ಕೊಪ್ಪಳ | ಕುಡಿಯುವ ನೀರಿಗಾಗಿ ಪರದಾಟ; ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹ

Date:

ಕೊಪ್ಪಳದ ಗಂಗಾವತಿ ನಗರದ ಹಲವು ಓಣಿಗಳಲ್ಲಿ ಕಳೆದ 3-4 ದಿನದಿಂದ‌ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ತೆರೆದ ಚರಂಡಿಯಿಂದ‌ ತ್ಯಾಜ್ಯ ವಿಲೇವಾರಿಯಾಗದಿರುವುದು ನಿತ್ಯ ತೀವ್ರ ಸಂಕಷ್ಟಕ್ಕೀಡುಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ಶೀಘ್ರವೇ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ನಗರ ನಿವಾಸಿಗಳು ಆಗ್ರಹಿಸಿದರು.

ಗಂಗಾವತಿ ನಗರದ ಮುರಾರಿ ಕ್ಯಾಂಪ್, ಲಕ್ಷ್ಮಿ ಕ್ಯಾಂಪ್, ಗುಂಡಮ್ಮ ಕ್ಯಾಂಪ್ ಬೈಪಾಸ್, ಗೌಳಿ ಮಹಾದೇವಪ್ಪ ರಸ್ತೆ ವಿವಿಧ ಬಡಾವಣೆಯಲ್ಲಿ ರಸ್ತೆ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಕಳೆದ 3 ದಿನಗಳಿಂದ ಕುಡಿಯುವ ನೀರು ಬಾರದೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ಚರಂಡಿಯಿಂದ ತೆಗೆದ ಕಸವನ್ನು ವಿಲೇವಾರಿ ಮಾಡದೆ ಅಲ್ಲಿಯೇ ಪಕ್ಕದಲ್ಲಿ ಬಿಟ್ಟಿರುವುದರಿಂದ ಬಡಾವಣೆಯ ನಿವಾಸಿಗಳಿಗೆ ಸಂಚರಿಸಲು ಹಾಗೂ ಮನೆಗಳ ಮುಂದೆ ಕೆಸರಿನಿಂದ ಕಲುಷಿತದಿಂದ ನೈರ್ಮಲ್ಯವಾಗಿರುತ್ತದೆ. ಚರಂಡಿಯಿಂದ ತೆಗೆದ ತ್ಯಾಜ್ಯದಿಂದ ದುರ್ವಾಸನೆ ಹೆಚ್ಚಾಗಿದ್ದು ಸೊಳ್ಳೆಗಳ ಕಾಟ ಹೆಚ್ಚಾಗಿ ರೋಗಗಳು ಹರಡುತ್ತಿವೆ ಎಂದು ಸ್ಥಳೀಯರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ತಿರಸ್ಕೃತ ಸಸಿಯಿಂದಲೇ ಲಾಭದ ಬದುಕು! ನಿಂಬೆ ಬೆಳೆದು ಯಶಸ್ಸು ಕಂಡ ರೈತ ಗವಿಸಿದ್ದಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಕೆಗೆ ಹಾಗೂ ಕುಡಿಯಲು ನೀರಿನ ಅಭಾವ ಹೆಚ್ಚಾಗಿದ್ದು ನಗರಸಭೆಯವರು ನೀರು ಪೂರೈಕೆ ಮಾಡಬೇಕು ಮತ್ತು ಚರಂಡಿಯ ಕಸವನ್ನು ಬೇಗ ವಿಲೇವಾರಿ ಮಾಡಿ ಸಾರ್ವಜನಿಕರಗೆ ಅನುಕೂಲ ಮಾಡಿಕೊಡಬೇಕು. ಪ್ರತಿ ಬಾರಿಯೂ ಹಬ್ಬದ ಸಂದರ್ಭದಲ್ಲಿಯೇ ನಗರಸಭೆಯವರು ನಗರದ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರನ್ನು ತಾಂತ್ರಿಕ ತೊಂದರೆಯ ನೆಪದಲ್ಲಿ ಬಿಡುತ್ತಿಲ್ಲ. ಆದ್ದರಿಂದ, ನಗರಸಭೆಯವರು ಹಬ್ಬದ ಸಂದರ್ಭದಲ್ಲಿ ನಿರಂತರವಾಗಿ ನೀರನ್ನು ಬಿಡುವ ಮೂಲಕ ಕುಡಿಯಲು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮಹಿಳೆಯರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...