ಕೊಪ್ಪಳ | ಫ್ಯಾಸಿಸ್ಟ್‌ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ರಕ್ಷಿಸಿ: ಸಿಪಿಐಎಂಎಲ್‌ ಆಗ್ರಹ

Date:

ಕೋಮುವಾದಿ ಫ್ಯಾಸಿಸ್ಟ್ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಿ, ಕೃಷಿ ಈ ಮಸೂದೆಯನ್ನು ಕೈಬಿಡಿ ಎಂದು ಭಾರತದಾದ್ಯಂತ ಸಿಪಿಐ(ಎಂಎಲ್) ಮಾಸ್‌ಲೈನ್ ಆಗ್ರಹಿಸಿತು.

ಕರ್ನಾಟಕ ರಾಜ್ಯ ಸಿಪಿಐ(ಎಮ್‌ಎಲ್) ಕೊಪ್ಪಳ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡು ಪ್ರತಿಭಟನೆಯ ಹಕ್ಕೊತ್ತಾಯವನ್ನು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಪ್ರತಿನಿಧಿ ಮೂಲಕ ಮನವಿ ಸಲ್ಲಿಸಲಾಯಿತು.

ಟಿಯುಸಿಐನ ಜಿಲ್ಲಾ ಕಾರ್ಯದರ್ಶಿ ಕೆ.ಬಿ.ಗೋನಾಳ ಮಾತನಾಡಿ, “ದೇಶದ ಕಾರ್ಮಿಕ ವರ್ಗ ಉದ್ಯೋಗ ಭದ್ರತೆಗಾಗಿ, ನ್ಯಾಯಯುತ ವೇತನಕ್ಕಾಗಿ, ಟ್ರೇಡ್ ಹಕ್ಕುಗಳ ರಕ್ಷಣೆಗಾಗಿ ಹಾಗೂ ರೈತಾಪಿ ವರ್ಗದ ಎಂಎಸ್‌ಪಿ ಕಾನೂನು ಖಾತರಿಗಾಗಿ, ಸಾಲ ಮನ್ನಾಕ್ಕಾಗಿ. ಕ್ಷ ಕಾಯ್ದೆ ರದ್ಧತಿಗಾಗಿ ಹೋರಾಡುತ್ತಿದೆ. ಭೂರಹಿತ ಬಡವರು, ಆದಿವಾಸಿಗಳು ಭೂಮಿಗಾಗಿ ಅರಣ್ಯ ಹಕ್ಕು ಅನುಷ್ಠಾನಕ್ಕಾಗಿ, ಜಲ-ಜಂಗಲ್-ಜಮೀನು ರಕ್ಷಣೆಗಾಗಿ ಹೋರಾಡುತ್ತಿದ್ದಾರೆ. ದಲಿತರು. ಹಿಂದುಳಿದ ಜನರು ಸಾಮಾಜಿಕ ಸಮಾನತೆಗೆ, . ಅಲ್ಪಸಂಖ್ಯಾತರು ಬುಲ್ಲೋಜ್ ದುರ್ದಾಳಿಯಿಂದ ತತ್ತರಿಸಿದ್ದಾರೆ. ಹತ್ತು ಹಲವು ಸಮಸ್ಯಗಳಿಂದ ದೇಶ ದಿವಾಳಿಯಾಗಿದೆ. ಅದರೆ, ದೇಶದ ಜನರ ಗಮನ ಬೇರೆಡೆ ಸೆಳೆಯಲು ಔರಂಗ್‌ಜೇಬ್‌ ಸಮಾಧಿ ನಾಶಪಡಿಸುವುದು ಕೋಮುವಾದ ಸೃಷ್ಟಿಸಿ ದೇಶದ ಜನತೆಗೆ ದ್ರೋಹ ಬರೆಯುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವರಾಜ್ ನರೇಗಲ್ ಮಾತನಾಡಿ, “ಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಒಪ್ಪಿಸಲು ಕಳೆದ ಅಧಿವೇಶನದ ಮಾರ್ಕೆಟಿಂಗ್ ನೀತಿಯ ತಿದ್ದುಪಡಿ ಮಸೂದೆ ಮಂಡನೆಯಾಗಿದೆ. ಈ ಮಸೂದೆ 2020ರಲ್ಲಿ ಜಾರಿಗೊಳಿ. ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಪೂರಕವಾಗಿರುತ್ತದೆ. ಈ ಮಾರ್ಕೆಟಿಂಗ್ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಿ ಜಿಲ್ಲಾ, ತಾಲೂಕು, ಗ್ರಾಮೀಣ ಭಾಗದ ಮಾರುಕಟ್ಟೆಗಳು ಕಾರ್ಪೋರೇಟ್ ಕಂಪನಿಗಳ ನಿಯಂತ್ರಣಕ್ಕೊಳಪಟ್ಟು, ಆಹಾರ ಕ್ಷೇತ್ರದ ಮೇಲೆ ಕಂಪನಿಗಳ ನೇರ ಹಿಡಿತ ಸಾಧಿಸಲಾಗುತ್ತದೆ. 23 ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ವರದಿ ಆಧರಿಸಿ ಕನಿಷ್ಠ ಬೆಂಬಲ ನೀಡಲಾಗಿದೆ ಎಂದು ಜುಮ್ಲಾ ಬಿಡಲಾಗುತ್ತಿದೆ” ಎಂದರು.

