ಕೊಪ್ಪಳ | ಗಾಂಜಾ ಬೆಳೆಯುವುದು ಕಂಡು ಬಂದರೆ ಕಠಿಣ ಕ್ರಮ: ಡಿಸಿ ಸುರೇಶ್‌ ಇಟ್ನಾಳ

Date:

ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಹಾಗೂ ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಮಾಧಕ ವಸ್ತುಗಳ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ನಿಷೇಧ ಕುರಿತು ಜಾಗೃತಿ ಮೂಡಿಸಲು ಸಮಿತಿಗಳನ್ನು ರಚಿಸಿ ವರದಿ ನೀಡಬೇಕು” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಈಗ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸೀಜನ್ ಆಗಿರುವುದರಿಂದ ಆನೆಗೊಂದಿ ಭಾಗದಲ್ಲಿರುವ ಎಲ್ಲಾ ಹೋಂಸ್ಟೆ, ರೆಸಾರ್ಟ್, ಡಾಭಾಗಳು, ಹೋಟೆಲ್, ಪಾನಬೀಡಾ ಅಂಗಡಿಗಳಲ್ಲಿ ಮಾಧಕ ವಸ್ತುಗಳ ಮಾರಾಟದ ಬಗ್ಗೆ ಪರಿಶೀಲನೆ ನಡೆಸುವುದರ ಜೊತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಬೇಕು. ಈ ಕೆಲಸ ವಿಶೇಷವಾಗಿ ವೀಕೆಂಡನಲ್ಲಿ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, “ಜಿಲ್ಲೆಯ ಯಾವುದೇ ಭಾಗದಲ್ಲಿ ಮಾಧಕ ವಸ್ತುಗಳ ಮಾರಾಟ ಕಂಡು ಬಂದಲ್ಲಿ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ನಿರ್ದೆಶನ ನೀಡಿದ್ದೆನೆ. ಕೂಕನಪಳ್ಳಿ ಸಂತೆಯ ದಿನ ಜನರು ರಸ್ತೆಯ ಮೇಲೆ ಕುಳಿತು ‘ಮದ್ಯ ಮಾರಾಟ ಮಾಡುತ್ತಾರೆ’ ಎನ್ನುವ ದೂರುಗಳಿಗೆ ತಕ್ಷಣ ಅದನ್ನು ನಿಲ್ಲಿಸಬೇಕು” ಎಂದು ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್, ಸಹಾಯಕ ಔಷಧ ನಿಯಂತ್ರಣಾಧಿಕಾರಿಗಳು, ಅಬಕಾರಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...