ಕೊಪ್ಪಳ | ಚರಂಡಿ ನೀರು ಹರಿದು ಕೆರೆಯಂತಾದ ರಸ್ತೆ: ಸಂಸದ, ಶಾಸಕರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಛೀಮಾರಿ

Date:

ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ.

ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ ಪಂಚಾಯಿತಿ ಸದಸ್ಯರಿಗೆ ಹಾಗೂ ಶಾಸಕ ಸಂಸದರ ಗಮನಕ್ಕೆ ತರಲಾಗಿದ್ದು, ಹಲವಾರು ಮಾಧ್ಯಮಗಳು ಈ ಕುರಿತು ಸುದ್ದಿ ಮಾಡಿದರೂ ಕೂಡ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿಲ್ಲವೆಂದು ಒಜನ್‌ಹಳ್ಳಿ ರಸ್ತೆಯಲ್ಲಿ ಸಂಚರಿಸುಚ ವಾಹನ ಸವಾರರು ಹಾಗೂ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಮಳೆಯಾದರೆ ಇದೇ ಪರಿಸ್ಥಿತಿ ಎದುರಾಗುತ್ತದೆ. ಮಳೆಯ ರಭಸಕ್ಕೆ ವಾಹನಗಳ ದಟ್ಟಣೆಗೆ ರಸ್ತೆ ಗುಂಡಿಗಳು ಬಿದ್ದು ದ್ವಿಚಕ್ರ ವಾಹನ ಸಂಚಾರಕ್ಕೂ ಅಡೆತಡೆಯಾಗುತ್ತದೆ. ರಸ್ತೆಯ ಎರಡೂ ಬದಿಯಲ್ಲಿ ಬಹುಮುಖ್ಯವಾಗಿ ಚರಂಡಿ ವ್ಯವಸ್ಥೆ ಇಲ್ಲ. ನೀರು ಮನೆಗೆ ನುಗ್ಗುವುದಕ್ಕೆ ಇದೇ ಕಾರಣ. ಆದರೂ ಕೂಡ ಯಾವುದೇ ಜನಪ್ರತಿನಿಧಿಗಳು ಇತ್ತ ಸುಳಿಯುತ್ತಿಲ್ಲ” ಎಂದು ಸ್ಥಳೀಯ ಯುವಕನೊಬ್ಬ ಬೇಸರ ವ್ಯಕ್ತಪಡಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ ಪತ್ರಕರ್ತ ಬಸವರಾಜ್ ಶೀಲವಂತರ ಮಾತನಾಡಿ, “ಭಾಗ್ಯನಗರ ಪಟ್ಟಣ ಪಂಚಾಯಿತಿ ಆಡಳಿತಕ್ಕೊಳಪಟ್ಟಿದೆ. ಹಲವಾರು ಸಲ ರಸ್ತೆ ದುರವಸ್ತೆಯ ಕುರಿತು ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾಕಷ್ಟು ಬಾರಿ ಮಾಧ್ಯಮದಲ್ಲೂ ಸುದ್ಧಿ ಮಾಡಲಾಗಿದೆ. ಆದರೂ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಶಾಸಕ, ಸಂಸದರ ಕಣ್ಣಿಗೆ ಭಾಗ್ಯನಗರದ ದೌರ್ಭಾಗ್ಯ ಸ್ಥಿತಿ ಕಾಣಿಸುತ್ತಿಲ್ಲ. ಪಟ್ಟಣ ಪಂಚಾಯಿತಿಗೆ ಇವತ್ತೂ ಪೋನ್ ಕರೆ ಮಾಡಿ ಹೇಳಿರುವೆ. ಏನು ಮಾಡುತ್ತಾರೋ ಎಂಬುದನ್ನು ಕಾದು ನೋಡಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ: ಚಂದ್ರಕಲಾ ನಂದಾವರ

ಒಜನ್‌ಹಳ್ಳಿ ರಸ್ತೆಯ ರವಿ ಮಾತನಾಡಿ, “ಮಳೆ ಆದಾಗಲೆಲ್ಲ ಭಾಗ್ಯನಗರದ್ದು ಇದೇ ಪರಿಸ್ಥಿತಿ ನೋಡಿ. ಚರಂಡಿ ಹೂಳು ಎತ್ತದಿರುವ ಕಾರಣದಿಂದ ಮಳೆ ನೀರೆಲ್ಲ ರಸ್ತೆಯ ಮೇಲೆ ಹರಿದು ಮನೆಗಳಿಗೂ ನುಗ್ಗಿದೆ. ಅಲ್ಲದೆ ಗುಂಡಿಬಿದ್ದಿರುವ ರಸ್ತೆಯಲ್ಲಿನ ನೀರಿನಿಂದ ಕೆರೆಯಂತಾಗಿದೆ. ಯಾವ್ಯಾವುದೋ ನದಿಗಳಿಗೆ ಹೋಗಿ ಬಾಗಿನ ಅರ್ಪಿಸಿ ಬರುವ ಶಾಸಕ ಹಾಗೂ ಸಂಸದರು ಭಾಗ್ಯನಗರದ ಸ್ಥಿತಿ‌ ನೋಡಿ ಇಲ್ಲಿಯೇ ಬಾಗಿನ ಅರ್ಪಿಸಬೇಕೆಂದು ನಮ್ಮ ಬಡವಾಣೆಯ ಜನರೆಲ್ಲ ಸೇರಿ ಪಟ್ಟಣ ಪಂಚಾಯಿತಿಗೆ ವಿನಂತಿಸಿಕೊಳ್ಳುತ್ತಿದ್ದು, ಅವರಿಗೆ ಆಹ್ವಾನ ನೀಡುತ್ತಿದ್ದೇವೆ” ಎನ್ನುತ್ತ ಆಕ್ರೋಶ ವ್ಯಕ್ತಪಡಿಸಿದರು.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...