ್ಡಿ, ಮುದುಕಪ್ಪ ಹೊಸಮನಿ, ಚನ್ನಬಸಪ್ಪ ಅಪ್ಪಣ್ಣವರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...