ಕೊಪ್ಪಳ | ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸುವುದು ನಿಯಮ ಉಲ್ಲಂಘನೆ: ಎಸ್‌ ಎ ಗಫಾರ್

Date:

ಕೊಪ್ಪಳ ತಾಲೂಕಿನ ಗಿಣಿಗೇರಿ ಭಾಗದಲ್ಲಿ ಅನೇಕ ಕಾರ್ಖಾನೆಗಳು ನಿಯಮ ಉಲ್ಲಂಘಿಸಿ ಜನವಸತಿ ಪ್ರದೇಶಗಳಲ್ಲಿ ಸ್ಥಾಪನೆಯಾಗಿವೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌ ಎ ಗಫಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಗ್ರಾಮೀಣ ಹಾಗೂ ನಗರದ ಬೀದಿಗಳಲ್ಲಿ ಎಂಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ಹಾಗೂ ಅಣುಸ್ಥಾವರ ಸ್ಥಾಪನೆ ವಿರುದ್ಧ ಜನಜಾಗೃತಿ ಬೀದಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕಾರ್ಖಾನೆಗಳು ಜನವಸತಿ ಪ್ರದೇಶಗಳಿಂದ ಸಾಕಷ್ಟು ದೂರ ಇರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರಿಗೆ ಯಾವುದೇ ರೀತಿಯ ಕೆಟ್ಟ ದುಷ್ಪರಿಣಾಮಗಳು ಆಗಬಾರಎಂಬ ಕಾಯ್ದೆ ಇದ್ದರೂ ಕೂಡಾ ಕಾಯ್ದೆ, ನಿಯಮ ಎಲ್ಲವನ್ನೂ ಉಲ್ಲಂಘನೆ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾಯಿತ ಪ್ರತಿನಿಧಿಗಳು ಅದರ ಲಾಭ ಉಡಾಯಿಸಿ ಕಾರ್ಖಾನೆಗಳನ್ನು ಸ್ಥಾಪನೆ ಮಾಡಿದ್ದರಿಂದ ಸುಮಾರು 30ಕ್ಕೂ ಹೆಚ್ಚು ಹಳ್ಳಿಗಳು ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ. ಆ ಹಳ್ಳಿಗಳ ಮನೆಗಳಲ್ಲಿ ಕಾರ್ಖಾನೆಗಳ ಬೂದಿ ಬೀಳುತ್ತಿದೆ. ಇದರಿಂದ ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಪ್ರಬಲವಾಗಿ ಬೆಳೆದಿರುವ ಕಾರ್ಖಾನೆಗಳಿಂದ ಸ್ಥಳೀಯ ಜನರಿಗೆ ಯಾವುದೇ ಲಾಭವಾಗುತ್ತಿಲ್ಲ” ಎಂದು ದೂರಿದರು.

“ಈ ಭಾಗದ ಜನರಿಗೆ ಉದ್ಯೋಗ ಕೊಡುತ್ತೇವೆಂದು ಬಂದು ಕಾರ್ಖಾನೆಗಳನ್ನು ಸ್ಥಾಪಿಸಿ, ಸ್ಥಳೀಯರಿಗೆ ಸಣ್ಣಪುಟ್ಟ ಹುದ್ದೆಗಳನ್ನು ನೀಡಿ, ಬೇರೆ ರಾಜ್ಯದವರಿಗೆ ಉನ್ನತ ಹುದ್ದೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಹೊಲ ಕೊಟ್ಟವರು ಯಾವುದೇ ಲಾಭವಿಲ್ಲದೆ ಬೀದಿಪಾಲಾಗಿದ್ದಾರೆ. ಎಂಎಸ್‌ಪಿಎಲ್ ಕಾರ್ಖಾನೆ ಹಳ್ಳಿಗಳಲ್ಲಷ್ಟೇ ಅಲ್ಲದೆ ಜಿಲ್ಲಾಧಿಕಾರಿ ಕಚೇರಿವರೆಗೂ ವಿಸ್ತರಣೆಯಾಗುತ್ತ ಬಂದಿದೆ” ಎಂದರು.

