ಕೊಪ್ಪಳ | ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ನೀಡಿ: ಜಾಗೃತಿ ಸಂಸ್ಥೆಯಿಂದ ಅಭಿಯಾನ

Date:

ಮಕ್ಕಳ ಸರಿಯಾದ ಬೆಳವಣಿಗೆಗೆ ಸರಿಯಾದ ಪೌಷ್ಟಿಕ ಆಹಾರವನ್ನೇ ನೀಡಬೇಕು ಎಂದು ಕೊಪ್ಪಳದ ಜಾಗೃತಿ ಸಂಸ್ಥೆಯ ಮೈತ್ರಿ ತಿಳಿಸಿದರು.

ವರು ಕೊಪ್ಪಳ ತಾಲೂಕು ಶಹಪೂರ ಗ್ರಾಮದ ದರ್ಗಾ ಆವರಣದಲ್ಲಿ ಜಾಗೃತಿ ಸಂಸ್ಥೆಯು ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ಸರಕಾರದ ಒದಗಿಸಲಾದ ಪೌಷ್ಟಿಕ ಆಹಾರ ‘ಪುಷ್ಟಿ’ಯಿಂದ ವಿವಿಧ ರೀತಿಯಲ್ಲಿ ಪದಾರ್ಥ ತಯಾರಿಸಿ ಮಕ್ಕಳಿಗೆ ಕೊಡಬೇಕೆಂಬ ಪ್ರೋತ್ಸಾಹದ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಸದಸ್ಯೆ ಮೈತ್ರಿ, “ರಾಜ್ಯದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದು, ಅಂತ ಮಕ್ಕಳಿಗೆ ಪೌಷ್ಟಿಕತೆಯುಳ್ಳ ‘ಪುಷ್ಟಿ’ ಆಹಾರ ಪೊಟ್ಟಣದಲ್ಲಿರುವ ಪದಾರ್ಥದಿಂದ ವಿವಿಧ ಅಡಿಗೆ ಮಾಡಿ ಮಕ್ಕಳಿಗೆ ಕೊಟ್ಟರೆ ಆ ಮಕ್ಕಳು ಸದೃಢವಾಗಿ ಬೆಳೆಯಲು ಸಾಧ್ಯವಾಗುತ್ತದೆ. 6 ತಿಂಗಳಿಂದ 3 ವರ್ಷದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ‘ಪುಷ್ಠಿ’ ಹೆಸರಿನ ಪೌಷ್ಟಿಕ ಆಹಾರದಲ್ಲಿ ಗುಣಮಟ್ಟದ ಗೋಧಿ, ಸಕ್ಕರೆ, ಹುರಿಕಡಲೆ ಹಾಗೂ ಕಡಲೆಬೇಳೆ ಪುಡಿ ಇರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಗೃತಿ ಸಂಸ್ಥೆಯ ಸದಸ್ಯೆ ಸಿದ್ಧಮ್ಮ ಎಂ ಅಭಿಗೇರಿಮಠ ಮಾತನಾಡಿ, “ಪೌಷ್ಟಿಕ ‘ಪುಷ್ಟಿ’ ಆಹಾರವನ್ನು ಮಕ್ಕಳಿಗೆ ತಯಾರಿಸಿ ಕೊಡುವುದಲ್ಲದೇ ಮನೆ ಹಾಗೂ ಸುತ್ತಲೂ ಪರಿಸರ ಸ್ವಚ್ಛವಾಗಿರಬೇಕು. ಹೆಚ್ಚು ಮಕ್ಕಳಿಗೆ ತರಕಾರಿ ಹಾಗೂ ಹಣ್ಣುಗಳನ್ನು ಕೊಡಬೇಕು. ಅಂಗಡಿಗಳಲ್ಲಿ ಎಣ್ಣೆಯಿಂದ ಕರದು ತಯಾರಿಸಿದ ‘ಫಾಸ್ಟ್ ಫುಡ್’ ತಿನಿಸುವುದರಿಂದ ಮಕ್ಕಳು‌ ಅರೋಗ್ಯವಂತರಾಗಿರಲು ಸಾಧ್ಯವಿಲ್ಲ. ಮಕ್ಕಳಿಗೆ ಅಂಗಡಿಯ ಮಾರಾಟವಾಗುವ ಕುರುಕುರೆ, ಚಾಕೊಲೇಟ್ ಹೀಗೆ ಬೇರೆಬೇರೆ ತಿನಿಸು ಕೊಡುವುದಕ್ಕಿಂತ ಶೇಂಗಾ ಚಿಕ್ಕಿಯಂತಹ ಸಿಹಿ ತಿನಿಸಿ ಕೊಡಬೇಕು. ವಾರದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಹಾಗೂ ಶಾಲೆಗಳಲ್ಲಿ ಕೊಡುವ ಮೊಟ್ಟೆ ಮಕ್ಕಳಿಗೆ ಕೊಟ್ರೆ ಅವರು ಬಲಿಷ್ಠರಾಗಿ ಹಾಗೂ ಆರೋಗ್ಯವಂತರಾಗಿ ಇರುತ್ತಾರೆ” ಎಂದು ತಿಳಿಸಿದರು.