ಡಿ.ಎಚ್.ಪೂಜಾರ ಮಾತನಾಡಿ, “ಮಾರ್ಕೆಟಿಂಗ್ ವಿಧೇಯಕ ಮಸೂದೆಯಲ್ಲಿ 23 ಕೃಷಿ ಉತ್ಪನ್ನಗಳ ಪ್ರಸ್ತಾಪ ಇರುವುದಿಲ್ಲ. 2025-26 ಕೇಂದ್ರ ಬಜೆಟ್‌ನಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಕೇವಲ ರೂ. 26,469 ಕೋಟಿ ತೆಗೆದಿರಿಸಲ ಬಜೆಟ್‌ನ ಪ್ರತಿಶತ 0.5ರಷ್ಟು ಮತ್ತು ಜಿಡಿಪಿಯ ಪ್ರತಿಶತ 0.6ರಷ್ಟು ವಾಸ್ತವವಾಗಿ ಕೃಷಿ ಉತ್ಪನ್ನ ಖರೀದಿ ಶೇ.4.2ರಷ್ಟು ತೆಗೆದಿರಿಸಬೇಕಾಗಿತ್ತು. ಆದರೆ, ರೈತ ವರ್ಗದ ವಿರುದ್ಧವಾಗಿರುವ ಕಾರ್ಪೋರೇಟ್ ಕೇಂದ್ರದ ಮೋದಿ ಸರ್ಕಾರ ಹಣಕಾಸು ಹೊರೆಯೆಂದು ಹೇಳುತ್ತಿದೆ. ರೈತರ ಸಾಲ ಮನ್ನಾ ಮಾಡಿದರೆ ಆತಿ ಹೊರೆಯಾಗುತ್ತದೆ ಎಂದು ಹೇಳುವ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳ ಸಾವಿರಾರು ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ” ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ಕೈಗಾರಿಕಾ ತ್ಯಾಜ್ಯದಿಂದ ಪರಿಸರ ಮಾಲಿನ್ಯ; ಕಲ್ಯಾಣಿ ಸ್ಟೀಲ್ ಕಂಪನಿ ವಿರುದ್ಧ ಆಕ್ರೋಶ

ಮುದುಕಪ್ಪ ಎಂ.ಹೊಸಮನಿ, ಯಲ್ಲಪ್ಪ ಸಿದ್ದರು ಶಿವಪೂರ, ಪರಶುರಾಮ್ ಪೂಜಾರ ನರೇಗಲ್, ರೇಣುಕಮ್ಮ ಅಚಲಾಪುರ, ಆಂಜನೇಯ ಬಂಡಿಹರ್ಲಾಪುರ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...