ಕೊಪ್ಪಳ | ರಾಷ್ಟ್ರೀಯ ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ

Date:

ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ 39ನೇ ರಾಷ್ಟ್ರೀಯ ಸಬ್-ಜೂನಿಯರ್ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ ಪಡೆದು ಕೊಪ್ಪಳ ಜಿಲ್ಲೆಗೆ ಹೆಸರು ತಂದಿದ್ದಾಳೆ.

ಎವ್‌ಬಿ‌ಎಐ ಹಾಗೂ ಕೆಎಸ್‌ಎಚ್‌ಬಿ‌ಎ ಕ್ರೀಡಾಕೂಟದಲ್ಲಿ ದೇಶದ 27 ರಾಜ್ಯಗಳ ತಂಡಗಳು ಭಾಗವಹಿಸಿವೆ. ಕರ್ನಾಟಕವನ್ನು ಪ್ರತಿನಿಧಿಸಿದ ಗಂಗಾವತಿಯ ಸ್ವಾತಿ ಹಾಗೂ ರಾಮು ಅವರ ಪುತ್ರಿ ಜಾಗೃತಿ ಶ್ರೇಷ್ಠ ಪ್ರದರ್ಶನ ನೀಡಿ ತಂಡದೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಜಾಗೃತಿಗೆ ಬೇತಲ್ ಶಿಕ್ಷಣ ಸಂಸ್ಥೆಯ ಯಮನೂರ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಹ್ಯಾಂಡ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಮುಖ್ಯ ತರಬೇತುದಾರರಾಗಿ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಹಾಗೂ ಕೊಪ್ಪಳ ಜಿಲ್ಲೆಯ ಕೀರ್ತಿ ತಂದ ಮಗಳ ಯಶಸ್ಸು ಕಂಡು ತಾಯಿ-ತಂದೆ, ಶಾಲೆಯ ಶಿಕ್ಷಕರು ಹಾಗೂ ಸಹಪಾಠಿಗಳು ಹರ್ಷಿತರಾಗಿ ಜಾಗೃತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಆಟೋ ಪಲ್ಟಿ : 65 ವರ್ಷದ ಮಹಿಳೆ ಸಾವು

ಈ ಸಾಧನೆಗಾಗಿ ಕೊಪ್ಪಳ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಷನ್‌ನ ಅಧ್ಯಕ್ಷ ಕೆ ದುರ್ಗೇಶ್ ಹೊಸಕೇರಿ ಹಾಗೂ ಸದಸ್ಯರು ಜಾಗೃತಿಗೆ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...