ಕೊಪ್ಪಳ | ಅನುದಾನ ಬರಲಿದೆ‌, ಗುಂಡಿ ಬಿದ್ದಿರುವ ರಸ್ತೆ ದುರಸ್ತಿ ಮಾಡಿಸುವೆ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್

Date:

ಅನುದಾನ ಬಂದ ಕೂಡಲೇ ನೀವು ಹೇಳಿದ ಕೆಲಸ ಮಾಡುತ್ತೇನೆ. ರಸ್ತೆ ದುರಸ್ತಿ ಹಾಗೂ ಮಕ್ಕಳ ಉದ್ಯಾನವನದಂಥ ನಿರ್ಮಾಣ ಕಾಮಗಾರಿಗಳನ್ನು ಮಾಡಿಸುವೆ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರೆ. ಕಲ್ಯಾಣನಗರದ ಅಭಿವೃದ್ಧಿ ಕೆಲಸ ಮಾಡುವೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಭರವಸೆ ನೀಡಿದರು.

ಕೊಪ್ಪಳದ ಕಲ್ಯಾಣ ನಗರದಲ್ಲಿ ದೀಪಾವಳಿ ಹಬ್ಬದಂದು ಮಾರುತಿ ಗುಡಿ ಸಮೀಪ ಎತ್ತರದ ದೀಪಸ್ತಂಭ(ಹೈಮ್ಯಾಕ್ಸ್)ವನ್ನು ಉದ್ಘಾಟಿಸಿ ಮಾತನಾಡಿದರು.

“ಕಲ್ಯಾಣನಗರ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ಈ ನಗರದವರು ತುಂಬಾ ಸೌಜನ್ಯದಿಂದ ಕೆಲಸದ ಬೇಡಿಕೆ ಇಟ್ಟು ಈಡೇರಿಸಿಕೊಳ್ಳುತ್ತಿದ್ದೀರಿ. ನಗರದ ಹಲವು ಅಭಿವೃದ್ಧಿ ಕೆಲಸಗಳು ಅಗಬೇಕು. ಅದನ್ನು ನಾನು ಅಧ್ಯಕ್ಷನಾಗಿರಲಿ, ಇಲ್ಲದಿರಲಿ ಕೆಲಸ ಮಾಡುತ್ತೇನೆ” ಎಂದು ವಿಶ್ವಾಸ ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ನಗರದ ಹಿರಿಯ ಮುಖಂಡ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಕಲ್ಯಾಣ ನಗರದಲ್ಲಿ ರಸ್ತೆಗಳನ್ನು ಸರಿಪಡಬೇಕು. ಒಳ ಚರಂಡಿಗಳ ವ್ಯವಸ್ತೆಯಾಗಬೇಕು, ಕಲ್ಯಾಣ ನಗರದ ಉದ್ಯಾನದಲ್ಲಿ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ಹಾಕಿಸಬೇಕು. ಸಮುದಾಯ ಭವನ ಕಟ್ಟಿಸಬೇಕು. ಬೀದಿ ದೀಪಗಳನ್ನು ಹಾಕಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರೀತಿ ವಂಚಿತ ಮಕ್ಕಳೊಂದಿಗೆ ಸರಳ ದೀಪಾವಳಿ

“ಎಂಎಸ್‌ಪಿಎಲ್ ಕಾರ್ಖಾನೆ ಮತ್ತು ಇತರ ಕಾರ್ಖಾನೆಗಳು ಪರಿಸರ ನಾಶ ಮಾಡುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 1ರ ರಾಜ್ಯೋತ್ಸವ ದಿನದಂದು ಅಶೋಕ ವೃತ್ತದಲ್ಲಿ ನಡೆಯುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ನಗರದ ಪ್ರಮುಖರು, ನಾಗರಿಕರೆಲ್ಲರೂ ಭಾಗವಹಿಸುತ್ತೇವೆ” ಎಂದು ಬೆಂಬಲ ವ್ಯಕ್ತಪಡಿಸಿದರು.

ದೀಪಸ್ತಂಭ ಉದ್ಘಾಟನೆ ಬಳಿಕ ಕಲ್ಯಾಣ ನಗರದ ಆಂಜನೇಯ ಸಮಿತಿಯಿಂದ ಅಧ್ಯಕ್ಷ ಹನುಮಂತಪ್ಪ ಗೊಂದಿಯವರನ್ನು ಸನ್ಮಾನಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...