“ನಮ್ಮ ಜಿಲ್ಲೆಯಲ್ಲಿ ಅಣುಸ್ಥಾವರ ಸ್ಥಾಪಿಸಬಾರದು. ಮುಂದಿನ ಪೀಳಿಗೆಗೆ ಯಾವುದೇ ತೊಂದರೆಯಾಗಬಾರದು ಅಂದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಲು ಮುಂದಾಗಬೇಕು. ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಫೆಬ್ರವರಿ 22ರಂದು ಸಾಹಿತ್ಯ ಭವನದಲ್ಲಿ ಕಾರ್ಯಕ್ರಮವಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಿರಂತರವಾಗಿ ಈ ಹೋರಾಟ ನಡೆಯುತ್ತದೆ” ಎಂದು ತಿಳಿಸಿದರು.

ಜನರು ಈಗಲಾದರೂ ಜಾಗೃತರಾಗಿ ಹೋರಾಡಿ ಕಂಪನಿಗಳನ್ನು ಜಿಲ್ಲೆಯಿಂದ ಹೊರಗೆ ಹಾಕದಿದ್ದರೆ, ಕೊಪ್ಪಳ ನಗರ ಮತ್ತು ಗ್ರಾಮೀಣ ಜನರು ಕಾರ್ಖಾನೆ ಧೂಳಿನಿಂದ ಭಾದಿತರಾಗಬೇಕಾಗುತ್ತದೆ. ಈಗಲಾದರೂ ಎಚ್ಚೆತ್ತುಕೊಂಡು ಹೋರಾಟ ಮಾಡದಿದ್ದರೆ ಮುಂದಿನ ಪೀಳಿಗೆಯ ಭವಿಷ್ಯ ಮಂಕಾಗುತ್ತದೆ. ಆದ್ದರಿಂದ ತೀವ್ರ ಹೋರಾಟಕ್ಕೆ ಕೊಪ್ಪಳ ನಗರದ ಹಾಗೂ ಧೂಳು ಬಾಧಿತ ಗ್ರಾಮೀಣ ಜನರು ಮುಂದಾಗಬೇಕು” ಎಂದು ಕರೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡಲು ಸ್ಲಂ ಜನಾಂದೋಲನ ಒತ್ತಾಯ

ಕೊಪ್ಪಳ ನಗರ, ಹಾಲವರ್ತಿ, ಬೆಳವಿನ ಹಾಳ, ಬೇವಿನ ಹಳ್ಳಿ, ಹುಲಿಗಿ, ಹೊಸ ಕನಕಪುರ, ಹಳೆಯ ಕನಕಪುರದಲ್ಲಿ ಆಂದೋಲನ ಜರುಗಿತು. ಇಂದು ಕಾಸನಕಂಡಿ, ಚಿಕ್ಕ ಬಗನಾಳ, ಕುಣಿಕೇರಿ, ಕುಣಿಕೇರಿ ಲಾಚನಕೇರಿ ಮುಂತಾದ ಗ್ರಾಮಗಳಲ್ಲಿ 2ನೇ ದಿನದ ಕಾರ್ಯಕ್ರಮ ಜರುಗಿತು.

ಕರ್ನಾಟಕ ರೈತ ಸಂಘದ ರಾಜ್ಯ ಆಧ್ಯಕ್ಷ ಡಿ ಎಚ್ ಪೂಜಾರ, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ್, ಎಐಯುಟಿಯುಸಿ ಮುಖಂಡ ಎಶರಣು ಗಡ್ಡಿ, ಕೆಆರ್‌ಎಸ್‌ನ ಜಿಲ್ಲಾ ಕಾರ್ಯದರ್ಶಿ ಬಸವರಾಜ ಪೂಜಾರ ನರೆಗಲ್, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮುದಕಪ್ಪ ಹೊಸಮನಿ ನರೆಗಲ್, ರಾಘು ಚಾಕರಿ,‌ ಸುಂಕೇಶ, ಕರ್ನಾಟಕ ವಿದ್ಯಾರ್ಥಿ ಸಂಘ(ಕೆವಿಎಸ್) ದುರುಗೇಶ ಬರಗೂರ, ಯಮನೂರ,‌ ಮಾರುತಿ, ವಿದ್ಯಾರ್ಥಿನಿ ಯಮುನಾ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...