ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

Date:

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿಯವರಿಗೆ ಮನವಿ ಸಲ್ಲಿಸಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಸಿಎಂ ಹಾಸ್ಟೆಲ್‌ಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರಸ್ತುತದಲ್ಲಿ ಪ್ರತಿ ವಿದ್ಯಾರ್ಥಿನಿಗೆ ಕೇವಲ ₹1,750(ದಿನಕ್ಕೆ ₹56) ಮಾತ್ರ ಹಣ ಜಮವಾಗುತ್ತಿದೆ. ಇದರಿಂದ ಮಕ್ಕಳಿಗೆ ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ನಿರ್ವಹಣಾ ಹಣವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

“ಕೊರೊನಾ ನಂತರದಲ್ಲಿ ಎಲ್ಲ ಆಹಾರ, ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ತರಕಾರಿಗಳ ದರ ನಿತ್ಯವೂ ಹೆಚ್ಚಳವಾಗುತ್ತಿರುತ್ತದೆ. ಮಕ್ಕಳಿಗೆ ಪೌಷ್ಠಿಕ ಗುಣಮಟ್ಟದ ಆಹಾರ ಸೇವಿ‌ಸುವ ಸಲುವಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ವಿದ್ಯಾರ್ಥಿನಿಗೆ ಮಾಸಿಕ ₹5,000ಕ್ಕೆ ಹೆಚ್ಚಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳಿಗೆ ಒಂದು ದಿನಕ್ಕೆ ₹166ರಂತೆ ಹಣ ಬರುತ್ತದೆ. ಇದರಿಂದ ಮಕ್ಕಳಿಗೆ ಅನುಕೂಲವಾಗಬಹುದು. ವಿದ್ಯಾಭ್ಯಾಸದಲ್ಲಿ ಮುಂದುವರೆಯಲು ಮಕ್ಕಳಿಗೆ ಯಾವುದೇ ಅಡೆತಡೆ ಸಂಭವಿಸುವುದಿಲ್ಲ” ಎಂದು ಹೇಳಿದರು.

“ಎಲ್ಲ ಹಾಸ್ಟೆಲ್‌ಗಳಲ್ಲಿಯೂ ಗುಣಮಟ್ಟ ಆಹಾರ ನೀಡುವುದರಲ್ಲಿ ವಿಫಲರಾಗಿದ್ದಾರೆ. ಕಳಪೆ ಊಟದಿಂದಾಗಿ ವಿದ್ಯಾರ್ಥಿಗಳು ಮೇಲ್ವಿಚಾರಕರೊಡನೆ ಕಿತ್ತಾಡುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಹಾಸ್ಟೆಲ್‌ಗಳಲ್ಲೂ ಪ್ರವೇಶಾತಿ ಹೆಚ್ಚುತ್ತಿರುವುದರಿಂದ ಹೆಚ್ಚಿನ ಹಾಸ್ಟೆಲ್‌ಗಳನ್ನು ಪ್ರಾರಂಭಿಸಬೇಕು. ಅಂಕಗಳ ಶ್ರೇಣಿಕೃತ ಆಧಾರದಲ್ಲಿ ಕೊಡುವಂತಹ ಪ್ರವೇಶಾತಿ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರ ಏಳಿಗೆಗೆ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ: ರಮೇಶ್ ವೀರಾಪೂರು

“ಸದ್ಯ ಡಿಜಿಟಲ್ ಮುಂದುವರೆಯುವುದರಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ವೈಫೈ ಸೌಲಭ್ಯ ಒದಗಿಸಬೇಕು. ಕ್ರೀಡಾ ಸಾಮಾಗ್ರಿಗಳನ್ನು ಕಾಲಕಾಲಕ್ಕೆ ಪೂರೈಕೆ ಮಾಡಬೇಕು. ಎಲ್ಲ ಹಾಸ್ಟೆಲ್‌ಗಳಲ್ಲಿಯೂ ಪ್ರತಿ ವಾರಕ್ಕೆರಡು ದಿನದಂತೆ ಸ್ಪರ್ಧಾತ್ಮಕ ತರಗತಿಗಳನ್ನು ಏರ್ಪಡಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ರಾಜ್ಯ ಮುಖಂಡ ದುರುಗೇಶ್ ಬರಗೂರು, ಯಮುನಮ್ಮ, ಶರಣಬಸವ, ಯಮನೂರು, ರಾಜಣ್ಣ, ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...