ಕೊಪ್ಪಳ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಿರೇಬೊಮ್ಮನಾಳ ಗ್ರಾಮದ ಚರಂಡಿಗಳು ತುಂಬಿ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ.

ಗ್ರಾಮದ ಎಸ್‌ಸಿ ಕಾಲನಿಯ ಕುಡಿಯುವ ನೀರಿನ ಟ್ಯಾಂಕ್ ಸುತ್ತಲೂ ಗಿಡಗಂಟೆ ಬೆಳೆದಿದ್ದು, ವಿಷಜಂತುಗಳ ವಾಸಸ್ಥಾನವಾಗಿದೆ. ಟ್ಯಾಂಕ್ ಸುತ್ತಲೂ ಕೊಳಚೆ ನೀರು ಸಂಗ್ರಹವಾಗಿದ್ದು, ಗಬ್ಬು ವಾಸನೆ ಬೀರಲಾರಂಭಿಸಿದೆ. ಇದರಿಂದ ಗ್ರಾಮದಲ್ಲೀಗ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

“ಗ್ರಾಮದ ದಲಿತ ಕಾಲನಿ ಪ್ರಮುಖ ಓಣಿಗಳಲ್ಲಿ ಮನೆಮುಂದೆ ಕೊಳಚೆ ನೀರು ಸಂಗ್ರಹವಾಗಿದ್ದು, ಓಡಾಡಲು ದಾರಿ ಇಲ್ಲದಂತಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಬೇಕಾದ ಗ್ರಾಮ ಪಂಚಾಯಿತಿ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ” ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಬ್ಬೆದ್ದು ನಾರುತ್ತಿರುವ ಚರಂಡಿ 1 1

“ಚರಂಡಿ ಸ್ವಚ್ಛಗೊಳಿಸುವ ಕುರಿತು ಗ್ರಾಮದ ಯುವಕರು ಮೂರ್ನಾಲ್ಕು ಬಾರಿ ಗ್ರಾಮ ಪಂಚಾಯಿತಿ ಪಿಡಿಒ ಯಮನೂರಪ್ಪ ಬೊಮ್ಮನಾಳ ಅವರಿಗೆ ಮನವಿ ಮಾಡಿದರೂ ಕೂಡ ಅಧಿಕಾರಿ ಕ್ಯಾರೆ ಎಂದಿಲ್ಲ. ಗ್ರಾ.ಪಂ ಸದಸ್ಯರ ಗಮನಕ್ಕೆ ತಂದರೂ ಕೂಡ ಅದಕ್ಕೂ ನಮಗೂ ಸಂಬಂಧ ಇಲ್ಲವೇನೋ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಾ ಬಿ ಆರ್ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹಾದೇವಪ್ಪ ಹರಿಜನ ಮಾತನಾಡಿ, “ಗ್ರಾಮದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ. ಊರೊಳಗೆ ಯಾವುದೇ ಓಣಿಗೆ ಹೋದರೂ ಕೂಡ ಕಾಲಿಡಲು ಜಾಗ ಇಲ್ಲದಂತಾಗಿದೆ. ಮಲಿನವಾದ ನೀರು ರಸ್ತೆ ಮೇಲೆ ಹರಿದು, ರಸ್ತೆಯಲ್ಲಾ ಕೊಳಚೆಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಬೆಣ್ಣೆʼ ಹಚ್ಚುವುದಕ್ಕೆ ಮಾತ್ರ ಜಿಲ್ಲೆ ಸೀಮಿತವಾ? ಬಜೆಟ್‌ನಲ್ಲಿ ಜಿಲ್ಲೆ ಮರೆತ ಸಿಎಂ, ಜನರ ಬೇಸರ

“ಕುಡಿಯುವ ನೀರಿನ ಟ್ಯಾಂಕರ್ ಸುತ್ತಲು ಹೊಲಸು ತುಂಬಿಕೊಂಡಿದೆ. ಪ್ರಾಣಿಗಳೂ ಕೂಡ ಟ್ಯಾಂಕ್ ನೀರನ್ನು ಕುಡಿಯಲು ಹಿಂಜರಿಯುತ್ತವೆ. ಅಷ್ಟೊಂದು ತ್ಯಾಜ್ಯದಿಂದ ತುಂಬಿದೆ. ಪಿಡಿಒ ಅವರಿಗೆ ನಾಲ್ಕೈದು ಬಾರಿ ಮನವಿ ಮಾಡಿದ್ದೇವೆ. ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ತಾ.ಪಂ, ಜಿ.ಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ” ಎಂದರು.

ವರದಿ : ಸಿಟಿಜನ್‌ ಜರ್ನಲಿಸ್ಟ್‌- ಬಸವರಾಜ್ ಬೋದುರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...