ಗ್ರಾಮದ ಮಹಿಳೆ ಲಕ್ಷ್ಮೀದೇವಿ ನಾಗರಾಜ್ ಹಳ್ಳಿಗುಡಿ ಮಾತನಾಡಿ, “ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ‘ಪುಷ್ಟಿ’ ಆಹಾರ ಪೊಟ್ಟಣದ ಬಗ್ಗೆ ನಮಗೆ ಅಷ್ಟೊಂದು ಮಾಹಿತಿ ಇರಲಿಲ್ಲ. ಅದನ್ನು ದನಕರುಗಳಿಗೆ ಹಾಕುತ್ತಿದ್ದೆವು. ಅದನ್ನು ಸೇವಿಸಿದ ಆಕಳು ಹೆಚ್ಚು ಹಾಲು ಕೊಡುತ್ತದೆ ಎಂದು ಪುಷ್ಟಿ ಪೊಟ್ಟಣದಲ್ಲಿರುವ ಪದಾರ್ಥ ವ್ಯರ್ಥ ಮಾಡುತ್ತಿದ್ದೆವು. ಜಾಗೃತಿ ಸಂಸ್ಥೆಯವರು ಅದರ ಕುರಿತು ಹೆಚ್ಚು ಮಾಹಿತಿ ನೀಡಿದ್ದರಿಂದ ನಾವು ತಿಳಿದುಕೊಂಡಿದ್ದೆವೆ. ನಾವು ಓದಿದವರಾದ್ರೂ ನಮಗೆ ಇದರ ಬಗ್ಗೆ ಗೊತ್ತಿರಲಿಲ್ಲ” ಎಂದು ಜಾಗೃತಿ ಸಂಸ್ಥೆಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕೊಪ್ಪಳ | ಅಳವಂಡಿಯಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಗೆಳೆಯರು; ಗಣೇಶನಿಗೆ ಪೂಜೆ, ಅಭಿಷೇಕ

ಈ ಸಂದರ್ಭದಲ್ಲಿ ಪೂಜಾ ದನಕಾದೋಡಿ, ಶೋಭಾ ಎಸ್ ಪೊಲೀಸ ಪಾಟೀಲ್, ಮಂಜುಳಾ, ಸೌಮ್ಯ, ಕಾವೇರಿ, ರುಕ್ಸಾನಾ, ಭಗೀರತಿ, ಅಂಗನವಾಡಿ ಕಾರ್ಯಕರ್ತೆ ಬಸವರಾಜೇಶ್ವರಿ, ಬಸಮ್ಮ, ಎಸ್‌ಡಿಎಮ್‌ಸಿ ಅಧ್ಯಕ್ಷೆ ಅಶ್ವಿನಿ, ಕೊಪ್ಪಳ ಜಾಗೃತಿ ಟೀಮ್ ಹಾಗೂ ತಾಯಂದಿರು ಮಕ್ಕಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...