ಕೊಪ್ಪಳ | ಜ.31ರಂದು ‘ರಾವುತ್’ ಚಲನಚಿತ್ರ ಬಿಡುಗಡೆ

Date:

ಕೊಪ್ಪಳ ಜಿಲ್ಲೆಯ ಕನಕಗಿರಿ, ಜಬ್ಬಲಗುಡ್ಡ, ಮುಕ್ಕುಂಪಿ ಸೇರಿದಂತೆ ವಿವಿಧೆಡೆ ಚಿತ್ರೀಕರಣಗೊಂಡ ಕನ್ನಡದ ʼರಾವುತ್‌ʼ ಸಿನಿಮಾ ಇದೇ ಜನವರಿ 31ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಸಿದ್ದು ವಜ್ರಪ್ಪ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದ ಪೊಸ್ಟರ್ ಬಿಡುಗಡೆ, ಟ್ರೈಲರ್ ಲಾಂಚ್‌ಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿ, “ರಾವುತ್‌ ಸಿನಿಮಾ ಸಂಪೂರ್ಣವಾಗಿ ಉತ್ತರ ಕರ್ನಾಟಕ ಭಾಷೆ, ಸೊಗಡು, ಲೊಕೇಷನ್ ಇರುವ ಚಿತ್ರವಾಗಿದ್ದು, ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದೆ. ಯು/ಎ ಪ್ರಮಾಣತ್ರದೊಂದಿಗೆ ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ ಸೇರಿದಂತೆ 130 ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ” ಎಂದರು.

“ಸತ್ತ ನಂತರ ಆತ್ಮದ ಪಯಣವನ್ನು ತೋರಿಸುವ ಸಿನಿಮಾ ಇದಾಗಿದ್ದು, ಈ ರೀತಿಯ ಪ್ರಯತ್ನವಿರುವ ಸಿನಿಮಾ ಈವರೆಗೆ ಬಂದಿಲ್ಲ.‌ ಎಲ್ಲರಿಗೂ ಭೂಮಿಗೆ ಬರುವ ಎಂಟ್ರಿ ಗೊತ್ತು; ಆಮೇಲೆ ಭೂಮಿಯಿಂದ ಎಕ್ಸಿಟ್ ಯಾರಿಗೂ ಗೊತ್ತಿಲ್ಲ. ಕೆಲ ಸೈದ್ಧಾಂತಿಕ ಅಂಶಗಳೊಂದಿಗೆ ಸಿನಿಮಾ ನಿರ್ಮಿಸಲಾಗಿದೆ. ವೇದೋಪನಿಷತ್ತು ಸೇರಿ ಹಲವು ಪುಸ್ತಕಗಳನ್ನು ಅಧ್ಯಯನ ಮಾಡಿ, ಈ ಕುರಿತ ತಜ್ಞರ ಹಿರಿಯರ ಮಾರ್ಗದರ್ಶನದಲ್ಲಿ ಸಿನಿಮಾ ಮಾಡಿದ್ದೇವೆ” ಎಂದು ನಿರ್ದೇಶಕರು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾವುತ್ 1

ಶಿಕ್ಷಕರ ಸೇವಾ ಬಳಗದ ಮುಖಂಡ ಬೀರಪ್ಪ ಅಂಡಗಿ ಮಾತನಾಡಿ, “ರಾವುತ್ ಸಿನಿಮಾದ ಪ್ರೀಮಿಯರ್ ಷೋ ನೋಡಿದ್ದೇವೆ. ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ. ಸಿನಿಮಾದ ವಿಶೇಷವೆಂದರೆ ಕೊಪ್ಪಳ ಭಾಗದ ಕಲಾವಿದರು ಸೇರಿದಂತೆ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಈ ಹೊಸ ಚಿತ್ರ ಎಲ್ಲೂ ಹೊಸಬರ ಸಿನಿಮಾ ಎನಿಸದೇ, ನುರಿತ ತಂತ್ರಜ್ಞರ ಕೆಲಸದಿಂದ ಮಾಡಿದ ಕಮರ್ಷಿಯಲ್ ಸಿನಿಮಾ ಫೀಲ್ ಕಟ್ಟಿಕೊಡುತ್ತದೆ. ಚಿತ್ರದ ಮೂರು ಹಾಡುಗಳಿಗೆ ಜಿಲ್ಲೆಯ ಶಿಕ್ಷಕ ಸುರೇಶ ಕಂಬಳಿ ಹಾಡು ರಚಿಸಿದ್ದಾರೆ. ಅದ್ಭುತ ಸಾಹಿತ್ಯ ಹೊಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪೆ.10ರಿಂದ 12ರವರೆಗೆ ಕುಂಭಮೇಳ; ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಚ್ ಸಿ ಮಹದೇವಪ್ಪ ಸೂಚನೆ

ನಿರ್ಮಾಪಕ ಈರಣ್ಣ ಬಡಿಗೇರ ಮಾತನಾಡಿ, “ಸುಮಾರು ₹85 ಲಕ್ಷ ವೆಚ್ಚದಲ್ಲಿ ಸಿನಿಮಾ ನಿರ್ಮಿಸಲಾಗಿದ್ದು, ಪೊಸ್ಟ್ ಪ್ರೊಡಕ್ಷನ್, ಪ್ರಮೋಷನ್ ಕಾರ್ಯಗಳು ನಡೆಯುತ್ತಿವೆ. ‘ರಾವುತ್’ ಎಂದರೆ ಕುದುರೆ ಪಳಗಿಸುವವನು ಎಂದರ್ಥ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆಯೆಂದು ನಂಬಿಕೆ ಇದೆ” ಎಂದು ಹೇಳಿದರು.

ಈ ವೇಳೆ ಚಿತ್ರತಂಡದ ನಿಂಗಪ್ಪ ಕಂಬಳಿ, ಸುರೇಶ ಕಂಬಳಿ ಸೇರಿದಂತೆ ಚಿತ್ರತಂಡದ ಅನೇಕರು ಇದ್ಧರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...