ಗಣೇಶ ಚತುರ್ಥಿ ಪ್ರತಿಷ್ಠಾಪನೆ ದಿನ ಹಾಗೂ ವಿಸರ್ಜನೆ ದಿನ ಡಿಜೆ ಬಳಕೆಗೆ ಸುಪ್ರೀಂ ಕೋರ್ಟ್ ನಿಷೇಧದ ಆದೇಶ ಹೊರಡಿಸಿದ್ದರೂ ಕೊಪ್ಪಳದ ಹೊಸಪೇಟೆಯ ಬೈಪಾಸ್ ಹೆದ್ದಾರಿಯಲ್ಲಿ ಗಣೇಶ ವಿಸರ್ಜನೆ ದಿನ(ನಿನ್ನೆ ರಾತ್ರಿ 11-30ರವರೆಗೂ) ಡಿಜೆ ಬಳಕೆ ಮಾಡಿದ್ದರೂ ಎಸ್ಪಿ ಮೌನ ವಹಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪೊಲೀಸರೇ ಸಾರ್ವಜನಿಕ ಶಾಂತಿ ಸಭೆ ಕರೆದು ಡಿಜೆ ಕುರಿತು ಸುಪ್ರೀಂಕೋರ್ಟ್ ಆದೇಶದ ಬಗ್ಗೆ ತಿಳಿ ಹೇಳಿದ್ದಾರೆ ಹಾಗೂ ಅದನ್ನು ಬಳಸಿ ಸಾರ್ವಜನಿಕರಿಗೆ ಕರ್ಕಶವಾದ ತೊಂದರೆಯಾಗಬಾರದೆಂದು ಹೇಳಿದ್ದಾರೆ. ಈಗ ಗಣೇಶ ವಿಸರ್ಜನೆ ದಿನ ಡಿಜೆ ಬಳಸಿದರೂ ಕೂಡ ಹತ್ತಿರದಲ್ಲೇ ಇರುವ ಗ್ರಾಮೀಣ ಹಾಗೂ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದಬನ್ನು ಸಾರ್ವಜನಿಕರು ಖಂಡಿಸಿದ್ದಾರೆ.
ಕೆಲವು ದಿನಗಳ ಹಿಂದೆಯೂ ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಶನಿವಾರ ಸಂಜೆ 6:30ರಿಂದ ಆರಂಭವಾದ ಡಿಜೆ ಶಬ್ಧ ರಾತ್ರಿ 12:15ರವರೆಗೂ ಬಳಕೆ ಮಾಡಲಾಗಿತ್ತು. ಈ ಕುರಿತು ‘ಈ ದಿನ.ಕಾಮ್’ನಲ್ಲಿ ವರದಿಯಾಗಿತ್ತು. ಪೊಲೀಸರು ಸಂಘಟನೆಗಳ ಹಾಗೂ ಜನಪ್ರತಿನಿಧಿಗಳ ಒತ್ತಡದ ಒಲೈಕೆಗೊಳಗಾದರೇ? ಎಂಬುದನ್ನು ಕೊಪ್ಪಳ ಹಿರಿಯ ನಾಗರಿಕರು ಸಂಶಯವನ್ನು ವ್ಯಕ್ತಪಡಿಸಿತ್ತಿದ್ದಾರೆ.
“ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಧಾರ್ಮಿಕ ಮುಖಂಡರ ಹಾಗೂ ಎಲ್ಲ ಧಾರ್ಮಿಕ ಸಂಘಟನೆಗಳಿಗೆ ಶಾಂತಿ ಸಭೆ ಕರೆದು ಡಿಜೆ ಸಿಸ್ಟಮ್ಗಳನ್ನು ಬಳಸುವಂತಿಲ್ಲವೆಂದು ಕಡ್ಡಾಯವಾಗಿ ಸೂಚನೆ ನೀಡಿದ್ದರು. ಆದರೂ ನಗರದಲ್ಲಿ ಡಿಜೆ ಸಿಸ್ಟಮ್ನ ಕರ್ಕಶ ಶಬ್ದಕ್ಕೆ ಹೃದ್ರೋಗ ಪೀಡಿತರು, ಗರ್ಭಿಣಿಯರು, ಹಸುಗೂಸುಗಳು ಭಯಗೊಳ್ಳುವಂತ ವಾತಾವರಣ ಸೃಷ್ಟಿಯಾಗಿತ್ತು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಲಂಚ ಸ್ವೀಕಾರ ಪ್ರಕರಣ: ಲೋಕಾಯುಕ್ತ ಬಲೆಗೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ, ಬಿಲ್ ಕಲೆಕ್ಟರ್
“ಡಿಜೆಯ ಅತಿಯಾದ ಶಬ್ದಕ್ಕೆ ಮನೆಯೊಳಗಿನ ಪರಿಕರಗಳು ಅಲುಗಾಡುತ್ತಿದ್ದವು. ಮನೆಯ ಅಂಗಳಗಳಲ್ಲಿ ನಡುಗುವಂತಹ ಶಬ್ದ ಮಾಡುತ್ತಿದ್ದವು. ನ್ಯಾಯಾಲಯದ ನಿಷೇಧದ ಆದೇಶವಿದ್ದರೂ ಪೊಲೀಸ್ ಮೌನವಹಿಸಿದ್ಯಾಕೆ? ಇದಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿಯವರ ಗಮನಕ್ಕೆ ಬಂದಿಲ್ಲವೇ ಅಥವಾ ಸುಪ್ರೀಂಕೋರ್ಟ್ನ ಆದೇಶ ಸರಿಯಾಗಿ ಓದಿಲ್ಲವೆ” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.





