ಕೊಪ್ಪಳ | ಅಂಜನಾದ್ರಿ ಬೆಟ್ಟದಲ್ಲಿ ಎರಡನೇ ಬಾರಿ ಕಳ್ಳತನ; ಸಾಲು‌ ಅಂಗಡಿ-ಮುಂಗಟ್ಟುಗಳನ್ನು ದೋಚಿದ ಖದೀಮರು

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಆಂಜನಾದ್ರಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಸರಣಿಗಳ್ಳತನ ನಡೆದಿದ್ದು, ಕಳ್ಳರು ಸಾಲು ಅಂಗಡಿಗಳ ಬೀಗಗಳನ್ನು ಒಡೆದು ಅದರಲ್ಲಿರುವ ಬೀಡಿ, ಸಿಗರೇಟು, ಗುಟ್ಕಾ, ನಗದನ್ನು ದೋಚಿಕೊಂಡು ಹೋಗಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಬರುವಂತ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ದೇವರ ಫೋಟೋ, ಮಕ್ಕಳ ಆಟಿಕೆ ವಸ್ತುಗಳು ಹಾಗೂ ವಿಗ್ರಹಗಳನ್ನು ಬೇರೆಬೇರೆ ಬೆಲೆಬಾಳುವ ಸಾಮಾನುಗಳನ್ನು ಮಾರಾಟ ಮಾಡಲಾಗುತ್ತದೆ. ನೂರಕ್ಕೂ ಹೆಚ್ವು ಸಣ್ಣ ಹಾಗೂ ದೊಡ್ಡ ಪ್ರಮಾಣದ ಅಂಗಡಿಗಳಿವೆ.

“ಇದು ವಾರದಲ್ಲಿ ಎರಡನೇ ಸಲ ಕಳ್ಳತನದ ಘಟನೆ ನಡೆಯುತ್ತಿದ್ದು, ಸರಣಿಗಳ್ಳತನದಲ್ಲಿ‌ 20ಕ್ಕೂ ಹೆಚ್ಚು ಅಂಗಡಿಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕದೀಮರು ದರೋಡೆ ಮಾಡಿದ್ದಾರೆ. ವಿದ್ಯುತ್ ದೀಪಗಳ ವ್ಯವಸ್ಥೆ ಇಲ್ಲದ ಕಾರಣ ಕಳ್ಳರು ಕಳವು ಮಾಡಲು ಸುಲಭವಾಗಿದೆ. ಬೀಗಗಳನ್ನು ಮುರಿದು ದೋಚಲು ಸುಲಭವಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಸ್ಥಳೀಯರು ಅಂಜನಾದ್ರಿ ಬೆಟ್ಟಕೆ ಸಂಪರ್ಕಿಸುವ ಮುಖ್ಯ ರಸ್ತೆಗಳಿಗೆ ವಿದ್ಯತ್ ದೀಪ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಂಬಂಧಿಸಿದ ಇಲಾಖೆ ಇದಕ್ಕಕೆ ಸ್ಪಂಧಿಸಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ.

ದೇವಸ್ಥಾನದ ಕಮಿಟಿ ಕೂಡಲೇ ರಸ್ತೆಗಳಲ್ಲಿ ಸಾಲಾಗಿ ವಿದ್ಯುತ್ ದೀಪ ಅಳವಡಿಸಿಬೇಕು ಹಾಗೂ ಪೋಲೀಸರು 24 ಗಂಟೆಗಳ ಕಾಲ ಬೆಟ್ಟದ ಬಳಿ ಗಸ್ತು ಹೆಚ್ಚಿಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...