ಕೊಪ್ಪಳ | ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ, ಗಂಡುಗಲಿ ಕುಮಾರರಾಮ ಹೆಸರಿಡಲು ಪ್ರಗತಿಪರ ಚಿಂತಕರ ಆಗ್ರಹ

Date:

ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಅವರ ಹೆಸರಿಡಬೇಕು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಒತ್ತಾಯಿಸಿದರು.

ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ “ಅಶೋಕ ಹಾಗೂ ಗಂಡುಗಲಿ ಕುಮಾರರಾಮ” ಹೆಸರಿಡಬೇಕು ಎಂದು ಎಲ್ಲರೂ ಒಪ್ಪಿಗೆ ನೀಡಿದರು.

ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಸಭೆ ಉದ್ದೇಶಿಸಿ ಮಾತನಾಡಿ, “ಕೊಪ್ಪಳ ಜಿಲ್ಲೆಗೆ ಹತ್ತಾರು ರಾಜರು ಆಳ್ವಿಕೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಹೆಚ್ಚು ಕಾಲ ಆಳಿದವರು. ಅಲ್ಲದೆ ಅಶೋಕನ ಶಾಸನಗಳು ಪತ್ತೆಯಾಗಿದ್ದು, ಅಶೋಕನ ನಾಡು ಎಂದು ಕರೆಯುತ್ತಾರೆ. ಈ ನೆಲವು ಧಾರ್ಮಿಕ ಸಂತರ ಹೆಸರು ಹಾಗೂ ಐತಿಹಾಸಿಕ ಹಿನ್ನಲೆ ಇರುವುದರಿಂದ ರೈಲ್ವೆ ನಿಲ್ದಾಣಕ್ಕೆ ಹೆಸರಿರಬೇಕು ಅಶೋಕ, ಕುಮಾರರಾಮ ಅವರ ಹೆಸರಿಡಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಪ್ಪಳದಲ್ಲಿ ಅಶೋಕನ ಎರಡು ಶಾಸನಗಳಿದ್ದು, ಒಂದು ಗವಿಮಠ ಶಾಸನ ಮತ್ತು ಪಾಲ್ಕಿಗುಂಡು ಶಾಸನ ಕೊಪ್ಪಳದ ಇತಿಹಾಸ ಕುರಿತು ಹೇಳುತ್ತವೆ ಮತ್ತು ಸಾಮ್ರಾಟ ಅಶೋಕನ ಇತಿಹಾಸವನ್ನು ಸಾರುತ್ತವೆ” ಎಂದರು.

“ಚಕ್ರವರ್ತಿ ಸಾಮ್ರಾಟ ಅಶೋಕನು ಯುದ್ಧವನ್ನು ತಿರಸ್ಕರಿಸಿ ಬುದ್ಧನಿಗೆ ಶರಣಾಗಿ ಶಾಂತಿಪ್ರಿಯನಾದ. ಹಾಗಾಗಿ ಅವನ ಹೆಸರನ್ನು ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ಇಡುವುದು ಸೂಕ್ತ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಂಗನವಾಡಿ ನೇಮಕಾತಿಯಲ್ಲಿ ಅನ್ಯಾಯ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಬಸವರಾಜ್ ಶೀಲವಂತ ಮಾತನಾಡಿ, “ವೀರ ಸಾಂಸ್ಕೃತಿಕ ನಾಯಕ ಗಂಡುಗಲಿ ಕುಮಾರರಾಮ ಪರನಾರಿ ಸಹೋದರನೆಂದು ಹೆಸರುವಾಸಿಯಾದ ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಕಾರಣಕರ್ತನಾಗಿದ್ದಾನೆ. ಹಾಗಾಗಿ ರೈಲ್ವೆ ನಿಲ್ದಾಣಕ್ಕೆ ಈ ಐತಿಹಾಸಿಕ ನಾಯಕನ ಹೆಸರನ್ನೂ ಕೂಡ ಇಡಬಹುದು” ಎಂದರು.

ಸಭೆಯಲ್ಲಿ, ಬಸವರಾಜ, ಅಂದಾನಪ್ಪ ಬೆಣಕಲ್ಲ, ಶೀಲವಂತರ, ಕಾಶಪ್ಪ ಛಲವಾದಿ, ಮಂಜುನಾಥ ದೊಡ್ಡಮನಿ, ಮಾರ್ಕಂಡೇಶ್ವರ ಬೆಲ್ಲದ, ಸಂಜಯದಾಸ ಬೇಣಗೇರಿ, ಕೊಪ್ಪಳದ ಪ್ರಗತಿಪರರು, ವೈಚಾರಿಕ ಚಿಂತಕರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...