ಮುನಿರಾಬಾದ್ – ಟಿ.ಬಿ.ಡ್ಯಾಂ ನಡುವೆ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಹತ್ತಿರ ಹುಲಿಗೆಮ್ಮ ಭಕ್ತರ ಟ್ರ್ಯಾಕ್ಟರ್ ಹಾಗೂ ಖಾಸಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಕೊಪ್ಪಳ ತಾಲೂಕಿನ ಮುನಿರಾಬಾದ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹುಲಿಗೆಮ್ಮ ಭಕ್ತರಿದ್ದ ಟ್ರ್ಯಾಕ್ಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಭೀಕರವಾರ ಅಪಘಾತ ಜರುಗಿದೆ.
ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ ಎಂಬಾತ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಟ್ರ್ತಾಕ್ಟರ್ನಲ್ಲಿದ್ದ ಸುಮಾರು15 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮುನಿರಾಬಾದ್ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಬೀದರ್ | ಮಕ್ಕಳ ಚಾರಿತ್ರ್ಯ ಉಳಿಯಬೇಕಾದರೆ ಮನೆ ತರಬೇತಿ ಕೇಂದ್ರವಾಗಲಿ : ಮುಹಮ್ಮದ್ ಕುಂಞ
ಹರಪನಹಳ್ಳಿ ತಾಲೂಕು ಹೊನ್ನೆನಹಳ್ಳಿಯಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಹುಲಿಗಿಗೆ ಟ್ರಾಕ್ಟರ್ನಲ್ಲಿ ಭಕ್ತರು ಹೊರಟಿದ್ದರು. ಬೆಂಗಳೂರಿನಿಂದ ಅಫಜಲಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು ಟ್ರಾಕ್ಟರ್ನಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುನಿರಾಬಾದ್ ಪೋಲೀಸ್ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.





