ಕೊಪ್ಪಳ | ಪಹಲ್ಗಾಮ್‌ ಭಯೋತ್ಪಾದಕ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸದಸ್ಯರು ಪ್ರತಿಭಟನೆ ನಡೆಸಿದರು.

ಕೊಪ್ಪಳ ನಗರದ ಸರ್ಕಾರಿ ಬಾಲಕರ ಕಾಲೇಜ್ ನಿಂದ ಅಶೋಕ್ ಸರ್ಕಲ್ ವರೆಗೆ ಕ್ಯಾಂಡಲ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.
ನಿನ್ನೆ ನಡೆದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಿಂದ ಸುಮಾರು 28 ಜನ ಮೃತಪಟ್ಟಿರುತ್ತಾರೆ. ಆ ಪೈಕಿ ಕರ್ನಾಟಕ 3 ರಿಂದ 4 ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ದೇಶದ ಒಳಾಂಗಣ ಭದ್ರತೆ ಕುರಿತು ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ದಾಳಿಯ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಸೈ ಸಲೀಮ್ ಖಾದ್ರಿ ಮಾತನಾಡಿ, “ದೇಶವಿರೋಧಿ ಚಟುವಟಿಕೆ ಮಾಡುವವರನ್ನು ದೇಶದ ಜನತೆ ಸಹಿಸುವುದಿಲ್ಲ. ಅಮಾಯಕರ ರಕ್ತಪಾತ ಮಾಡುವ ಭಯೋತ್ಪಾದಕರ ವಿರುದ್ಧ ನಾವು ಎಲ್ಲರೂ ಒಂದಾಗಬೇಕು. ದೇಶದ ಶಾಂತಿಯನ್ನು ಕದಡುವ, ಕಿಡಿಗೇಡಿತನ ಹಾಗೂ ಅಶಾಂತಿ ಹರಡುವ ಭಯೋತ್ಪಾದಕರ ವಿರುದ್ಧ ಕೇಂದ್ರ ಸರಕಾರ ತೀವ್ರವಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧರ್ಮ, ಜಾತಿ, ಭಾಷೆ ಎನ್ನುವ ಎಲ್ಲ ಭೇದಗಳನ್ನು ಮರೆತು, ದೇಶದ ಏಕತೆ ಮತ್ತು ಸಹೋದರತೆಯನ್ನು ಕಾಪಾಡಬೇಕು. ಹಿಂಸೆಯನ್ನು ಪ್ರಚೋದಿಸುವ ಮತ್ತು ದೇಶದ ವಿರುದ್ಧ ವಿಷ ಹರಡುವವರ ವಿರುದ್ಧ ದೇಶದ ಪ್ರತಿಯೊಬ್ಬನೂ ಏಕಮತದಿಂದ ನಿಲ್ಲಬೇಕು” ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಕೊಪ್ಪಳ-ಬೆಂಗಳೂರು ನಡುವೆ ನಾನ್ ಎಸಿ ಸ್ಲೀಪರ್ ಬಸ್; ಸೇವೆಗೆ ಹಸಿರು ನಿಶಾನೆ

ರಾಜೀವ್ ಉರ್ ರಹೇಮಾನ್, ನಿಜಾಮುದ್ದೀನ್ ಮೊಳೆಕೋಪ್ಪ, ಮೊಹಮ್ಮದ್ ಸಾಧಿಕ್, ಅರ್ಶದ್ ಶೈಖ್, ಫಾರೂಕ್ ಅತ್ತಾರ್, ರಿಜ್ವಾನ್ ಪೀರ್ಜಾದೆ, ಹಾಗೂ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರು ಕ್ಯಾಂಡಲ್ ಮಾರ್ಚ್‌ನಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...