ಕೊಪ್ಪಳ | ಸಾಲ ವಾಪಸ್‌ ಕೇಳಿದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; AIMSS ಖಂಡನೆ

Date:

ಕೊಪ್ಪಳ ಜಿಲ್ಲೆಯ ಯಲಬುರ್ಗ ವ್ಯಾಪ್ತಿಯ ಮದ್ಲೂರು ಗ್ರಾಮದಲ್ಲಿ ನಡೆದ ಕೊಟ್ಟ ಸಾಲ ವಾಪಸ್‌ ಕೇಳಿದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರವಾಗಿ ಖಂಡಿಸಿದೆ.

“ಮಹಿಳೆಯೊಬ್ಬರಿಗೆ ಆರು ತಿಂಗಳ ಹಿಂದೆ ಪರಿಚಿತನಾಗಿದ್ದ ವ್ಯಕ್ತಿ ಸಾಲ ಹಿಂದಿರುಗಿಸುವ ನೆಪದಲ್ಲಿ ಕರೆಸಿಕೊಂಡು ಆತನ ಮೂವರು ಸ್ನೇಹಿತರೊಂದಿಗೆ ಸೇರಿ ಬಲವಂತವಾಗಿ ಮದ್ಯ ಕುಡಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೆಂಬುದು ಈ ಘಟನೆಯಿಂದ ತಿಳಿಯುತ್ತದೆ. ಮಹಿಳೆ ಎಲ್ಲಿ ಹೋದರೂ ಇಂತಹ ದುರುಳರು ಇದ್ದೇ ಇರುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇತ್ತೀಚೆಗೆ ಕೊಪ್ಪಳ ನಗರದ ಪಕ್ಕದ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಣ್ಣನೇ ನಿರಂತರ ಅತ್ಯಾಚಾರ ಎಸಗಿ ಚಿಕ್ಕ ವಯಸ್ಸಿನಲ್ಲಿ ತಾಯಿಯಾಗಲು ಕಾರಣನಾದ ಘಟನೆ ಇನ್ನೂ ಮಾಸಿಲ್ಲ. ಅಷ್ಟರಲ್ಲೇ ಕೊಟ್ಟ ಹಣ ಕೇಳಲು ಬಂದವಳ ಮೇಲೆ ಪ್ರಾಣಿಗಳಂತೆ ಎರಗಿರುವುದು ಮನುಷ್ಯ ಸಮಾಜ ತಲೆತಗ್ಗಿಸುವಂತಾಗಿದೆ. ಆದರೆ ಇದು ಇಷ್ಟಕ್ಕೆ ಸೀಮಿತಗೊಳ್ಳದೆ ಶೀಘ್ರ ತನಿಖೆ ನಡೆಸಿ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸಬೇಕು” ಎಂದು ಸಂಘಟನೆಯ ಮುಖ್ಯಸ್ಥರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಮಠಾಧೀಶರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ತೋಂಟದಾರ್ಯ ಶ್ರೀ

“ಮಹಿಳೆಯರ ಮೇಲೆ ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಗಳು ಇಚ್ಛಾಶಕ್ತಿ ಹೊಂದಿಲ್ಲದೆ ಇರುವುದು ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗಿದೆ. ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗುತ್ತಿರುವ ಸಾಂಸ್ಕೃತಿಕ ಅವನತಿಯ ಗುರುತುಗಳೇ ಇಂತಹ ಪ್ರಕರಣಗಳು. ಜೊತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ, ಪೋರ್ನ್ ವೆಬ್ಸೈಟ್‌ಗಳು, ಮದ್ಯ, ಮಾದಕ ವಸ್ತುಗಳು ವಿದ್ಯಾರ್ಥಿ-ಯುವಕರನ್ನು ವಿಕೃತ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೆಪಿಸುತ್ತಿವೆ. ಸಮಾಜದ ನೈತಿಕ ಬೆನ್ನೆಲುಬು ಮುರಿಯುವ ಇಂತಹ ಹುನ್ನಾರದ ಹಿಂದಿರುವ ಸರ್ಕಾರಗಳು ಮತ್ತು ವ್ಯವಸ್ಥೆಯ ವಿರುದ್ಧ ಪ್ರಜ್ಞಾವಂತ ಜನತೆ ಒಗ್ಗಟ್ಟಾಗಿ ಹೋರಾಟ ಕಟ್ಟುವುದು ಘಳಿಗೆಯ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಜನತೆ ಮುಂದೆ ಬರಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...